ಡಿಜಿಟಲೀಕರಣದಿಂದ ಪಾರದರ್ಶಕ ಆಡಳಿತ
Team Udayavani, May 29, 2020, 6:27 AM IST
ಮಾಲೂರು: ಸಹಕಾರ ಬ್ಯಾಂಕ್ಗಳು ಮತ್ತು ಸೇವಾ ಸಂಘಗಳ ಆರ್ಥಿಕ ವ್ಯವಹಾರವನ್ನು ಡಿಜಿಟಲೀಕರಣ ಮಾಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.
ತಾಲೂಕಿನ ಚಿಕ್ಕತಿರುಪತಿಯ ಕೃಷಿ ಸೇವಾ ಸಹಕಾರ ಬ್ಯಾಂಕಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಕ್ಷೇತ್ರದ ಡಿಜಿಟಲೀಕರಣ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಕೋಲಾರ ಜಿಲ್ಲೆಯ ಪವಿತ್ರ ಯಾತ್ರ ಸ್ಥಳವಾಗಿರುವ ಚಿಕ್ಕ ತಿರುಪತಿಯ ಪ್ರಸನ್ನ ವೆಂಕಟರಮಣಸ್ವಾಮಿ ಸೇವಾ ಸಹಕಾರ ಬ್ಯಾಂಕಿನಿಂದ ಎರಡೂ ಜಿಲ್ಲೆಗಳ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಮೊಬೈಲ್ನಲ್ಲೇ ಮಾಹಿತಿ: ಎರಡೂ ಜಿಲ್ಲೆಗಳ 200 ಸಹಕಾರ ಬ್ಯಾಂಕ್ಗಳು ಮತ್ತು ಸೇವಾ ಸಂಘಗಳ ಹಣಕಾಸಿನ ವ್ಯವಹಾರವು ಗುರುವಾರದಿಂದಲೇ ಕಂಪ್ಯೂಟರೀಕರಣವಾಗಿ ಸಹ ಕಾರ ಸೇವೆಗಳು ರೈತರಿಗೆ ನೇರವಾಗಿ ತಲುಪಲಿವೆ. ಸಹಕಾರ ಬ್ಯಾಂಕಿನ ಎಲ್ಲಾ ಆರ್ಥಿಕ ವಹಿವಾಟುಗಳು ಪಾರದರ್ಶಕವಾಗುವ ಜೊತೆಗೆ ಖಾತೆಯ ಸಂಪೂರ್ಣ ಮಾಹಿತಿಯನ್ನು ರೈತರು ತಮ್ಮ ಮೊಬೈಲ್ ಫೋನ್ಗಳ ಮೂಲಕವೇ ನೋಡಲು ಸಾಧ್ಯವಾಗಲಿದೆ ಎಂದು ವಿವರಿಸಿದರು.
ಸಬಲಿಕರಣ: ರೈತರು ಮತ್ತು ಬ್ಯಾಂಕಿನ ಹಣ ದುರುಪಯೋಗ ವಾಗುವ ಸಾಧ್ಯತೆಗಳು ಇನ್ನು ಮುಂದೆ ಇರುವುದಿಲ್ಲ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವತಿಯಿಂದ ರೈತರು ಮತ್ತು ಮಹಿಳೆಯರಿಗೆ ಕೋಟ್ಯಂತರ ರೂ. ಸಾಲ ನೀಡಿ ರೈತ ಮತ್ತು ಮಹಿಳಾ ಸಬಲೀಕರಣಕ್ಕೆ ಡಿಸಿಸಿ ಬ್ಯಾಂಕ್ ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿಯೂ ಆಡಳಿತ ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ಉತ್ತಮ ಪಡಿಸುವ ಕಾರ್ಯವಾಗಲಿದ್ದು, ಡಿಜಿಟಲೀಕರಣದಿಂದ ರೈತರು ತಮ್ಮ ಖಾತೆಯಲ್ಲಿನ ಹಣದ ಸಂಪೂರ್ಣ ಮಾಹಿತಿಯನ್ನು ನೇರವಾಗಿ ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ನ ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ಕೇಂದ್ರ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಂ.ರವಿ, ಯೋಜನಾ ನಿರ್ದೇಶಕ ಶಿವಕುಮಾರ್, ಮಾಲೂರು ತಾಲೂಕು ಡಿಸಿಸಿ ಬ್ಯಾಕಿನ ಮೇಲ್ವಿಚಾರಕ ವಿ.ಕೃಷ್ಣಪ್ಪ, ಸಿಇಒ ಗಳಾದ ಎಂ.ಶಿವಶಂಕರ್, ಎಚ್.ವಿ. ತಿರುಮೇಗೌಡ, ಎಂ .ಸುಧಾಕರ್, ವೇಣುಗೋಪಾಲ್, ಯೋಗೀಶ್, ಚಿಕ್ಕತಿರುಪತಿ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಮುನಿರಾಜು,
ಉಪಾ ಧ್ಯಕ್ಷ ಆರ್.ಶ್ರೀಧರ್, ನಿರ್ದೇಶಕ ಶಂಕರ್ ನಾರಾ ಯಣಗೌಡ, ಜಿ.ವಿ. ಮಂಜುನಾಥ್, ಟಿ.ಎಂ.ರಾಮ್ಪ್ರಸಾದ್, ಜಿ.ರಾಮಮೂರ್ತಿ, ಎಸ್.ನಾಗರಾಜು, ನಾರಾಯ ಣಮ್ಮ, ನಾಗರತ್ಮಮ್ಮ, ಇಸ್ಟಾಪ್ ಟೆಕ್ನಾಲಜಿಸ್ನ ಲಲಿತ್ಪ್ರಸಾ ನ್ನದ್, ಸತೀಶ್ಹಂಪಹೊಳ್ಳ, ಎ.ಇ.ಫರ್ನಾಂಡಿಸ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ