ಮಾತೇ ಇಲ್ಲದ ಹೀಗೊಂದು ಮನಕಲಕುವ ಕಿರುಚಿತ್ರ


Team Udayavani, May 29, 2020, 4:18 AM IST

hindina sou

ಕಿತ್ತೋದ ಚಪ್ಪಲಿಗಿರೋ ಬೆಲೆ, ನೀ ಹೆಣವಾದ ಮರು ಘಳಿಗೆ ಇರದು…’  -ಈ ಮಾತು ಅಕ್ಷರಶಃ ನಿಜ. ಯಾಕೆಂದರೆ, ಮನುಷ್ಯ ಇರೋವರೆಗಷ್ಟೇ ಬೆಲೆ. ಅವನು ಮಣ್ಣು ಸೇರಿದ ಮೇಲೆ ಎಲ್ಲವೂ ಗೌಣ. ಈಗ ಈ ವಿಷಯ ಹೇಳ್ಳೋಕೆ ಕಾರಣ,  ಒಂದು ಕಿರುಚಿತ್ರ. ಅದರ ಹೆಸರು “ದುರ್ವಿಧಿ’ ಕಿರುಚಿತ್ರದ ಹೆಸರು ಕೇಳಿದ ಮೇಲೆ, ಇದೊಂದು ಮಾನವೀಯ ಮೌಲ್ಯ ಕುರಿತ ಕಥಾಹಂದರ ಹೊಂದಿರುವ ಕಥೆ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ ಬಿಡಿ. ಹೌದು, ಅಪ್ಪುವರ್ಧನ್‌  ಎಂಬ ಹೊಸ ಪ್ರತಿಭೆ ಕಥೆ, ಚಿತ್ರಕಥೆ ಬರೆದು “ದುರ್ವಿಧಿ ‘ ಕಿರುಚಿತ್ರ ನಿರ್ದೇಶಿಸಿ ದ್ದಾರೆ.

ಈ ಕಿರುಚಿತ್ರಕ್ಕೆ ಮಹೇಶ್‌ ರುದ್ರಪ್ಪ ನಿರ್ಮಾ ಪಕರು. ಈಗಾಗಲೇ ಚಿತ್ರೀ ಕರಣ ಮುಗಿಸಿರುವ ಈ ಕಿರುಚಿತ್ರ ಅಂತಾ ರಾಷ್ಟ್ರೀಯ ಕಿರುಚಿತ್ರೋತ್ಸವಕ್ಕೆ  ಹೋಗಲು ತಯಾರಾಗುತ್ತಿದೆ. ಸದ್ಯಕ್ಕೆ ಸಂಕಲನ ಕೆಲಸ ಮುಗಿಸಿರುವ ಈ ಚಿತ್ರದ ವಿಶೇಷತೆ ಅಂದರೆ, ಇಲ್ಲಿ ಯಾವುದೇ ಡೈಲಾಗ್‌ ಗಳಿಲ್ಲ. ಇಡೀ ಸಿನಿಮಾ ಕೇವಲ ನಟನೆ ಹಾಗು ಹಿನ್ನೆಲೆ ಸಂಗೀತದಲ್ಲೇ ಸಾಗಲಿದೆ. ಈಗಾಗಲೇ ಯಾವುದೇ  ಸಂಭಾಷಣೆಗಳಿಲ್ಲದೆ ಸಿನಿಮಾಗಳು, ಕಿರುಚಿತ್ರಗಳು ಬಂದಿವೆಯಾ ದರೂ, ಒಂದು ಮೌಲ್ಯಾಧಾರಿತ ವಿಷಯ ಇಟ್ಟುಕೊಂಡು ಕೇವಲ ಭಾವನೆಗಳಲ್ಲೇ ಕಟ್ಟಿಕೊಡುವ ಪ್ರಯತ್ನವನ್ನು “ದುರ್ವಿಧಿ ‘ ಮೂಲಕ ಮಾಡಲು ಹೊರಟಿದ್ದಾರೆ ಅಪ್ಪು ವರ್ಧನ್‌.

ಕಿರುಚಿತ್ರದ ಕಥೆ ಬಗ್ಗೆ ಹೇಳುವುದಾದರೆ, ಚಪ್ಪಲಿ ಹೊಲೆದು ಬದುಕು ಸಾಗಿಸುವ ಕುಟುಂಬದ ಸುತ್ತ ಸಾಗುವ ಕಥೆ ಇಲ್ಲಿದೆ. ಇಂದು ಅಂತಹವರ ಬದುಕು ಸಂಕಷ್ಟದಲ್ಲಿದೆ. ಒಂದೊತ್ತಿನ ಊಟಕ್ಕೂ ಪರದಾಡು ವಂತಹ ಪರಿಸ್ಥಿತಿ  ನಿರ್ಮಾಣವಾಗಿದೆ. ಹಿಂದೆ ಇದ್ದಂತಹ ದುಡಿಮೆ ಈಗಿಲ್ಲ. ಅಂತಹ ಕುಟುಂಬದ ಯಜಮಾನ ಅಂಗವೈಕಲ್ಯ ಹೊಂದಿದ್ದರೂ, ಬದುಕಿನ ಬಂಡಿ ಸಾಗಿಸಲು ಹರಸಾಹಸ ಪಡುತ್ತಾನೆ. ಕೊನೆಗೆ ತನ್ನ ಕುಟುಂಬ ಸಾಕಲು ಆಗದಂತಹ ಸ್ಥಿತಿ ತಲುಪಿ  ಆತ್ಮಹತ್ಯೆಗೆ ಶರಣಾಗುತ್ತಾನೆ. ಅತ್ತ, ಹೆಂಡತಿ, ಸಣ್ಣ ಮಗು ತುತ್ತು ಅನ್ನಕ್ಕಾಗಿ ಪರದಾಡುವ ಸ್ಥಿತಿ ಹೇಗಿರುತ್ತೆ.

ಕೊನೆಗೆ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಾರೋ, ಇಲ್ಲವೋ ಅನ್ನೋದೇ ಈ ಕಿರುಚಿತ್ರದ ಕಥೆ. ಇಲ್ಲಿ ಎಮೋಷನ್ಸ್‌, ತಾಯಿ,  ಮಗುವಿನ ಬಾಂಧವ್ಯ, ಉಳ್ಳವರ ಕ್ರೌರ್ಯ ಇತ್ಯಾದಿ ಕಥೆಯಲ್ಲಿದೆ. ಚಿತ್ರಕ್ಕೆ ವಾಸುಕಿ ವೈಭವ್‌ ಹಿನ್ನೆಲೆ ಸಂಗೀತ ನೀಡಲಿದ್ದಾರೆ. ರಮೇಶ್‌ ಕೊಯಿರ ಛಾಯಾಗ್ರಹಣವಿದೆ. ಲಾಕ್‌ಡೌನ್‌ ಸಂಪೂರ್ಣ ನಿಂತ ಬಳಿಕ ಚಿತ್ರದ ಇತರೆ ಕೆಲಸಗಳು  ನಡೆದು, ಆ ನಂತರ ಅವಾರ್ಡ್‌ಗೆ ಕಳುಹಿಸುವ ಯೋಚನೆ ನಿರ್ದೇಶಕರಿಗಿದೆ. ಕಿರುಚಿತ್ರದಲ್ಲಿ ಬಹುತೇಕ ಹೊಸ ಕಲಾವಿದರಿದ್ದಾರೆ. ಆರು ಪಾತ್ರಗಳು ಇಲ್ಲಿ ಹೈಲೈಟ್‌. ಕರಿಯ ನಾಣಿ, ಪವಿತ್ರಾ, ರೆಡ್ಡಿ, ಸೌಭಾಗ್ಯ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.