ಬಿಸಿಯೂಟ ವ್ಯವಸ್ಥೆ ರೂಪ ಬದಲಾವಣೆ?


Team Udayavani, May 29, 2020, 7:34 AM IST

badalavaane

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ 19 ಪರಿಸ್ಥಿತಿ ನಡುವೆ ಶೈಕ್ಷಣಿಕ ವರ್ಷ ಆರಂಭವಾದರೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿಗುವುದು ಅನುಮಾನ! ಸಾಮಾಜಿಕ ಅಂತರ, ಮಾಸ್ಕ್ , ಶುಚಿತ್ವ ಮೊದಲಾದ ಸುರಕ್ಷತೆಯ ಕಾರಣಕ್ಕಾಗಿ  ಬಿಸಿಯೂಟದ ಬದಲಿಗೆ ಅಕ್ಕಿ, ಮತ್ತು ಬೇಳೆಯನ್ನು ಮಕ್ಕಳ ಮನೆಗೆ ನೀಡುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸುತ್ತಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಶಾಲೆಗಳಲ್ಲಿ ಬಿಸಿಯೂಟ ನೀಡುವುದನ್ನು ನಿಲ್ಲಿಸಿ, ಅಕ್ಕಿ ಮತ್ತು  ಬೇಳೆಯನ್ನು ನೇರವಾಗಿ ಮಕ್ಕಳ ಪಾಲಕರಿಗೆ ವಿತರಣೆ ಮಾಡಲಾಗಿದೆ. ಹಾಗೆಯೇ ಬೇಸಿಗೆ ರಜಾ ಅವಧಿಯ ಬಿಸಿಯೂಟದ ಸಾಮಗ್ರಿಯನ್ನು ವಿದ್ಯಾರ್ಥಿಗಳ ಪಾಲಕರಿಗೆ ನೀಡುವ ಬಗ್ಗೆಯೂ ನಿರ್ಧಾರದ ಹಂತದಲ್ಲಿದೆ.  ಮುಂದಿನ ಶೈಕ್ಷಣಿಕ  ವರ್ಷ ಆರಂಭವಾದ ನಂತರ ಅನೇಕ ರೀತಿಯ ನಿಯಮಗಳನ್ನು ಶಾಲೆಗಳಲ್ಲಿ ಪಾಲಿಸುವ ಅಗತ್ಯವಿದೆ.

ಅವುಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಶುಚಿತ್ವ ಇತ್ಯಾದಿ ಪಾಲಿಸಲೇ ಬೇಕಾಗುತ್ತದೆ. ಶಾಲೆಗಳಲ್ಲಿ  ಬಿಸಿಯೂಟ ಸಿದಟಛಿಪಡಿಸುವುದು, ಬಡಿಸುವುದು, ಊಟದ ಸಂದರ್ಭದಲ್ಲಿ ಶುಚಿತ್ವ, ಕೈ ತೊಳೆಯುವುದು ಸೇರಿದಂತೆ ಎಲ್ಲ ಅಂಶಗಳನ್ನು ಗಮನಿಸಿಕೊಂಡು ಬಂದಿದ್ದರೂ, ಮುಂದೆ ಇನ್ನಷ್ಟು ಜಾಗೃತಿಯನ್ನು ಶಾಲೆಗಳೇ  ವಹಿಸಬೇಕಿರುವುದರಿಂದ ಬಿಸಿಯೂಟ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲು ಅಧಿಕಾರಿಗಳ ಹಂತದಲ್ಲಿ ಚಿಂತನೆ ನಡೆಯುತ್ತಿದೆ.

ಪಡಿತರವನ್ನೇ ನೀಡುವ ಬಗ್ಗೆಯೂ ಯೋಚನೆಯಿದೆ. ಆದರೆ ಮಧ್ಯಾಹ್ನ ಮಕ್ಕಳು ಮನೆಗೆ ಹೋಗಿ  ಬರುವುದು ಕಷ್ಟ. ಅಲ್ಲದೆ, ಮನೆಯಿಂದ ತರುವ ಬುತ್ತಿಬಗ್ಗೆಯೂ ಎಚ್ಚರ ವಹಿಸುವ ಅಗತ್ಯ ಇರುತ್ತದೆ. ಆದರೆ, ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಅದಮ್ಯ ಚೇತನ,  ಅಕ್ಷರ ಫೌಂಡೇಷನ್‌ ಸಹಿತವಾಗಿ ಕೆಲವು ಎನ್‌ಜಿಒಗಳು ಮಧ್ಯಾಹ್ನದ ಬಿಸಿಯೂಟ ಒದಗಿಸುತ್ತಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿಸಿಯೂಟ ವಿಭಾಗದಿಂದಲೂ ಈ ವ್ಯವಸ್ಥೆಯಾಗುತ್ತಿದೆ. ಲಾಕ್‌ಡೌನ್‌ ಅವಧಿಯಲ್ಲಿ ಎನ್‌ ಜಿಒ  ಸಹಿತವಾಗಿ ಇಲಾಖೆ ಕೂಡ ಪಡಿತರವನ್ನೇ ನೇರವಾಗಿ ಪಾಲಕರಿಗೆ ನೀಡಿವೆ. ಅದೇ ಮಾದರಿಯನ್ನು ಇನ್ನಷ್ಟು ತಿಂಗಳು ಮುಂದುವರಿಸುವ ಬಗ್ಗೆ ಯೋಚನೆ ನಡೆದಿದೆ. ಆದರೆ, ಸರ್ಕಾರದಿಂದ ಯಾವ ರೀತಿಯ ಅನುಮೋದನೆ ಸಿಗುತ್ತದೆ  ಎನ್ನುವ ಆಧಾರದಲ್ಲಿ ಇದೆಲ್ಲ ನಿರ್ಧಾರವಾಗಲಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ಕ್ಷೀರಭಾಗ್ಯ ಹೇಗೆ?: ಲಾಕ್‌ಡೌನ್‌ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಹಾಲಿನ ಬದಲಿಗೆ ಹಾಲಿನ ಪುಡಿ ವಿತರಣೆ ಮಾಡಿಲ್ಲ. ಶಾಲೆ ಆರಂಭದ ನಂತರವೂ ಹಾಲು ವಿತರಣೆ ಹೇಗೆ ಎಂಬ ಪ್ರಶ್ನೆ ಅಧಿಕಾರಿಗಳನ್ನು ಕಾಡುತ್ತಿದೆ. ಸುಮಾರು 50  ಲಕ್ಷಕ್ಕೂ ಅಧಿಕ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಸರ್ಕಾರದಿಂದ ಸಿಗುತ್ತಿತ್ತು. ಮುಂದೆ ಇದರ ಸ್ವರೂಪ ಹೇಗಿರಲಿದೆ ಎಂಬುದೂ ತಿಳಿದಿಲ್ಲ. ಸರ್ಕಾರದ ಸೂಚನೆಯಂತೆ ಮುನ್ನಡೆಯಲಿದ್ದೇವೆ. ಈ ಬಗ್ಗೆ  ಅಧಿಕಾರಿಗಳ ಹಂತದಲ್ಲಿ ಸಭೆ ಕೂಡ ನಡೆದಿದೆ ಎಂದು ಬಿಸಿಯೂಟ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಶೈಕ್ಷಣಿಕ ವರ್ಷ ಆರಂಭದ ನಂತರ  ಬಿಸಿಯೂಟ ವ್ಯವಸ್ಥೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಯುತ್ತದೆ. ಸರ್ಕಾರದ ಹಂತದಲ್ಲಿ ಈ ಬಗ್ಗೆ ತೆಗೆದುಕೊಳ್ಳುವ ನಿರ್ಧಾರ ಮತ್ತು ಆರೋಗ್ಯ ಇಲಾಖೆಯಿಂದ ಬರುವ ಮಾರ್ಗಸೂಚಿ ಆಧರಿಸಿ, ಮುಂದುವರಿಯಲಿದ್ದೇವೆ.
-ಎಚ್‌. ಮಂಜುನಾಥ್‌, ಸಹಾಯಕ ನಿರ್ದೇಶಕ, ಮಧ್ಯಾಹ್ನ ಉಪಹಾರ ಯೋಜನೆ

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.