ಕೋವಿಡ್ ಅಸ್ಪೃಶ್ಯತೆ ವಿರುದ್ಧ ಪ್ರತಿಜ್ಞೆ ; ಸೋಂಕು ಪೀಡಿತರ ಅವಗಣನೆ ಮಾಡದಿರಲು ಹೊಸ ಯತ್ನ


Team Udayavani, May 29, 2020, 4:01 AM IST

ಕೋವಿಡ್ ಅಸ್ಪೃಶ್ಯತೆ ವಿರುದ್ಧ ಪ್ರತಿಜ್ಞೆ ; ಸೋಂಕು ಪೀಡಿತರ ಅವಗಣನೆ ಮಾಡದಿರಲು ಹೊಸ ಯತ್ನ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ ನ ಕಾಲಘಟ್ಟದಲ್ಲಿ ಆ ವೈರಾಣುಗಳ ಸೋಂಕಿಗೆ ಒಳಗಾದವರು ಹಾಗೂ ಸೋಂಕಿನಿಂದ ಗುಣಮುಖರಾದವರನ್ನು ಸಮಾಜವು ನಿಕೃಷ್ಟವಾಗಿ ನೋಡುತ್ತಿರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಇದಕ್ಕಾಗಿ, ಕೇಂದ್ರದ mygov.in ಜಾಲತಾಣದ ಅಡಿಯಲ್ಲಿ ಈ ಕುರಿತಂತೆ ಪ್ರತಿಜ್ಞೆ ಕೈಗೊಳ್ಳಲು ಎಲ್ಲಾ ನಾಗರಿಕರಿಗೆ ಅನುವು ಮಾಡಿಕೊಟ್ಟಿದೆ.

#BreakTheStigmaPledge ಹೆಸರಿನ ಈ ಅಭಿಯಾನದಲ್ಲಿ, https://pledge.mygov.in/breakthestigma/ ಪುಟಕ್ಕೆ ಭೇಟಿ ನೀಡುವ ಮೂಲಕ ಅಲ್ಲಿ ತಮ್ಮ ಹೆಸರು, ಇನ್ನಿತರ ವಿವರಗಳನ್ನು ನೋಂದಾಯಿಸುವ ಮೂಲಕ ನಾಗರಿಕರು ಪ್ರತಿಜ್ಞೆ ಕೈಗೊಳ್ಳಬಹುದು.

ಕೋವಿಡ್ ಪೀಡಿತರನ್ನು ಸುತ್ತಲಿನ ಸಮಾಜದ ಮಾನಸಿಕ ಹಿಂಸೆಯಿಂದ ಮುಕ್ತಿ ಮಾಡಿ ಈ ಸಮಾಜವನ್ನು ಅವರ ಪಾಲಿಗೆ ಸುಂದರವಾಗಿಸುವ ಪ್ರಯತ್ನ ಇದಾಗಿದೆ.

ಮೊದಲ ಪುಟದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ, ಇ-ಮೇಲ್‌ ವಿಳಾಸ, ವಾಸಿಸುವ ನಗರದ ಪಿನ್‌ಕೋಡ್‌, ರಾಜ್ಯ, ಜಿಲ್ಲೆಗಳನ್ನು ನಮೂದಿಸಬೇಕು. ಆನಂತರ ಅದೇ ಪುಟದಲ್ಲಿ ಕೆಳಗೆ ಭಾಷೆಗಳ ಆಯ್ಕೆಯಲ್ಲಿ (ಇಂಗ್ಲೀಷ್‌ ಅಥವಾ ಹಿಂದಿ) ಒಂದನ್ನು ಆಯ್ಕೆ ಮಾಡಿಕೊಂಡು ಮುಂದುವರಿಯಬೇಕು.

ನಂತರದ ವೆಬ್‌ಪುಟದಲ್ಲಿ ಕೊರೊನಾ ಪೀಡಿತರನ್ನು ನಿಕೃಷ್ಟವಾಗಿ ಕಾಣೆನು ಎಂಬ ವಾಕ್ಯ ಮೂಡಿಬರುತ್ತದೆ ಹಾಗೂ ಅದನ್ನು ಓದುವಂತೆ ಸೂಚನೆ ಪರದೆಯ ಮೇಲೆ ಮೂಡುತ್ತದೆ. ವಾಕ್ಯ ಓದಿದ ನಂತರ ಕೆಳಗಿರುವ ಪ್ಲೆಡ್ಜ್ ಎಂಬ ಐಕಾನ್‌ ಕ್ಲಿಕ್‌ ಮಾಡಿದರೆ ನಿಮ್ಮ ಪ್ರತಿಜ್ಞೆಯನ್ನು ಪ್ರಮಾಣ ಪತ್ರದ ರೂಪದಲ್ಲಿ ನಿಮಗೆ ಕಳಿಸುವ ಆಯ್ಕೆ ಬರುತ್ತದೆ.

ಅಲ್ಲಿ, ನೀವಾಗಲೇ ನಮೂದಿಸಿರುವ ಇ-ಮೇಲ್‌ ಅಥವಾ ಮೊಬೈಲ್‌ಗೆ ಕಳುಹಿಸಬೇಕೇ ಎಂದು ಕೇಳಲಾಗುತ್ತದೆ. ನೀವು ಯಾವುದನ್ನು ಆಯ್ಕೆ ಮಾಡುವಿರೋ ಅದಕ್ಕೆ (ಇ-ಮೇಲ್‌ ಅಥವಾ ಮೊಬೈಲ್‌) ಸರ್ಟಿಫಿಕೇಟ್‌ ಡೌನ್‌ಲೋಡ್‌ ಮಾಡುವ ಲಿಂಕ್‌ ಕಳುಹಿಸಲಾಗುತ್ತದೆ. ಅದನ್ನು ಕ್ಲಿಕ್ಕಿಸಿ ನಿಮ್ಮ ಪ್ರಮಾಣ ಪತ್ರವನ್ನು ಡೌನ್‌ಲೋಡ್‌ ಮಾಡಬಹುದಾಗಿದೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.