ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ನರೇಗಾದಡಿ ಭತ್ತ ಸೇರ್ಪಡೆಗೆ ರಾಜ್ಯ ಸರಕಾರದ ಒಲವು

Team Udayavani, May 29, 2020, 6:15 AM IST

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ಸಾಂದರ್ಭಿಕ ಚಿತ್ರ.

ಮಂಗಳೂರು: ಮುಂಗಾರು ಹತ್ತಿರವಾಗುತ್ತಿರುವಂತೆ ಅನ್ನದಾತನಿಗೆ ಸಂತೋಷದ ಸಂಗತಿಯಿದೆ. ಭತ್ತದ ಬೆಳೆಯು ನರೇಗಾ ಯೋಜನೆಯಡಿ ಸೇರಿಕೊಳ್ಳುವ ಸಾಧ್ಯತೆಗಳಿವೆ!

ಕೃಷಿಕರ ಬದುಕಿಗೆ ವಿವಿಧ ರೀತಿಯಲ್ಲಿ ಬೆಂಗಾವಲಾಗಿ ನಿಂತಿರುವ ನರೇಗಾದಡಿ ಕೃಷಿ ಕ್ಷೇತ್ರದಲ್ಲಿ ಹಲವು ಮಹತ್ವದ ಕೆಲಸಗಳು ನಡೆದಿವೆ. ಅದನ್ನೀಗ ಭತ್ತದ ಬೆಳೆಗೂ ವಿಸ್ತರಿಸುವ ಬಗ್ಗೆ ರಾಜ್ಯ ಸರಕಾರ ಆಸಕ್ತಿ ತೋರಿದೆ. ಭತ್ತ ಬೆಳೆಗಾರರಿಗೆ ಕಾರ್ಮಿಕರ ಕೊರತೆ ಹಾಗೂ ಕಾರ್ಮಿಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಗಂಭೀರ ವಿಚಾರಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ಈ ಚಿಂತನೆ ಮಾಡಲಾಗಿದೆ.

ಮಂಗಳೂರಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಹಾಗೂ ಇತರರು ಭತ್ತದ ಬೆಳೆಯನ್ನು ನರೇಗಾದಡಿ ಸೇರಿಸುವಂತೆ ಮನವಿ ಮಾಡಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗುವುದು ಎಂದಿದ್ದಾರೆ.

ಹೊಸ ಬದುಕು ಸಾಧ್ಯ
ಭತ್ತದ ಬೆಳೆಗೆ ಬಹಳಷ್ಟು ಅವಕಾಶವಿದೆ. ಹಡಿಲು ಗದ್ದೆಗಳು ಕೂಡ ಇವೆ. ಭತ್ತದ ಬೆಳೆಯ ಮೂಲಕ ಹೊಸ ಬದುಕು ಕಟ್ಟಿಕೊಳ್ಳಲು ಸಾಧ್ಯ. ಆದರೆ ಕೆಲವು ಸಲ ಕಾರ್ಮಿಕರು ಸಿಗುತ್ತಿಲ್ಲ ಎಂಬ ನೆಪದಿಂದ ಅಥವಾ ಕಾರ್ಮಿಕರಿಗೆ ಸಂಬಳ ನೀಡುವ ಹೊರೆಯನ್ನು ತಪ್ಪಿಸಲು ಭತ್ತದಿಂದ ಕೆಲವು ಕೃಷಿಕರು ವಿಮುಖರಾಗಿದ್ದಾರೆ. ಸದ್ಯ ನರೇಗಾ ಯೋಜನೆಯಡಿ ಭತ್ತದ ಕೃಷಿಯನ್ನೂ ಜೋಡಿಸುವ ಕಾರ್ಯಕ್ಕೆ ರಾಜ್ಯ ಸರಕಾರ ಮನಸ್ಸು ಮಾಡಿದ್ದು, ಕೇಂದ್ರದ ಜತೆಗೆ ಮಾತುಕತೆ ನಡೆಸುವ ಹಂತದಲ್ಲಿದೆ ಎನ್ನುತ್ತಾರೆ ಕೃಷಿಕರೂ ಆಗಿರುವ ಶಾಸಕ ರಾಜೇಶ್‌ ನಾೖಕ್‌.

ಭತ್ತದ ಬೆಳೆ ಪ್ರಮಾಣ ಕುಸಿತ
ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕರಾವಳಿಯಲ್ಲಿ ಭತ್ತ ಬೆಳೆಯುವ ಪ್ರದೇಶ ನಿರಂತರವಾಗಿ ಇಳಿಕೆಯಾಗುತ್ತಿದೆ. ಆರು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ 34,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯುತ್ತಿದ್ದರೆ 2018-19ರಲ್ಲಿ 26,560 ಹೆಕ್ಟೇರ್‌ಗೆ ಕುಸಿದಿದೆ. ಉಡುಪಿ ಜಿಲ್ಲೆಯಲ್ಲಿ 2007ರಲ್ಲಿ 51,350 ಹೆಕ್ಟೇರ್‌ ಪ್ರದೇಶದಲ್ಲಿದ್ದ ಭತ್ತದ ಬೆಳೆ 2018-19ರಲ್ಲಿ 36,000 ಹೆಕ್ಟೇರ್‌ಗೆ ಇಳಿದಿದೆ.

ನರೇಗಾ ಯೋಜನೆಯಡಿ ಭತ್ತದ ಕೃಷಿಯನ್ನೂ ಸೇರಿಸಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವರ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ. ಅವರು ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ನರೇಗಾದಡಿ ಭತ್ತ ಸೇರಿಸುವ ಕುರಿತಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಭತ್ತದ ಕೃಷಿ ನರೇಗಾದಡಿ ಸೇರಿದರೆ ಅನ್ನದಾತರಿಗೆ ಬಹಳಷ್ಟು ಅನುಕೂಲವಾಗಲಿದೆ.
– ಬಿ.ಸಿ. ಪಾಟೀಲ್‌,
ಕೃಷಿ ಸಚಿವರು

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.