ಬದುಕು ಬದಲಾಗಿದೆ, ನಾವೂ ಬದಲಾಗೋಣ; ಬ್ಯಾಂಕ್‌ ವ್ಯವಹಾರ: ಏನು? ಹೇಗೆ?


Team Udayavani, May 29, 2020, 5:00 AM IST

ಬ್ಯಾಂಕ್‌ ವ್ಯವಹಾರ: ಏನು? ಹೇಗೆ?

ಸಾಂದರ್ಭಿಕ ಚಿತ್ರ.

ಬ್ಯಾಂಕಿಂಗ್‌ ಕ್ಷೇತ್ರ ಇಂದು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಹಣಕಾಸಿಗೆ ಸಂಬಂಧಿಸಿದ ಹೆಚ್ಚಿನ ಎಲ್ಲ ವ್ಯವಹಾರಗಳು ಬ್ಯಾಂಕ್‌ ಖಾತೆಯ ನೆರವಿನಿಂದಲೇ ನಡೆಯುತ್ತಿದೆ. ಕೋವಿಡ್‌-19 ಆತಂಕದ ನಡುವೆ ಇಲ್ಲಿ ಯಾವ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲಿದೆ ಮಾಹಿತಿ.

ವೇತನದಿಂದ ಪಿಂಚಣಿಯವರೆಗೆ, ಸಹಾಯಧನದಿಂದ ವಿವಿಧ ನೆರವಿನವರೆಗೆ ಎಲ್ಲವೂ ಈಗ ಬ್ಯಾಂಕ್‌ ಖಾತೆಗಳನ್ನೇ ಆಶ್ರಯಿಸಿದೆ. ಜನಧನ ಖಾತೆ ಆರಂಭವಾದ ಬಳಿಕವಂತೂ ಬಡವರೂ ಬ್ಯಾಂಕ್‌ ವ್ಯವಹಾರಗಳಿಗೆ ಒಗ್ಗಿಕೊಳ್ಳುವಂತಾಯಿತು. ಕೋವಿಡ್‌-19 ಸಂಕಷ್ಟ ಕಾಲದಲ್ಲಿ ಇಡೀ ದೇಶವೇ ಲಾಕ್‌ಡೌನ್‌ ಆಗಿ ಬಹುತೇಕ ಎಲ್ಲ ಕೆಲಸ ಕಾರ್ಯಗಳು ಸ್ಥಹಿತಗೊಂಡರೂ ಬ್ಯಾಂಕ್‌ ವ್ಯವಹಾರಗಳು ನಿರಾತಂಕವಾಗಿ ನಡೆದಿವೆ. ಜನಧನ ಖಾತೆಗೆ ಜಮಾ ಆಗಿರುವ ಹಣವನ್ನು ಜನರಿಗೆ ತಲುಪಿಸುವುದು ಸಹಿತ ಇತರ ಅಗತ್ಯಗಳನ್ನು ಪೂರೈಸಿವೆ. ಇದೇ ಸಂದರ್ಭ ವ್ಯವಹಾರದ ಸಂದರ್ಭ ಸಾಕಷ್ಟು ಮುನ್ನೆಚ್ಚರಿಕೆಗಳನ್ನೂ ತೆಗೆದುಕೊಳ್ಳಲಾಗಿದೆ. ಆರಂಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಅಲ್ಲಿನ ನಿಯಮಾವಳಿಗಳು ಸ್ವಲ್ಪ ಕಿರಿ ಕಿರಿ ಅನಿಸಿದರೂ ಈಗ ಜನರು ಅದಕ್ಕೆ ಹೊಂದಿಕೊಂಡಿದ್ದಾರೆ. ಮುಂದೆಯೂ ಮುಂಜಾಗ್ರತೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವ್ಯವಹಾರ ನಡೆಸುವುದು ಎಲ್ಲರ ಜವಾಬ್ದಾರಿಯೂ ಆಗಿರುತ್ತದೆ.

ಈಗ ಆನ್‌ಲೈನ್‌ ಬ್ಯಾಂಕಿಂಗ್‌, ಡಿಜಿಟಲ್‌
1. ಬ್ಯಾಂಕಿಂಗ್‌ ಮತ್ತಿತರ ಸೇವೆಗಳು ಇರುವುದರಿಂದ ಎಲ್ಲ ಬ್ಯಾಂಕ್‌ ವ್ಯವಹಾರಗಳಿಗಾಗಿ ಬ್ಯಾಂಕ್‌ಗೆ ಬರಬೇಕಾದ ಅಗತ್ಯವಿಲ್ಲ. ತೀರಾ ಅನಿವಾರ್ಯವೆನಿಸಿದರೆ ಮಾತ್ರ ಬ್ಯಾಂಕಿಗೆ ಬಂದು ಕೆಲಸ ಮಾಡಿಸಿಕೊಳ್ಳಬಹುದು.

2. ಖಾಸಗಿ ಆ್ಯಪ್‌ ಗಳಿಗಿಂತ ಭೀಮ್‌ನಂತಹ ಸರಕಾರಿ ಆ್ಯಪ್‌ಗ್ಳು ಅಥವಾ ನಿಮ್ಮ ಖಾತೆಯಿರುವ ಬ್ಯಾಂಕ್‌ಗಳ ಅಧಿಕೃತ ಆ್ಯಪ್‌ ಗಳನ್ನು ಬಳಸಿ. ಅದು ಹೆಚ್ಚು ಸುರಕ್ಷಿತ. ಅದೂ ಅಲ್ಲದೆ ಎಲ್ಲ ಬ್ಯಾಂಕ್‌ಗಳು ಸಹಾಯವಾಣಿ ಸಂಖ್ಯೆ ಹೊಂದಿದ್ದು, ಅಲ್ಲಿಂದಲೂ ಸಾಕಷ್ಟು ಮಾಹಿತಿಗಳನ್ನು ಪಡೆಯಬಹುದು.

3. ಎಲ್ಲ ಬ್ಯಾಂಕ್‌ಗಳು ಕೂಡ ಈಗ ತಮ್ಮದೇ ಪ್ರತ್ಯೇಕ ಆ್ಯಪ್‌ ಗಳನ್ನು ಹೊಂದಿದ್ದು, ಅದನ್ನು ಗ್ರಾಹಕರು ತಮ್ಮ ಮೊಬೈಲ್‌ಗ‌ಳಲ್ಲಿ ಅಳವಡಿಸಿಕೊಂಡರೆ ಖಾತೆಯಿಂದ ಖಾತೆಗೆ, ಬೇರೆ ಬ್ಯಾಂಕಿನ ಖಾತೆಗಳಿಗೆ ಹಣ ವರ್ಗಾವಣೆ ಮಾಡಬಹುದು. ಖಾತೆಯ ವ್ಯವಹಾರಗಳ ಮಾಹಿತಿಯನ್ನೂ ತಿಳಿದುಕೊಳ್ಳಬಹುದು.

4. ಕೆಲವು ಎಟಿಎಂ ಕೇಂದ್ರಗಳಲ್ಲಿ ನಗದು ಹಣವನ್ನು ಖಾತೆಗೆ ಜಮೆ ಮಾಡುವ ಸೌಲಭ್ಯವೂ ಇದೆ. ಇದರಿಂದ ಜಾಸ್ತಿ ಜನ ಸೇರುವ ಬ್ಯಾಂಕ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಬಹುದು. ಈ ಸೇವೆ ಬಳಸುವ ಸಂದರ್ಭ ಮುಖಕ್ಕೆ ಮಾಸ್ಕ್ ಬಳಕೆ, ಹ್ಯಾಂಡ್‌ ಸ್ಯಾನಿಟೈಸರ್‌ ಉಪಯೋಗ ಕಡ್ಡಾಯವಾಗಿ ಮಾಡಿ.

5. ಸಾಮಾನ್ಯವಾಗಿ ಬೆಳಗ್ಗೆ ಬ್ಯಾಂಕ್‌ಗಳಲ್ಲಿ ಜನಸಂದಣಿ ಜಾಸ್ತಿಯಿರುತ್ತದೆ. ಸಂಜೆ 4 ಗಂಟೆಯ ವರೆಗೂ ಎಲ್ಲ ರೀತಿಯ ಹಣದ ವಹಿವಾಟುಗಳು ನಡೆಯುವುದರಿಂದ ಮಧ್ಯಾಹ್ನದ ಅನಂತರ ಕೂಡ ಬ್ಯಾಂಕ್‌ಗಳಿಗೆ ತೆರಳಬಹುದು. ಇದರಿಂದ ಸಾಮಾಜಿಕ ಅಂತರ ಕಾಯುವುದು ಸುಲಭವಾಗುವುದು.

6. ಬ್ಯಾಂಕ್‌ ಎಟಿಎಂ ಕಾರ್ಡ್‌ಗಳ ಪಿನ್‌ ಸಂಖ್ಯೆಯನ್ನೂ ಯಾರು ಕೇಳಿದರೂ ಕೊಡಬೇಡಿ. ಬ್ಯಾಂಕ್‌ನವರಂತೂ ಕೇಳುವುದಿಲ್ಲ. ಬೇರೆಯವರಿಗೆ ಪಿನ್‌ ಸಂಖ್ಯೆ ಕೊಟ್ಟರೆ ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಲಪಟಾಯಿಸುವ ಸಾಧ್ಯತೆಯೇ ಹೆಚ್ಚು. ಅದನ್ನು ಸಾಧ್ಯವಾದಷ್ಟು ಗೌಪ್ಯವಾಗಿಯೂ ಇರಿಸಿ.

ನಿಮಗೆ ಏನಾದರೂ ಸಂಶಯ, ಪ್ರಶ್ನೆಗಳಿದ್ದರೆ ಈ ನಂಬರಿಗೆ ವಾಟ್ಸಪ್‌ ಮಾಡಿ. 9148594259

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.