ನನೆಗುದಿಗೆ ಗಂಗೊಳ್ಳಿ ಮುಖ್ಯ ರಸ್ತೆ ಕಾಮಗಾರಿ

ಘೋಷಣೆಯಾಗಿ 4- 5 ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲ

Team Udayavani, May 29, 2020, 5:15 AM IST

ನನೆಗುದಿಗೆ ಗಂಗೊಳ್ಳಿ ಮುಖ್ಯ ರಸ್ತೆ ಕಾಮಗಾರಿ

ಗಂಗೊಳ್ಳಿ: ಇಲ್ಲಿನ ಮೀನುಗಾರಿಕೆ ಬಂದರನ್ನು ಸಂಪರ್ಕಿ ಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಇದರ ದುರಸ್ತಿಗೆ ಅನುದಾನ ಘೋಷಣೆಯಾಗಿ 4 5 ತಿಂಗಳುಗಳು ಕಳೆದಿವೆ. ಇನ್ನೂ ಇದರ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಈಗ ಮಳೆಗಾಲ ಆರಂಭವಾದರೆ ಮತ್ತೆ ಈ ರಸ್ತೆಯ ಸಂಚಾರ ಶೋಚನೀಯವಾಗುತ್ತದೆ.

ಗಂಗೊಳ್ಳಿ ಮುಖ್ಯ ರಸ್ತೆಯ 1 ಕಿ.ಮೀ. ವರೆಗಿನ ಕಾಂಕ್ರೀಟೀಕರಣಕ್ಕೆ ಲೋಕೋ ಪಯೋಗಿ ಇಲಾಖೆಯಿಂದ 1.5 ಕೋ.ರೂ. ಅನುದಾನ ಮಂಜೂರಾಗಿತ್ತು. ಕಳೆದ ವರ್ಷ ಮುಖ್ಯ ರಸ್ತೆಯ 700 ಮೀ. ಕಾಂಕ್ರೀಟ್‌ ಕಾಮಗಾರಿ ಆಗಿದ್ದು, ಈ ಸಾಲಿನಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಮುತುವರ್ಜಿಯಲ್ಲಿ ಸುಮಾರು ಒಂದು ಕಿ.ಮೀ. ಉದ್ದ ರಸ್ತೆಯ ಕಾಂಕ್ರೀಟೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 1.5 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರನ್ನು ನಿಗದಿಪಡಿಸಿದ್ದರೂ ಕಾಮಗಾರಿ ಆರಂಭಕ್ಕೆ ಮಾತ್ರ ಮೀನಮೇಷ ಎಣಿಸಲಾಗುತ್ತಿದೆ.

ಯಾವಾಗ ಆರಂಭ?
ಈ ಮೊದಲು ಮಾರ್ಚ್‌ ಅಂತ್ಯಕ್ಕೆ ಕಾಮಗಾರಿ ಆರಂಭಿಸುವ ಭರವಸೆ ಯಿತ್ತು. ಆದರೆ ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಕಾಮಗಾರಿ ಆರಂಭ ಮತ್ತಷ್ಟು ವಿಳಂಬವಾಗಿದೆ. ಲಾಕ್‌ಡೌನ್‌ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸರಕಾರ ರಸ್ತೆ ಕಾಮಗಾರಿ ನಿರ್ವಹಿಸಲು ಅನುಮತಿ ನೀಡಿದ್ದು, ಗಂಗೊಳ್ಳಿ ಮುಖ್ಯ ರಸ್ತೆಯ ಸುಮಾರು 1.5 ಕೋಟಿ ರೂ. ವೆಚ್ಚದ 1 ಕಿ. ಮೀ. ವರೆಗಿನ ರಸ್ತೆ ಕಾಂಕ್ರೀಟ್‌ ಕಾಮಗಾರಿಯನ್ನು ಯಾವಾಗ ಆರಂಭಿಸುತ್ತಾರೆ ಎನ್ನುವುದು ನಾಗರಿಕರ ಪ್ರಶ್ನೆಯಾಗಿದೆ.

ಕುಂದಾಪುರ ಹಾಗೂ ತ್ರಾಸಿ ಕಡೆಯಿಂದ ಗಂಗೊಳ್ಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆಯ ಅನೇಕ ಕಡೆಗಳಲ್ಲಿ ಮಳೆಯಿಂ ದಾಗಿ ಹೊಂಡ   ಗುಂಡಿಗಳು ಬಿದ್ದಿದ್ದು, ಕೆಲವೆಡೆಗಳಲ್ಲಿ ತೇಪೆ ಹಾಕಲಾಗಿದೆ. ಆದರೆ ಕಾಂಕ್ರೀಟೀಕರಣ ಮಂಜೂರಾಗಿರುವ ರಸ್ತೆಯ ಭಾಗಕ್ಕೆ ತೇಪೆ ಹಾಕದೆ ಹಾಗೆಯೇ ಬಿಟ್ಟಿರುವುದರಿಂದ ರಸ್ತೆಯ ಎಲ್ಲೆಡೆ ಹೊಂಡಗುಂಡಿಗಳು ನಿರ್ಮಾಣವಾಗಿವೆ. ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ರಸ್ತೆ ಸಂಪೂರ್ಣ ವಾಗಿ ಹದಗೆಡುವ ಸಾಧ್ಯತೆಯಿದೆ.

ಚರಂಡಿಗೆ ಬೇಡಿಕೆ
ಗಂಗೊಳ್ಳಿಯಿಂದ ತ್ರಾಸಿಯವರೆಗಿನ ಮುಖ್ಯ ರಸ್ತೆಯುದ್ದಕ್ಕೂ ಅನೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವರ್ಷ ರಸ್ತೆಯಲ್ಲಿಯೇ ಮಳೆ ನೀರು ಹರಿದು ಹೋಗುತ್ತಿದೆ. ಈ ಬಾರಿಯ ಕಾಂಕ್ರೀಟ್‌ ಕಾಮಗಾರಿಯೊಂದಿಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿಯನ್ನು ನಿರ್ಮಾಣ ಮಾಡಲಿ ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

ವಾಣಿಜ್ಯ ಚಟುವಟಿಕೆಗೂ ಅಡ್ಡಿ
ಈ ಮುಖ್ಯ ರಸ್ತೆಯು ಕುಂದಾಪುರ, ತ್ರಾಸಿ ಕಡೆಯಿಂದ ಗಂಗೊಳ್ಳಿಯ ಮೀನುಗಾರಿಕೆ ಬಂದರಿಗೆ ತೆರಳುವ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಇಲ್ಲಿನ ಬಂದರಿನಿಂದ ಬೇರೆ ಬೇರೆ ಕಡೆಗಳಿಗೆ ಮೀನು ಸಾಗಾಟ ಮಾಡಲಾಗುತ್ತದೆ. ಮೀನು ಸಾಗಾಟದ ಲಾರಿಗಳು, ಐಸ್‌ ಸಾಗಾಟದ ವಾಹನ, ಮೀನುಗಾರಿಕೆ ಸಲಕರಣೆ ಸಾಗಿಸುವ ವಾಹನಗಳು, ಪ್ರತಿದಿನ ಹತ್ತಾರು ಸರಕಾರಿ ಹಾಗೂ ಖಾಸಗಿ ಬಸ್‌ಗಳು, ಶಾಲಾ ವಾಹನಗಳು, ಕಾರು, ಆಟೋರಿಕ್ಷಾ ಸಹಿತ ಸಾವಿರಾರು ವಾಹನಗಳು ಪ್ರತಿನಿತ್ಯ ಇದೇ ಮಾರ್ಗವಾಗಿ ಸಂಚರಿಸುತ್ತವೆ. ಈ ಹೊಂಡ   ಗುಂಡಿಗಳ ರಸ್ತೆಯಿಂದಾಗಿ ಮೀನು ಗಾರಿಕೆ ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳಿಗೂ ಅಡ್ಡಿಯಾಗುತ್ತಿದೆ.

ಲಾಕ್‌ಡೌನ್‌ನಿಂದ ವಿಳಂಬ
ಗಂಗೊಳ್ಳಿಯ ಮುಖ್ಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 1.5 ಕೋ.ರೂ. ಅನುದಾನ ಮಂಜೂರಾಗಿದೆ. ಟೆಂಡರ್‌ ಕೂಡ ಪೂರ್ಣಗೊಂಡಿತ್ತು. ಆದರೆ ಲಾಕ್‌ಡೌನ್‌ನಿಂದಾಗಿ ಕಾಮಗಾರಿ ಪ್ರಾರಂಭಿಸಲು ವಿಳಂಬವಾಗಿದೆ. ಇನ್ನು ಮಳೆಗಾಲ ಕೂಡ ಆರಂಭವಾಗುವುದರಿಂದ ಕಾಮಗಾರಿ ಕಷ್ಟ. ಮಳೆಗಾಲ ಮುಗಿದ ತತ್‌ಕ್ಷಣ ಆರಂಭಿಸಲು ಸೂಚನೆ ನೀಡಲಾಗುವುದು.
 ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.