ಜನರಿಗೆ ಖಾತ್ರಿ ಯೋಜನೆ ಆಸರೆ: ಮುಕ್ಕಣ್ಣ
Team Udayavani, May 30, 2020, 4:38 PM IST
ಸಾಂದರ್ಭಿಕ ಚಿತ್ರ
ಗುರುಮಠಕಲ್: ತಾಲೂಕಿನ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಅವರು ಮೊದಲ ಬಾರಿಗೆ ತಾಪಂ ಸಾಮಾನ್ಯ ಸಭೆ ನಡೆಸಿದರು.
ತಾಲೂಕಿನ ಗಾಜರಕೋಟ ಗ್ರಾಮದಲ್ಲಿ 700 ಜನರು ಬೆಂಗಳೂರಿನಿಂದ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತ್ರಿಯ ಜಾಬ್ ಕಾರ್ಡ್ ನೀಡುವ ಮೂಲಕ ವಲಸೆಯಿಂದ ಹಿಂದಿರುಗಿದವರಿಗೆ ಕೆಲಸದ ಖಾತ್ರಿ ಯೋಜನೆಗೆ ಚಾಲನೆ ನೀಡಿದರು. ಗಾಜರಕೋಟ ಗ್ರಾಮದ ಮನೆ ಮನೆಗೆ ತೆರಳಿ ಬೆಂಗಳೂರಿನಿಂದ ಬಂದಿರುವ ವಲಸೆ ಕಾರ್ಮಿಕರನ್ನು ಗುರುತಿಸಿ ಒಂದು ಕುಟುಂಬಕ್ಕೆ 100 ದಿನಗಳ ಕೆಲಸವಾಗಿದ್ದು, ದಿನಕ್ಕೆ 275 ರೂ.ಯಂತೆ ಕೂಲಿ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಸಲಕರಣೆಗಳಿಗೆ 10 ರೂ. ಪಾವತಿಸಲಾಗುವುದು. ಪ್ರತಿ ವಾರಕ್ಕೊಮ್ಮೆ ಕೂಲಿ ಪಾವತಿಸಲಾಗುವುದು ಎಂದು ಕೂಲಿಕಾರರಿಗೆ ಹೇಳಿದರು.
ಉದ್ಯೋಗ ಖಾತ್ರಿಗೆ ಸಂಬಂಧಪಟ್ಟಂತಹ ಸಂದೇಹ ಮತ್ತು ಸಮಸ್ಯೆಗಳ ಬಗ್ಗೆ ಕೂಲಿಗಾರರ ಜತೆ ಸಂವಾದ ನಡೆಸಿ ಸಮಸ್ಯೆಗಳನ್ನು ಪರಿಹರಿಸಿದರು. ಎಡಿ ಚಂದ್ರಶೇಖರ್ ಪವಾರ, ಗಾಜರಕೋಟ ಪಿಡಿಒ ಮಹಾದೇವಪ್ಪ ಸೇರಿದಂತೆ ತಾಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ