ಇಕ್ವೆಡಾರ್‌ನ ಆರೋಗ್ಯ ಸ್ಥಿತಿ ಗಂಭೀರ : ಚಿಕಿತ್ಸೆ ಇಲ್ಲ , ಶವ ಎತ್ತಲೂ ಬರಲ್ಲ!

ಶವ ಸಂಸ್ಕಾರಕ್ಕೂ ಎರಡರಿಂದ ಏಳು ದಿನಗಳ ವರೆಗೆ ಕಾಯುವ ದುಃಸ್ಥಿತಿ

Team Udayavani, May 29, 2020, 3:37 PM IST

ಇಕ್ವೆಡಾರ್‌ನ ಆರೋಗ್ಯ ಸ್ಥಿತಿ ಗಂಭೀರ : ಚಿಕಿತ್ಸೆ ಇಲ್ಲ , ಶವ ಎತ್ತಲೂ ಬರಲ್ಲ!

ಸಾಂದರ್ಭಿಕ ಚಿತ್ರ

ಇಕ್ವೆಡಾರ್‌ನ ಗ್ವಯಾಕ್ವಿಲ್‌ನಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪುತ್ರ ಸಾಪ್ತಾಹಿಕ ಡಯಾಲಿಸಿಸ್‌ಗಾಗಿ ಆಸ್ಪತ್ರೆಗೆ ಕರೆದು ತಂದಾಗ, ನೆಗಡಿ ಇದೆ ಎನ್ನುವ ಕಾರಣಕ್ಕೆ ಆಸ್ಪತ್ರೆ ಸಿಬಂದಿ ಅವರನ್ನು ಸೇರಿಸಿಕೊಳ್ಳಲು ನಿರಾಕರಿಸಿದರು. ಇದು ಕೋವಿಡ್‌ ಲಕ್ಷಣ ಇರಬೇಕೆಂದು ಅವರ ಶಂಕೆ. ಖಾಸಗಿ ಆಸ್ಪತ್ರೆಗೆ ಹೋಗಲು ಹಣವಿಲ್ಲ. ಬೇರೆ ಎರಡು ಸರಕಾರಿ ಆಸ್ಪತ್ರೆಗಳಿಗೆ ಕರೆದೊಯ್ಯೋಣವೆಂದರೂ ವಾಹನಕ್ಕೆ ಕೊಡಲೂ ಹಣ ಸಾಲದು. ಅನಿವಾರ್ಯವಾಗಿ, ಮಹಿಳೆಯನ್ನು ಮನೆಗೆ ವಾಪಸ್‌ ಕರೆದೊಯ್ದರು. ಮಹಿಳೆ ದಿನದಿನಕ್ಕೆ ಕೃಶರಾಗಿ, ಒಂದು ವಾರದ ಬಳಿಕ ಮೃತಪಟ್ಟರು.

ತುರ್ತು ಸ್ಥಿತಿಯ ಸಂಖ್ಯೆಗಳಿಗೆ ಈ ಮಹಿಳೆಯ ಪುತ್ರಿ ಕರೆ ಮಾಡಿದರೂ ಶವ ತೆಗೆಯಲು ಯಾರೂ ಬರಲಿಲ್ಲ. ನಾಲ್ಕು ದಿನಗಳ ಕಾಲ ಶವ ಮನೆಯಲ್ಲೇ ಇರಬೇಕಾಯಿತು. ಈ ಮಹಿಳೆಯ ಪುತ್ರಿ ನಗರವನ್ನೆಲ್ಲ ಸುತ್ತಾಡಿ ಶವಪೆಟ್ಟಿಗೆಗಾಗಿ ಹುಡುಕಾಡಿದರು. ಶ್ಮಶಾನದಲ್ಲಿ ಹೂಳಲು ಕೊಡಬೇಕಾದಷ್ಟು ಹಣ ತನ್ನಲ್ಲಿದೆಯೇ ಎಂಬ ಚಿಂತೆಯಲ್ಲಿದ್ದರು. ಕೊನೆಗೆ ಚರ್ಚ್‌ನವರ ಸಹಾಯ ಕೇಳಿದಾಗ, ಅವರು ಉಚಿತವಾಗಿ ಶವಪೆಟ್ಟಿಗೆಯ ವ್ಯವಸ್ಥೆ ಮಾಡಿದರು. ಶ್ಮಶಾನದಲ್ಲಿ ಜಾಗಕ್ಕೂ ಹಣದ ವ್ಯವಸ್ಥೆ ಮಾಡಿಕೊಟ್ಟರು. ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಯಾರಾದರೂ ಚಿಕಿತ್ಸೆಗೆ ಸಹಾಯ ಮಾಡಿದ್ದರೆ ಆಕೆ ಬದುಕುತ್ತಿದ್ದಳೆಂದು ಪುತ್ರಿ ಕಣ್ಣೀರು ಮಿಡಿದಳು.

ಲ್ಯಾಟಿನ್‌ ಅಮೆರಿಕದಲ್ಲಿ ಗ್ವಯಾಕ್ವಿಲ್‌ ನಗರ ಕೋವಿಡ್‌-19ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಕಳೆದ ತಿಂಗಳು ಬೀದಿಯಲ್ಲಿ ಮಲಗಿಸಿದ್ದ ಹಾಗೂ ಪಾರ್ಕ್‌ನ ಬೆಂಚುಗಳ ಮೇಲೆ ಇರಿಸಿದ್ದ ಹೆಣಗಳ ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡಿ, ಆರೋಗ್ಯ ಸ್ಥಿತಿ ಎಷ್ಟು ಹದಗೆಟ್ಟಿದೆ, ಶವಾಗಾರಗಳು ಎಷ್ಟು ಭರ್ತಿಯಾಗಿವೆ ಎಂಬುದನ್ನು ಸಾರಿ ಹೇಳಿದ್ದವು.

ಈಕ್ವೆಡಾರ್‌ನಲ್ಲಿ ಈವರೆಗೆ 37,355 ಮಂದಿ ಸೋಂಕು ಪೀಡಿತರಾಗಿದ್ದು, 3,203 ಜನರು ಪ್ರಾಣಬಿಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಸೋಂಕಿತರು ಹಾಗೂ ಮೃತಪಟ್ಟವರ ಸಂಖ್ಯೆ ತುಂಬ ಜಾಸ್ತಿ ಇದೆ ಎಂದು ಹಲವರು ಅಭಿಪ್ರಾಯಿಸುತ್ತಿದ್ದಾರೆ. ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳಲ್ಲೇ ಇಲ್ಲಿ 10 ಸಾವಿರಕ್ಕೂ ಅಧಿಕ ಜನ ತೀರಿಕೊಂಡಿದ್ದಾರೆ ಎನ್ನಲಾಗಿದೆ.

ಕಾರ್ಮಿಕ ಹಾಗೂ ನೌಕರ ಕುಟುಂಬಗಳು ಸಾಕಷ್ಟು ಹೊಡೆತ ತಿಂದಿವೆ. ಬಹುತೇಕರಿಗೆ ಈಗ ಕೆಲಸವಿಲ್ಲ. ಸರಕಾರಿ ಆಸ್ಪತ್ರೆಗಳಲ್ಲೂ ಇವರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಔಷಧ ಹಾಗೂ ಶ್ಮಶಾನಕ್ಕಾಗಿ ಖರ್ಚು ಮಾಡಲು ಹಣವೂ ಇಲ್ಲ. ಬಡವರಾಗಿ ಹುಟ್ಟಲೇಬಾರದು ಎಂದು ಅವರೆಲ್ಲ ಈಗ ಪ್ರಾರ್ಥಿಸುತ್ತಿದ್ದಾರೆ. ಮನೆಯಲ್ಲಿ ಯಾರಾದರೂ ತೀರಿಕೊಂಡರೆ ಶವ ವಿಲೇವಾರಿಗೆ ಅಧಿಕಾರಿಗಳು 2ರಿಂದ 7 ದಿನಗಳ ಕಾಲ ತೆಗೆದುಕೊಳ್ಳುತ್ತಿದ್ದರು. ಶವಗಳು ಕೊಳೆತು ನಾರುತ್ತಿದ್ದವು. ಸೋಂಕಿನ ಅಪಾಯದಿಂದ ತಪ್ಪಿಸಿಕೊಳ್ಳಲು ಮನೆಮಂದಿ ಈ ಶವಗಳನ್ನು ಬೀದಿಗಳಲ್ಲಿ, ಪಾರ್ಕಿನ ಬೆಂಚುಗಳಲ್ಲಿ ಇರಿಸಿದ್ದರು. ಅವರೆಲ್ಲರೂ ಬಡವರಾಗಿದ್ದರು ಎಂದು ಮಾನವ ಹಕ್ಕುಗಳ ರಕ್ಷಣ ಸಮಿತಿಯ ನಿರ್ದೇಶಕ ಬಿಲ್ಲಿ ನವರೆಟಿ ವಿವರಿಸಿದ್ದಾರೆ. ಅವರಿಗೆ ಕುಡಿಯುವ ನೀರೂ ಇಲ್ಲ. ಮಾಂಟೆ ಸಿನಾಯ್‌, ಬಾಸ್ಟಿಯನ್‌ ಪಾಪ್ಯುಲರ್‌, ಸಬರ್ಬಿಯೋ ಮತ್ತು ಟ್ರಿನಿಟಾರಿಯಾ ಪ್ರದೇಶಗಳು ಜನದಟ್ಟಣೆಯಿಂದ ಕೂಡಿವೆ. ರೋಗ ಹರಡಲು ಇಷ್ಟು ಸಾಲದೇ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.