ಮಂದಾರದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ; ವಿಷಪೂರಿತ ಹೊಗೆ
Team Udayavani, May 30, 2020, 5:48 AM IST
ಮಂಗಳೂರು: ನಗರದ ಮಂದಾರಕ್ಕೆ ಕಳೆದ ವರ್ಷ ಮಳೆಗಾಲದಲ್ಲಿ ಜರಿದು ಬಂದ ಪಚ್ಚನಾಡಿಯ ತ್ಯಾಜ್ಯ ರಾಶಿಗೆ ಶುಕ್ರವಾರ ಮತ್ತೆ ಬೆಂಕಿ ಬಿದ್ದಿದ್ದು, ಪರಿಸರದಲ್ಲಿ ವಿಷಪೂರಿತ ಹೊಗೆ ವ್ಯಾಪಿಸಿತ್ತು.
ಸಂಜೆ ವೇಳೆಗೆ ಬೆಂಕಿ ಬಿದ್ದಿದ್ದು, ವಿಷಯ ತಿಳಿದು ಪಾಲಿಕೆ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ, ಗಾಳಿಯ ವೇಗಕ್ಕೆ ಬೆಂಕಿಯು ವ್ಯಾಪಿಸಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
ತ್ಯಾಜ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಹಿಟಾಚಿ ಮೂಲಕ ಮಣ್ಣು ತಂದು ಸುರಿಯಲಾಗುತ್ತಿದೆ. ಆದರೆ ಗಾಳಿಯಲ್ಲಿ ಸೇರುತ್ತಿರುವ ವಿಷಪೂರಿತ ಹೊಗೆ ಸಮೀಪದ ಮೂರು-ನಾಲ್ಕು ವಾರ್ಡ್ ಗಳ ಜನರ ಆತಂಕ ಹೆಚ್ಚಿಸಿದೆ. ಮಂದಾರ ಪ್ರದೇಶದ ಕೆಲವು ಮನೆಯ ಜನರು ಅಲ್ಲಿಂದ ತೆರವಾಗಿದ್ದರೂ, 2-3 ಮನೆಯವರೂ ಅಲ್ಲೇ ವಾಸವಾಗಿದ್ದಾರೆ. ಹೀಗಾಗಿ ವಿಷಪೂರಿತ ಹೊಗೆ ಅವರ ಆತಂಕ ಹೆಚ್ಚಿಸಿದೆ.
ಮಳೆಗೆ ಮತ್ತೆ ಆತಂಕ
ಕೆಲವೇ ದಿನಗಳಲ್ಲಿ ಮಳೆ ಶುರುವಾಗುವ ಹಿನ್ನೆಲೆಯಲ್ಲಿ ಮಳೆ ನೀರಿಗೆ ಇನ್ನೇನು ಸಮಸ್ಯೆ ಆಗಲಿವೆಯೋ ಎಂಬ ಆತಂಕವೂ ಎದುರಾಗಿದೆ. ಕಳೆದ ವರ್ಷ ಮಳೆಗೆ ಪಚ್ಚನಾಡಿಯ ತ್ಯಾಜ್ಯರಾಶಿ ಜರಿದು ಮಂದಾರದ 2 ಕಿ.ಮೀ ವ್ಯಾಪ್ತಿಯಲ್ಲಿ ಹರಡಿತ್ತು. ಸಾವಿರಾರು ತೆಂಗು, ಕಂಗು ಇದರಡಿಯಲ್ಲಿ ಸಿಲುಕಿಕೊಂಡಿತ್ತು. ಜರಿದು ಬಂದ ತ್ಯಾಜ್ಯರಾಶಿಯು ಈ ಬಾರಿಯ ಮಳೆಗೆ ಇನ್ನಷ್ಟು ಅಪಾಯ ಸೃಷ್ಟಿಸುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ