ಆಸ್ತಿ ಕರ ಹೆಚ್ಚಳ ಕೈ ಬಿಡಲು ಸಚಿವರಿಗೆ ಮನವಿ
Team Udayavani, May 29, 2020, 9:15 AM IST
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳದ ನಿರ್ಧಾರ ಕೈ ಬಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರಿಗೆ ಆಮ್ ಆದ್ಮಿ ಪಕ್ಷ ಮನವಿ ಮಾಡಿದೆ.
ಸಚಿವ ಜಗದೀಶ ಶೆಟ್ಟರ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಹಾಗೂ ಪದಾಧಿಕಾರಿಗಳು ಕೋವಿಡ್ ಹಾಗೂ ಲಾಕ್ಡೌನ್ ಸಂಕಷ್ಟ ಸ್ಥಿತಿಯಲ್ಲಿ ಆಸ್ತಿ ಕರ ಹೆಚ್ಚಳ ಸರಿಯಲ್ಲ. ಅದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ನಂತರ ಮಾತನಾಡಿದ ಸಚಿವರು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ತೆರಿಗೆ ಹೆಚ್ಚಳದ ನಿರ್ಧಾರ ಹಿಂಪಡೆಯುವ ಕುರಿತು ಸಚಿವ ಸಂಪುಟದಲ್ಲಿ ಸೂಕ್ತ ಠರಾವ್ ಪಾಸ್ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಆಶ್ವಾಸನೆ ನೀಡಿದರು.
ಮುಖಂಡರಾದ ವಿವೇಕಾನಂದ ಸಾಲಿನ್ಸ, ವಿಜಯ ಸಾಯಿ, ನವೀನ ರಾಜಪೂತ, ಲಕ್ಷ್ಮಣ ರಾಠೊಡ, ತ್ಯಾಗರಾಜ, ಹರಿಕೃಷ್ಣ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ