ಅವಾಂತರ ಸೃಷ್ಟಿಸಿದ ವರ್ಷಧಾರೆ


Team Udayavani, May 30, 2020, 6:01 AM IST

tree rain

ಬೆಂಗಳೂರು: ನಗರದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮತ್ತೆ 46ಕ್ಕೂ ಅಧಿಕ ಮರ ಮತ್ತು ರೆಂಬೆಗಳು ನೆಲಕಚ್ಚಿವೆ. ಇದರಿಂದ ಹಲವು ವಾಹನಗಳು ಜಖಂಗೊಂಡಿದ್ದು, ಕೆ.ಆರ್‌. ವೃತ್ತ ಮತ್ತು ಜಯಮಹಲ್‌ನ ನಂದಿದುರ್ಗದಲ್ಲಿ ಚಲಿಸುತ್ತಿದ್ದ ಎರಡು ಆಟೋಗಳ ಮೇಲೆಯೇ ಮರದ ರೆಂಬೆ ಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂ‌ವಿಸಿಲ್ಲ.

ಮೂರು ದಿನಗಳ ಅಂತರದಲ್ಲಿ ಚಲಿಸುವ ಮೇಲೆ ರೆಂಬೆ ಬೀಳುತ್ತಿರುವುದು ಎರಡನೇ ಘಟನೆ ಇದಾಗಿದೆ. ಗಾಳಿ  ಸಹಿತ ಮಳೆ ಹಾಗೂ ಪರಿಣಾಮ ಧರೆಗುರುಳುವ ಮರಗಳಿಗೆ ಇತ್ತೀಚೆಗೆ ವಾಹನಗಳು ಜಖಂಗೊಳ್ಳುತ್ತಿರುವು  ದರಿಂದ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಮಲ್ಲೇಶ್ವರ, ಸುಬ್ರಹ್ಮಣ್ಯ ನಗರ,  ಟಿ.ಆರ್‌. ಮಿಲ್‌,  ಬಸವೇಶ್ವರನಗರ ಸೇರಿದಂತೆ ಹಲವೆಡೆ ರಸ್ತೆ ಬದಿ ನಿಂತಿದವಾಹನಗಳ ಮೇಲೆಯೇ ಮರ ಮತ್ತು ಮರದ ರೆಂಬೆಗಳು ಬಿದ್ದಿವೆ.

ಇದರಿಂದ ವಾಹನಗಳು ಜಖಂಗೊಂಡಿವೆ. ಸಂಜೆ ಕೆ.ವೃತ್ತದಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ರೆಂಬೆ ಬಿದ್ದಿದೆ. ಆಟೋದಲ್ಲಿ ಯಾರೂ ಹಾಗೂ ಹಿಂಭಾಗದಲ್ಲಿ ರೆಂಬೆ ಬಿದ್ದಿದ್ದರಿಂದ ಅನಾಹುತ ತಪ್ಪಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಮಾಹಿತಿ ನೀಡಿದರು. ವಿದ್ಯಾರಣ್ಯಪುರದಲ್ಲೂ ಮರದ ಕೊಂಬೆ ಬಿದ್ದು, ಆಟೋ ಜಖಂಗೊಂಡಿದೆ.  ನಗರದ ಉತ್ತರ ಭಾಗದಲ್ಲಿ ಕನಿಷ್ಠ 30ರಿಂದ ಗರಿಷ್ಠ 70 ಮಿ.ಮೀ. ಮಳೆ ದಾಖಲಾಗಿದೆ.

ಈ ಭಾಗದ ಹೆಬ್ಟಾಳ ಮೇಲ್ಸೇತುವೆ ಬಳಿ ಎಸ್ಟೀಮ್‌ ಮಾಲ್‌ ಎದುರು ರಸ್ತೆ ಜಲಾವೃತಗೊಂಡಿತು. ಅದೇ ರೀತಿ, ಕೆ.ಆರ್‌. ವೃತ್ತ ಒಳಗೊಂಡಂತೆ  ಪ್ರಮುಖ ಅಂಡರ್‌ಪಾಸ್‌ಗಳು, ಗ್ರೇಡ್‌ ಸಪರೇಟರ್‌ಗಳು, ಜಂಕ್ಷನ್‌ಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತಡೆಯುಂಟಾಯಿತು. ಪೀಕ್‌ ಅವರ್‌ನಲ್ಲಿ ಮಳೆ ಶುರುವಾಗಿದ್ದರಿಂದ ಹಾಗೂ ಖಾಸಗಿ ವಾಹನಗಳ  ಸಂಚಾರವೇ ಹೆಚ್ಚಿದ್ದುದರಿಂದ ವಾಹನ ಸವಾರರಿಗೆ ಇದರ ಬಿಸಿ ತುಸು ಜೋರಾಗಿಯೇ ತಟ್ಟಿತು.

ಮರಗಳು ಧರೆಗೆ – ವಿದ್ಯುತ್‌ ಕಡಿತ: ಅಲ್ಲಲ್ಲಿ ಮರ ಮತ್ತು ಮರದ ರೆಂಬೆಗಳು ಬಿದ್ದಿದ್ದರಿಂದ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕಾಯಿತು. ಪರಿಣಾಮ ಅಲ್ಲೆಲ್ಲಾ ಸಂಚಾರದಟ್ಟಣೆ ಉಂಟಾಯಿತು. ನಗರಟಿ.ಆರ್‌. ಮಿಲ್‌,  ಶಿವಾಜಿನಗರ, ಪಟ್ಟೇಗಾರಪಾಳ್ಯ, ಬಸವೇಶ್ವರನಗರ, ರಾಜಾಜಿನಗರ 1ನೇ ಬ್ಲಾಕ್‌, ಮಾಗಡಿ ರಸ್ತೆ, ಜೆ.ಸಿ. ನಗರ, ಚಾಮರಾಜಪೇಟೆ, ಸೆಂಟ್‌ ಜೋಸೆಫ್ ಕಾಲೇಜು ಬಳಿ, ಲುಂಬಿನಿ ಗಾರ್ಡನ್‌, ವೆಸ್ಟ್‌ ಆಫ್ ಕಾರ್ಡ್‌ ರೋಡ್‌, ಜಿಪಿಒ, ಶೇಷಾದ್ರಿಪುರ,

ಸದಾಶಿವನಗರ, ಡಾ.ರಾಜಕುಮಾರ್‌ ರಸ್ತೆ, ಬಿಇಎಂಎಲ್‌ ಲೇಔಟ್‌ ಸೇರಿದಂತೆ ವಿವಿಧೆಡೆ ಮರ ಮತ್ತು ರೆಂಬೆಗಳು ಬಿದ್ದ ಬಗ್ಗೆ ವರದಿಯಾಗಿದೆ ಎಂದು ಬಿಬಿಎಂಪಿ ನಿಯಂತ್ರಣಾ ಕೊಠಡಿ ಮಾಹಿತಿ ನೀಡಿದೆ. ಈ ಮಧ್ಯೆ  ಬೆಸ್ಕಾಂಗೆ ಗ್ರಾಹಕರು ದೂರುಗಳ ಮಳೆಗರೆದಿದ್ದಾರೆ. ಕೆಲವೆಡೆ ವಿದ್ಯುತ್‌ ತಂತಿಗಳ ಮೇಲೆ ಮರದ ರೆಂಬೆಗಳು ಬಿದ್ದಿದ್ದರಿಂದ ನಗರದ ಹಲವು ಪ್ರದೇಶಗಳಲ್ಲಿ ಕತ್ತಲೆ ಆವರಿಸಿತ್ತು. ಗಂಟೆಗಟ್ಟಲೆ ಕರೆಂಟ್‌ ಇಲ್ಲದ್ದರಿಂದ ಸಹಾಯವಾಣಿ, ಬೆಸ್ಕಾಂ  ಕಚೇರಿಗಳಿಗೆ ನೂರಾರು ಕರೆ ಬಂದಿವೆ.

ಎಲ್ಲೆಲ್ಲಿ ಟ್ರಾಫಿಕ್‌ ಜಾಮ್‌?: ಭಾರೀ ಮಳೆಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಶಿವಾನಂದ ವೃತ್ತ, ಮೆಜೆಸ್ಟಿಕ್‌, ಯಶವಂತಪುರ, ನಾಗವಾರ, ಮೈಸೂರು ರಸ್ತೆ, ಎಲೆಕ್ಟ್ರಾನಿಕ್‌ ಸಿಟಿ, ಹೊಸೂರು ರಸ್ತೆ, ವಿಮಾನ  ನಿಲ್ದಾಣ ರಸ್ತೆ, ಕೆ.ಆರ್‌. ವೃತ್ತ, ಮಾರುಕಟ್ಟೆ ಎಂ.ಜಿ.ರಸ್ತೆ ಸೇರಿ ಸಾಕಷ್ಟು ಪ್ರದೇಶಗಳಲ್ಲಿ ಭಾರೀ ಸಂಚಾರ ಠಾಣೆ ಉಂಟಾಗಿತ್ತು. ಪರಿಣಾಮ ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸ ಪಟ್ಟರು. ಶಿವಾನಂದ ವೃತ್ತದ ಕೆಳ ಭಾಗದಲ್ಲಿ ನೀರು  ಬಿದ್ದು, ಅದರ ಮಧ್ಯೆಯೇ ಸವಾರರು ವಾಹನ ಚಲಾಯಿಸಿದರು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.