ಕೂಡಲಸಂಗಮದಲ್ಲಿ ಭಕ್ತರ ದರ್ಶನಕ್ಕೆ ಸಿದ್ಧತೆ
Team Udayavani, May 30, 2020, 10:11 AM IST
ಕೂಡಲಸಂಗಮ: ಜೂನ್ 1ರಿಂದ ದೇವಾಲಯಗಳ ಪ್ರವೇಶಕ್ಕೆ ಅವಕಾಶ ದೊರೆಯುವ ನಿರೀಕ್ಷೆಯೊಂದಿಗೆ ಸುಕ್ಷೇತ್ರ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಭಕ್ತರ ದರ್ಶನಕ್ಕೆ ಸಿದ್ಧಗೊಳುತ್ತಿದೆ.
ಶುಕ್ರವಾರ ಬೆಳಗೆಯಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಸಿಬ್ಬಂದಿ ಸ್ವಚ್ಛತಾ ಅಭಿಯಾನ, ದರ್ಶನದ ಮಾರ್ಗದುದ್ದಕ್ಕೂ 6 ಮೀಟರ್ಗೆ ಒಂದರಂತೆ ಚೌಕಾಕಾರದ ಬಾಕ್ಸ್ಗೆ ಬಣ್ಣ ಹಚ್ಚುವ ಕಾರ್ಯ ಆರಂಭಗೊಂಡಿದೆ. ಸರ್ಕಾರ ಲಾಕ್ಡೌನ್ ಮಾಡಿ ದೇವಾಲಯ ಪ್ರವೇಶಕ್ಕೆ ಅವಕಾಶ ಕೊಡಬಾರದು ಎಂದು ಸೂಚಿಸಿದಂತೆ ಮಂಡಳಿಯು ಮಾ. 17ರಿಂದಲೇ ಸಂಗಮೇಶ್ವರ ದೇವಾಲಯ ಪ್ರವೇಶ ನಿಷೇಧಿಸಿತ್ತು. ಏ. 12ರಂದು ನಡೆಯಬೇಕಿದ್ದ ಸಂಗಮೇಶ್ವರ ಜಾತ್ರೆ ರದ್ದುಗೊಂಡು ದರ್ಶನಕ್ಕೆ ಅವಕಾಶ ಕೊಟ್ಟಿರಲಿಲ್ಲ. ದೇವಾಲಯ ಪ್ರವೇಶಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಮಾರ್ಗಸೂಚಿ ಬಂದಿಲ್ಲ, ಬಂದ ನಂತರ ಭಕ್ತರಿಗೆ ದೇವಾಲಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಸದ್ಯ ಸಿಬ್ಬಂದಿಯಿಂದ ಸಿದ್ಧತೆಯ ಕಾರ್ಯ ನಡೆಸಿದ್ದೇವೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತೆ ರಾಜಶ್ರೀ ಅಗಸರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು