ಜಲಮೂಲ ರಕ್ಷಣೆಗೆ ಆದ್ಯತೆ
Team Udayavani, May 29, 2020, 3:28 PM IST
ಸಾಂದರ್ಭಿಕ ಚಿತ್ರ
ಹೊಳಲ್ಕೆರೆ: ನೂರು ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿನ ಜಲಮೂಲಗಳ ರಕ್ಷಣೆಗೆ ಆದ್ಯತೆ ನೀಡಿದೆ. ನೀರಿನ ಸಂರಕ್ಷಣೆ ಮಾಡದಿದ್ದಲ್ಲಿ ಜೀವಸಂಕುಲದ ಬದುಕು ದುಸ್ತರವಾಗಲಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಮಲ್ಲಾಡಿಹಳ್ಳಿ-ಶಿವಪುರ ಮಾರ್ಗದಲ್ಲಿ ಹರಿಯುವ ಹಿರೇಹಳ್ಳದ ನೀರು ತಡೆಗಟ್ಟಲು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬ್ಯಾರೇಜ್ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಹಿರೇಹಳ್ಳ ರೈತರ ಜೀವನಾಡಿಯಾಗಿದ್ದು, ಮಳೆಗಾಲದಲ್ಲಿ ಸಾಕಷ್ಟು ನೀರು ಹಳ್ಳದಲ್ಲಿ ಹರಿದು ಹೋಗುತ್ತದೆ. ಆ ನೀರಿನ ಬಳಕೆಗೆ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಗಂಗಸಮುದ್ರ, ರಾಮಗಿರಿ, ಹೊಸೂರು, ತಾಳಿಕಟ್ಟೆ, ಹನುಮಲಿ, ದೊಗ್ಗನಾಳ್, ಮಲ್ಲಾಡಿಹಳ್ಳಿ, ಶಿವಪುರ ಭಾಗದಲ್ಲಿ ಹರಿಯುವ ಹಿರೇಹಳ್ಳ ನೂರಾರು ಗ್ರಾಮಗಳ ಮೂಲಕ ಶಾಂತಿಸಾಗರವನ್ನು ಸೇರುತ್ತದೆ. ನೀರಿನ ಸದ್ಬಳಕೆಗೆ ಅಲ್ಲಲ್ಲಿ ಬ್ಯಾರೇಜ್ ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗುತ್ತದೆ. ಇದರಿಂದ ತೋಟಗಾರಿಕೆ ಕೃಷಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಪಿ. ರಮೇಶ್, ತಾಪಂ ಸದಸ್ಯೆ ಗಿರಿಜಾ ಅಜ್ಜಯ್ಯ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್. ಶಿವಕುಮಾರ್, ಮುಖಂಡರಾದ ಪರಮೇಶ್ವರಪ್ಪ, ಮರುಳಸಿದ್ಧೇಶ್ವರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ