5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ
Team Udayavani, May 30, 2020, 10:17 AM IST
ಬಾಗಲಕೋಟೆ: ಹುನಗುಂದ ತಾಲೂಕಿನ ಅಮೀನಗಡ ಮತ್ತು ಕಮತಗಿ ಪ.ಪಂ. ವ್ಯಾಪ್ತಿಯಲ್ಲಿ ಎಸ್ಎಫ್ಸಿ ವಿಶೇಷ ಅನುದಾನದಡಿ ತಲಾ 2.50 ಕೋಟಿ ಸೇರಿ ಒಟ್ಟು 5 ಕೋಟಿ ರೂ. ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ| ವೀರಣ್ಣ ಚರಂತಿಮಠ ಶುಕ್ರವಾರ ಚಾಲನೆ ನೀಡಿದರು.
ಅಮೀನಗಡ ಮತ್ತು ಕಮತಗಿ ಪಟ್ಟಣದ ವಿವಿಧ ವಾರ್ಡಗಳಲ್ಲಿ ಸಿಸಿ ರಸ್ತೆ, ಪ್ಲೇವರ್ ಬ್ಲಾಕ್, ಚರಂಡಿ ನಿರ್ಮಾಣ, ಕಾಬಲ್ ಸ್ಟೋನ್ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ರಸ್ತೆ ಮಧ್ಯವಿರುವ ವಿದ್ಯುತ್ ಕಂಬ ತೆರವುಗೊಳಿಸಬೇಕು. ತಾಂತ್ರಿಕ ಸಮಸ್ಯೆಗಳು ಇದ್ದಲ್ಲಿ ಅವುಗಳನ್ನು ಸರಿಪಡಿಸಿಕೊಂಡು ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು.
ಅಮೀನಗಡ ಪ.ಪಂ ಗೆ 14ನೇ ಹಣಕಾಸು ಯೋಜನೆಯಡಿ 28.60 ಲಕ್ಷ ರೂ.ಗಳಲ್ಲಿ ಖರೀದಿಸಲಾದ ಹೊಸ ಜೆಸಿಬಿ ಯಂತ್ರಕ್ಕೆ ಬಾಗಲಕೋಟೆ ಡಾ|ಶಾಸಕ ವೀರಣ್ಣ ಚರಂತಿಮಠ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ತಹಶೀಲ್ದಾರ್ ಬಸವರಾಜ ನಾಗರಾಳ, ಅಮೀನಗಡ ಪಪಂ ಮುಖ್ಯಾಧಿಕಾರಿ ಐ.ಬಿ ಕೊಣ್ಣೂರ, ಕಿರಿಯ ಆರೋಗ್ಯ ನಿರೀಕ್ಷಕ ಸಂತೋಷ ವ್ಯಾಪಾರಿಮಠ, ಸದಸ್ಯರಾದ ಶಂಕ್ರಮ್ಮ ಗೌಡರ, ವಿಜಯಕುಮಾರ ಕನ್ನೂರ, ಗುರು ಚಳ್ಳಗಿಡದ, ಕಮತಗಿ ಪ.ಪಂ ಮುಖ್ಯಾಧಿಕಾರಿ ಬಿ.ಟಿ ಬಂಡಿವಡ್ಡರ, ಸದಸ್ಯರಾದ ಸಂಗಣ್ಣ ಗಾಣಿಗೇರ, ಪ್ರಕಾಶ ಗುಳೇದಗುಡ್ಡ, ಗಂಗಾಧರ ಕ್ಯಾದಿಗೇರಿ, ನಾಗರತ್ನ ಪೂಜಾರಿ, ಜಾನಕಿ ಕುಮಚಗಿ, ವಿಜಯಲಕ್ಷ್ಮಿ ಕುಮಚಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ