ಭವನ ನಿರ್ಮಾಣ ಕಾರ್ಯ ಶೀಘ್ರ: ದರ್ಶನಾಪುರ
Team Udayavani, May 29, 2020, 12:43 PM IST
ಶಹಾಪುರ: ಸಮುದಾಯ ಭವನ ನಿರ್ಮಾಣದ ಸ್ಥಳಕ್ಕೆ ಗುರುವಾರ ಶಾಸಕ ಶರಣಬಸಪ್ಪ ದರ್ಶನಾಪುರ ಭೇಟಿ ನೀಡಿ ಪರಿಶೀಲಿಸಿದರು
ಶಹಾಪುರ: ಹೋತಪೇಟ ಗ್ರಾಮದ ಕೈಲಾಸ ಆಶ್ರಮದಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು. ಶೀಘ್ರದಲ್ಲಿಯೇ ಕೆಲಸ ಆರಂಭವಾಗಲಿದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ಹೋತಪೇಟ ಗ್ರಾಮದ ಕೈಲಾಸ ಆಶ್ರಮಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಭವನ ನಿರ್ಮಾಣದಿಂದ ಹೆಚ್ಚು ಅನುಕೂಲವಾಗುತ್ತವೆ. ಆಯಾ ಸಮುದಾಯದವರು ಅಲ್ಲಿನ ಸಮುದಾಯ ಭವನಕ್ಕೆ ಆಗಮಿಸಿ ಮಂಗಲ ಕಾರ್ಯ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಆದರೆ ಭವನ ನಿರ್ಮಾಣ ಮಾಡಿದರೆ ಸಾಲದು ಅದರ ಜತೆಗೆ ಅದರ ನಿರ್ವಹಣೆಯು ಅಷ್ಟೆ ಮುಖ್ಯವಾಗಿದೆ. ಸ್ವಚ್ಛತೆ ಮತ್ತು ಸುರಕ್ಷತೆಗೆ ಒತ್ತು ನೀಡಬೇಕು. ಶ್ರೀಮಠದ ಆವರಣ ಸೇರಿದಂತೆ ಸುತ್ತಲು ಮರಗಳನ್ನು ನೆಡುವುದರ ಮೂಲಕ ಹಸಿರು ವನವನ್ನಾಗಿ ರೂಪಿಸಬೇಕು. ಕುಡಿಯುವ ನೀರು ಮುಂತಾದ ಮೂಲ ಸೌಲಭ್ಯಗಳನ್ನು ಸುಸಜ್ಜಿತವಾಗಿ ಇರಿಸುವುದು ಅಗತ್ಯ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಇಷ್ಟರಲ್ಲಿಯೇ ಮಳೆಗಾಲ ಆರಂಭವಾಗಲಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುವರು. ಕೋವಿಡ್ ಭೀತಿ ನಡುವೆ ನಾವು ಜೀವನವನ್ನು ಮುನ್ನಡಸುವುದು ಅಗತ್ಯವಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಕೈಲಾಸ ಆಶ್ರಮದ ಶಿವಲಿಂಗ ಶರಣರು, ಶಿವಮಹಾಂತ ಚಂದಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ