ವಿಶ್ವಸಂಸ್ಥೆಯಲ್ಲಿ ಎಡವಿ ಬಿದ್ದ ಪಾಕಿಸ್ಥಾನ
ಭಾರತ ವಿರುದ್ಧ ಗುಂಪು ಕಟ್ಟುವ ಯತ್ನಕ್ಕೆ ಮಾಲ್ಡೀವ್ಸ್ , ಯುಎಇ ತಡೆ
Team Udayavani, May 30, 2020, 6:30 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪದೇ ಪದೆ ಕೇಡಿಗೆ ಗುರಿ ಪಡಿಸಲು ಹೋಗಿ ಅವಮಾನ ಅನುಭವಿಸಿದರೂ ಪಾಕಿಸ್ಥಾನ ಪಾಠ ಕಲಿತಂತೆ ಕಾಣಿಸುತ್ತಿಲ್ಲ. ಈಗ ವಿಶ್ವಸಂಸ್ಥೆಯಲ್ಲಿ ಮತ್ತೂಮ್ಮೆ ಇಂತಹ ಒಂದು ಯತ್ನಕ್ಕೆ ಮುಂದಾಗಿ ಅದು ಎಡವಟ್ಟು ಮಾಡಿ ಕೊಂಡಿದೆ.
ಇಸ್ಲಾಮೋಫೋಬಿಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ)ಯ ರಾಯಭಾರಿಗಳ ಅನೌಪಚಾರಿಕ ಗುಂಪು ಹುಟ್ಟುಹಾಕುವ ಪಾಕ್ ಯತ್ನವನ್ನು ಯುಎಇ ಮತ್ತು ಮಾಲ್ಡೀವ್ಸ್ ವಿಫಲಗೊಳಿಸಿವೆ ಎಂದು ಸ್ವತಃ ಪಾಕಿಸ್ಥಾನದ ಪತ್ರಿ ಕೆ “ಡಾನ್’ ವರದಿ ಮಾಡಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಒಐಸಿ ಸದಸ್ಯ ದೇಶಗಳ ರಾಯಭಾರಿಗಳ ಸಭೆ ಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸ ಲಾಗಿತ್ತು. ಈ ಸಭೆಯಲ್ಲಿ ಪಾಕ್ ಅನೌಪ ಚಾರಿಕ ಸಂಘಟನೆಯನ್ನು ಹುಟ್ಟುಹಾಕುವ ಪ್ರಸ್ತಾವ ವನ್ನು ಮುಂದಿಟ್ಟಿತ್ತು. ಆದರೆ ಇದನ್ನು ವಿರೋಧಿಸಿದ ಮಾಲ್ಡೀವ್ಸ್, ಇಸ್ಲಾಮೋ ಫೋಬಿಯಾಕ್ಕಾಗಿ ಭಾರತವನ್ನು ಪ್ರತ್ಯೇಕಿಸುವುದು ವಾಸ್ತವಿಕವಾಗಿ ಸಮಂಜಸವಲ್ಲ. ಅಲ್ಲದೆ ಇಂತಹ ಕ್ರಮ ದಕ್ಷಿಣ ಏಷ್ಯಾ ವಲಯದಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ಕೂಡ ಹಾನಿ ಉಂಟು ಮಾಡುತ್ತದೆ ಎಂದು ಪ್ರತಿಪಾದಿಸಿತು. ಜತೆಗೆ ಭಾರತದ ವಿರುದ್ಧ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ಬೆಂಬಲಿಸಲು ಮಾಲ್ಡೀವ್ಸ್ ನಿರಾಕರಿಸಿತು ಎಂದು ಮೂಲಗಳನ್ನು ಉಲ್ಲೇಖೀಸಿ “ಡಾನ್’ ಪತ್ರಿಕೆ ವರದಿ ಮಾಡಿದೆ.
ಯುಎಇ ವಿರೋಧ
ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಕೂಡ ಪಾಕಿಸ್ಥಾನದ ಈ ನಿಲುವನ್ನು ಬೆಂಬಲಿಸಲಿಲ್ಲ. ಕೇವಲ ವಿದೇಶಾಂಗ ಸಚಿವರು ಮಾತ್ರ ಇಂತಹ ಗುಂಪನ್ನು ರಚಿಸಿಕೊಳ್ಳಬಹುದು ಎಂದು ಅದು ಪ್ರತಿಪಾದಿಸಿದೆ ಎಂದು “ಡಾನ್’ ವರದಿ ಮಾಡಿದೆ.
ಮಾಲ್ಡೀವ್ಸ್ ಖಡಕ್ ಖಂಡನೆ
ವಿಶ್ವಸಂಸ್ಥೆಯಲ್ಲಿ ಮಾಲ್ಡೀವ್ಸ್ನ ಖಾಯಂ ಪ್ರತಿನಿಧಿ ಥಿಲ್ಮೀಜಾ ಹುಸೇನ್ ಮಾತನಾಡಿ, ಇಸ್ಲಾಮೋಫೋಬಿಯಾ ಅಥವಾ ಇನ್ನಿತರ ಯಾವುದೇ ರಾಜಕೀಯ ಅಥವಾ ಇತರ ಕಾರಣ ಗಳಿಗಾಗಿ ಹಿಂಸೆಯನ್ನು ಪ್ರಚೋದಿಸುವ ಯತ್ನವನ್ನು ಮಾಲ್ಡೀವ್ಸ್ ಖಂಡಿಸುತ್ತದೆ. ಇಂತಹ ಯತ್ನದ ವಿರುದ್ಧ ಕ್ರಮ ಕೈಗೊಳ್ಳಲು ನಾವು ಸಿದ್ಧ. ಆದರೆ ನಿರ್ದಿಷ್ಟವಾಗಿ ಒಂದು ದೇಶವನ್ನು ಗುರಿಯಾಗಿಸಿ ಗುಂಪು ರಚನೆಗೆ ಸಿದ್ಧರಿಲ್ಲ ಎಂದರು.
ಯಾವುದೋ ಪ್ರಚೋದನೆಗೆ ಒಳಗಾಗಿ ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಬರಹಗಳು, ಹೇಳಿಕೆಗಳು, ತಪ್ಪು ಮಾಹಿತಿಯ ಅಭಿಯಾನವನ್ನು ಭಾರತದ 130 ಕೋಟಿ ಜನರ ಭಾವನೆಗಳ ಪ್ರತಿನಿಧಿಯಾಗಿ ನಿರ್ಣ ಯಿಸ ಬಾರದು ಎಂದೂ ಥಿಲ್ಮೀಜಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು