ಸಾಮಗ್ರಿ ವಿತರಣೆ: ಸಾಮಾಜಿಕ ಅಂತರ ಮಾಯ
Team Udayavani, May 30, 2020, 10:51 AM IST
ಸಾಮಾಜಿಕ ಅಂತರವಿಲ್ಲದೇ ಆಹಾರ ಸಾಮಗ್ರಿ ಪಡೆಯಲು ಕುಳಿತ ಮಹಿಳೆಯರು
ಶಹಾಬಾದ: ತಾಲೂಕಿನ ಗೋಳಾ (ಕೆ) ಗ್ರಾಮದಲ್ಲಿ ಸಾಮಾಜಿಕ ಅಂತರವಿಲ್ಲದೇ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹಾಗೂ ತಾಲೂಕಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿಯೇ ಶುಕ್ರವಾರ ಬಡವರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಿದರು.
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಬಡ ಜನರಿಗೆ ಆಹಾರ ಸಾಮಗ್ರಿಗಳನ್ನು ಟ್ರಕ್ ಮೂಲಕ ತಂದು ಹಂಚಲಾಯಿತು. ಶಾಸಕರು ಬರುವುದಕ್ಕಿಂತ ಮುಂಚೆ ಗೋಳಾ (ಕೆ) ಗ್ರಾಮದ ಬಡ ಮಹಿಳೆಯರನ್ನು ಗ್ರಾಮದ ಶಾಲೆಯೊಂದರಲ್ಲಿ ಸಾಮಾಜಿಕ ಅಂತರವಿಲ್ಲದೇ ಕೂಡಿಸಲಾಗಿತ್ತು. ಸರ್ಕಾರದ ಆದೇಶ ಗಾಳಿಗೆ ತೂರಿದರೂ ಸ್ಥಳದಲ್ಲಿಯೇ ಬಿಡಾರ ಹೂಡಿದ ಅಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದರು.
ಶಾಸಕರು ಆಹಾರ ಸಾಮಗ್ರಿಗಳನ್ನು ಹಂಚಲು ಪ್ರಾರಂಭಿಸುತ್ತಿದ್ದಂತೆ ಫಲಾನುಭವಿಗಳಿಗಿಂತ ಬಿಜೆಪಿ ಕಾರ್ಯಕರ್ತರೇ ಕಾಣುತ್ತಿದ್ದರು. ಆಹಾರ ಪೊಟ್ಟಣಕ್ಕಾಗಿ ಮುಗಿಬೀಳುತ್ತಿದ್ದರೂ ಯಾರೂ ಏನು ಮಾಡಲಿಲ್ಲ. ಕೆಲವರು ಮಾಸ್ಕ್ ಧರಿಸಿದರೆ ಬಹುತೇಕರು ಮಾಸ್ಕ್ ಧರಿಸದೇ ಇದ್ದುದಕ್ಕೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದರು. ಶಾಸಕರ ಮುಂದೆಯೇ ಇಷ್ಟೆಲ್ಲ ಬೆಳವಣಿಗೆ ನಡೆದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ಧೋರಣೆ ತೋರಿದರು.
ತಹಶೀಲ್ದಾರ್ ಸುರೇಶ ವರ್ಮಾ, ಕೋವಿಡ್-19 ನೋಡಲ್ ಅಧಿಕಾರಿ ನೀಲಗಂಗಮ್ಮ ಬಬಲಾದ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ತೊನಸನಹಳ್ಳಿ (ಎಸ್) ಗ್ರಾ.ಪಂ ಅಧ್ಯಕ್ಷ ವಿಜಯಾನಂದ ಮಾಣಿಕ್, ಶಾಂತಕುಮಾರ ಮಾಣಿಕ್, ಮರಲಿಂಗ ಗಂಗಭೋ, ರವಿ ಸಣತಮ್, ಶಿವಕುಮಾರ ನಾಯ್ಕಲ್, ಗ್ರಾ.ಪಂ ಸದಸ್ಯೆ ರಾಜೇಶ್ವರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ