ಹೊಸ ಧ್ವನಿಯ ಸ್ಪರ್ಶ


Team Udayavani, May 29, 2020, 4:24 AM IST

rag ravi

ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಹಳೆಯ ಮಧುರ ಗೀತೆಗಳಿಗೆ ಸಾಕಷ್ಟು ಬೇಡಿಕೆ ಇದೆ. ಅಂತಹ ಅದ್ಭುತ ಹಾ ಡುಗಳ ಮೂಲಕ ಗಮನಸೆಳೆದ ಎವರ್‌ಗ್ರೀನ್‌ ನಟ,ನಟಿಯರ ನೆನಪಿಸುವ ಉದ್ದೇಶದಿಂದ ಹಾಗೂ ಇಂದಿನ ಪೀಳಿಗೆಗೂ  ಅಂದಿನ ಸ್ಟಾರ್‌ ನಟ,ನಟಿಯರನ್ನು ಪರಿಚಯಿಸುವ ದೃಷ್ಟಿಯಿಂದ ಕನ್ನಡ ಚಿತ್ರರಂಗದಲ್ಲಿ “ಗಂಧದ ಗುಡಿಯ ಗಂಧರ್ವರು ‘ ಶೀರ್ಷಿಕೆ ಮೂಲಕ ಅವರ ಚಿತ್ರಗಳ ಹಾಡುಗಳನ್ನು ಹಾಡಿ ರಂಜಿಸುವ ಪ್ರಯತ್ನ ಮಾಡಲಾಗಿದೆ.

ಹೌದು,  ಇತ್ತೀಚೆಗೆ “ಗಂಧದ ಗುಡಿಯ ಗಂಧರ್ವರು ‘ ಮೂಲಕ ಕನ್ನಡ ಚಿತ್ರರಂಗದ ದಂತಕತೆಗಳಾದ ಡಾ.ರಾಜಕುಮಾರ್‌, ವಿಷ್ಣುವರ್ಧನ್‌, ಅಂಬರೀಶ್‌, ಶಂಕರ್‌ನಾಗ್‌, ಟೈಗರ್‌ ಪ್ರಭಾಕರ್‌, ಲೋಕೇಶ್‌, ಅನಂತ್‌ನಾಗ್‌, ಬಿ.ಸರೋಜಾದೇವಿ, ಲೀಲಾವತಿ,ಭಾರತಿ, ಜಯಂತಿ ಇವರ ಹಳೆಯ ಚಿತ್ರಗಳ ಮಧುರ ಗೀತೆಗಳನ್ನು ಹಾಡಿ ಸ್ಪೀಡ್‌ ಎಂಬ ಯುಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿದೆ. ಮೂರು ಎಪಿಸೋಡ್‌ಗಳಲ್ಲಿ ಪ್ರಸಾರಗೊಂಡ ಈ ಕಾರ್ಯಕ್ರಮದಲ್ಲಿ ಒಟ್ಟು ಈ  ಎಲ್ಲಾ ನಟ,ನಟಿಯರು ನಟಿಸಿರುವ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಾಡಲಾಗಿದೆ.

ಈ ಹಾಡುಗಳಿಗೆ ವಿಜಯರಾಘವೇಂದ್ರ, ರವಿಶಂಕರ್‌ಗೌಡ, ನವೀನ್‌ಕೃಷ್ಣ, ಅನಿರುದಟಛಿ, ಸುನೀಲ್‌ ಇತರರು ಹಾಡಿದ್ದಾರೆ. ಇನ್ನು, ಇವರೊಂದಿಗೆ  ಶಮಿತಾ ಮಲಾಡ್‌, ವಾಣಿಹರಿಕೃಷ್ಣ, ಕೀರ್ತಿ, ಸಂಗೀತಾ ಕೂಡ ಹಾಡಿದ್ದಾರೆ. ಅಂದಹಾಗೆ, ಮೂರು ಎಪಿಸೋಡ್‌ನ‌ಲ್ಲಿ ಮೂಡಿಬಂದ ಈ “ಗಂಧದ ಗುಡಿಯ ಗಂಧರ್ವರು ‘ ಹಾಡಿನ ಕಾರ್ಯಕ್ರಮ ಮೊದಲ ಎಪಿಸೋಡ್‌ 25 ನಿಮಿಷ  ಹೊಂದಿದ್ದರೆ, ಎರಡು ಹಾಗು ಮೂರು ಎಪಿಸೋಡ್‌ಗಳು 20 ನಿಮಿಷಗಳ ಕಾಲ ಪ್ರಸಾರಗೊಂಡಿವೆ.

ಇನ್ನು, ಈ ಹಾಡುಗಳು ಹಾಗು ಚಿತ್ರಗಳ ಕುರಿತು ನಟ ಸೃಜನ್‌ ಲೋಕೇಶ್‌ ನಿರೂಪಣೆ ಮಾಡಿದ್ದಾರೆ. ಈ ಕಾರ್ಯಕ್ರಮದ ನಿರ್ದೇಶನವನ್ನು  ರಘುರಾಮ್‌ ಮಾಡಿದ್ದಾರೆ. ಇಲ್ಲಿ ಹದಿನೈದು ಹಾಡುಗಳಿದ್ದರೂ, ಅವೆಲ್ಲವೂ ಪಲ್ಲವಿ ಚರಣದಿಂದ ಕೂಡಿವೆ. ಎಲ್ಲಾ ಹಾಡುಗಳಿಗೂ ಮೂಲ ರಾಗ ಬಳಸಿ ಹಾಡಲಾಗಿದೆ. ಈ ಕಾರ್ಯಕ್ರಮದ ಮೂಲ ಉದ್ದೇಶ ಎಲ್ಲರೂ ಲಾಕ್‌ಡೌನ್‌ ಸಮಯದಲ್ಲಿ ಮನೆಯಲ್ಲಿದ್ದಾರೆ.

ಹಳೆಯ ನಟರ ಚಿತ್ರಗಳ ಹಾಡುಗಳ ಬಗ್ಗೆ  ಹಳಬರಿಗೆ ಗೊತ್ತು. ಆದರೆ, ಇಂದಿನ ಜನರೇಷನ್‌ಗೂ ಗೊತ್ತಾಗಬೇಕು ಎಂಬ ಕಾರಣಕ್ಕೆ ಜನಪ್ರಿಯ ಹಾಡುಗಳನ್ನು “ಗಂಧದ ಗುಡಿಯ ಗಂಧರ್ವರು ‘ ಶೀರ್ಷಿಕೆಯಡಿ ಪ್ರಸಾರ ಮಾಡಲಾಗಿದೆ. ಇನ್ನು ಎಲ್ಲಾ ಗಾಯಕರು ತಮ್ಮ ತಮ್ಮ  ಮನೆಯಲ್ಲೇ ಹಾಡಿ ಕಳುಹಿಸಿದ್ದಾರೆ. ಇದಕ್ಕೆ ಒಳ್ಳೆಯ ಮೆಚ್ಚುಗೆಯೂ ಸಿಕ್ಕಿದೆ.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.