ಗುಡ್ಡಮ್ಮಾಡಿ: ಜೀವದ ಹಂಗು ತೊರೆದು ಬಾವಿಗಿಳಿದ 108 ಚಾಲಕ ಶ್ರೀಧರ್


Team Udayavani, May 28, 2020, 4:43 PM IST

ಗುಡ್ಡಮ್ಮಾಡಿ: ಜೀವದ ಹಂಗು ತೊರೆದು ಬಾವಿಗಿಳಿದ 108 ಚಾಲಕ ಶ್ರೀಧರ್

ಕುಂದಾಪುರ: ಗುಡ್ಡಮ್ಮಾಡಿಯಲ್ಲಿ ಬಾವಿ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಾವಿಗೆ ಬಿದ್ದ ವ್ಯಕ್ತಿ ಹಾಗೂ ಅವರನ್ನು ರಕ್ಷಿಸಲು ಇಳಿದವರು ಆಮ್ಲಜನಕ ಕೊರತೆಯಿಂದ ಅಸ್ವಸ್ಥಗೊಂಡಿದ್ದು, ಈ ವೇಳೆ ಅಲ್ಲಿಗೆ ಬಂದ ಕಿರಿಮಂಜೇಶ್ವರ 108 ಆಂಬುಲೆನ್ಸ್‌ನ ಚಾಲಕ ಶ್ರೀಧರ್‌ ಅವರು ಜೀವದ ಹಂಗು ತೊರೆದು ಬಾವಿಗಿಳಿದು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದರು.

ಆ್ಯಂಬುಲೆನ್ಸ್‌ ಚಾಲಕ ಶ್ರೀಧರ್‌ ಅವರ ಸಮಯ ಪ್ರಜ್ಞೆಯು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

11 ಗಂಟೆ ಸುಮಾರಿಗೆ ಕಿರಿಮಂಜೇಶ್ವರ 108 ಆ್ಯಂಬುಲೆನ್ಸ್‌ ವಾಹನಕ್ಕೆ ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯಲ್ಲಿ ಬಾವಿಗೆ ಬಿದ್ದ ಪ್ರಕರಣದ ಕುರಿತಂತೆ ಕರೆ ಬರುತ್ತದೆ. ಕೂಡಲೇ ಅಲ್ಲಿಗೆ ಆಗಮಿಸಿದ 108 ಚಾಲಕ ಶ್ರೀಧರ್‌ ಹಾಗೂ ಸಿಬಂದಿ ನೋಡುವಾಗ ಇಬ್ಬರು ಕೂಡ ಬಾವಿಯಲ್ಲಿ ಅಸ್ವಸ್ಥರಾಗಿದ್ದರು. ಈ ವೇಳೆ ಅಗ್ನಿಶಾಮಕ ದಳದವರು ಬರುವವರೆಗೆ ಕಾಯುವಷ್ಟು ಸಮಯವಿಲ್ಲವಾದ್ದರಿಂದ ಹಿಂದೆ ಮುಂದೆ ನೋಡದ ಚಾಲಕ ಶ್ರೀಧರ್‌ ಬಾವಿಗೆ ಇಳಿದಿದ್ದಾರೆ. ಮೊದಲಿಗೆ ವಾಲ್ಟರ್‌ ಡಿ’ಅಲ್ಮೇಡಾ ಅವರನ್ನು ನಾಜೂಕಾಗಿ ಮೇಲಕ್ಕೆತ್ತುವ ಕೆಲಸ ಮಾಡಿದ್ದಾರೆ. ಬಳಿಕ ಇನ್ನೊಬ್ಬರನ್ನು ಮೇಲಕ್ಕೆತ್ತಲು ಸ್ಥಳೀಯರೊಂದಿಗೆ ಸೇರಿ ಮೇಲೆಕ್ಕೆತ್ತಿದ್ದಾರೆ. ಇಬ್ಬರನ್ನು ಮೇಲಕ್ಕೆತ್ತಿದ ಬಳಿಕ ಸ್ಥಳದಲ್ಲಿ ಕಿರಿಮಂಜೇಶ್ವರದ ಸ್ಟಾಫ್‌ ನರ್ಸ್‌ (ಇಎಂಟಿ) ಸಹನಾ ಅವರು ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ ಮಾಡಿ ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಕೂಡ ಅಷ್ಟರಲ್ಲಾಗಲೇ ವಾಲ್ಟರ್‌ ಮೃತಪಟ್ಟಿದ್ದರು.

ಆ್ಯಂಬುಲೆನ್ಸ್‌ ಚಾಲಕ ಶ್ರೀಧರ್‌ ಹಾಗೂ ಸ್ಟಾಪ್‌ ನರ್ಸ್‌ ಸಹನಾ ಅವರ ಸಮಯೋಚಿತ ಕಾರ್ಯದಿಂದಾಗಿ ಬಾವಿಯೊಳಗೆ ಅಸ್ವಸ್ಥಗೊಂಡಿದ್ದ ಅಲ್ಬನ್‌ ಅಲ್ಮೇಡ ಅವರನ್ನು ಬದುಕಿಸಲು ಸಾಧ್ಯವಾಗಿದ್ದು, ಇವರ ಈ ಕೆಲಸಕ್ಕೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.