ಪಿಪಿಪಿ ಮಾದರಿ ಮೂಲ ಸೌಕರ್ಯ ಯೋಜನೆ
ಹದಿನಾಲ್ಕು ಪ್ರಮುಖ ವಲಯಗಳಲ್ಲಿ ಜಾರಿಗೆ ರಾಜ್ಯ ಸರಕಾರದ ನಿರ್ಧಾರ
Team Udayavani, May 31, 2020, 6:45 AM IST
ಬೆಂಗಳೂರು: ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ಆಯ್ದ 14 ಪ್ರಮುಖ ವಲಯಗಳಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಹೆಚ್ಚು ಯೋಜನೆ ಕೈಗೆತ್ತಿಕೊಳ್ಳಬೇಕೆಂದು ಸಿಎಂ ಬಿಎಸ್ವೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕೋವಿಡ್-19 ನಿಯಂತ್ರಣಕ್ಕಾಗಿ ಕೃಷಿ, ಶಿಕ್ಷಣ, ಇಂಧನ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ, ಕೈಗಾರಿಕೆ, ಸಾರಿಗೆ ಮತ್ತು ಸಾಗಣೆ, ವಸತಿ, ಗ್ರಾಮೀಣಾಭಿವೃದ್ಧಿ, ದೂರ ಸಂಪರ್ಕ ಸಹಿತ 14 ವಲಯಗಳಲ್ಲಿ ಪಿಪಿಪಿ ಮಾದರಿಯಡಿ ಮೂಲ ಸೌಕರ್ಯ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಆದ್ಯತೆ ನೀಡಿದೆ. ರಾಜ್ಯದಲ್ಲೂ ಈ ಮಾದರಿಯಲ್ಲಿ 500 ಕೋ.ರೂ. ಮೌಲ್ಯದ ಯೋಜನೆಗಳಿಗೆ ಅನು ಮೋದನೆ ನೀಡಲಾಗಿದೆ ಎಂದರು.
ಹಾಸನ- ಮಂಗಳೂರು ರೈಲು ಅಭಿವೃದ್ಧಿ ಕಂಪೆನಿ, ಕುಡಚಿ-ಬಾಗಲಕೋಟೆ ರೈಲ್ವೇ ಯೋಜನೆಯ ಅನುಷ್ಠಾನಕ್ಕಿರುವ ಅಡ್ಡಿಗಳನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ವಿಮಾನ ನಿಲ್ದಾಣಗಳ ಅಭಿವೃದ್ಧಿ, ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಯೋಜನೆ ಜಾರಿಯಲ್ಲೂ ಉತ್ತಮ ಪ್ರಗತಿ ಸಾಧಿಸಲು ಗಮನಹರಿಸಬೇಕು ಎಂದು ಸಿಎಂ ಸೂಚಿಸಿದರು.
ಕೇಂದ್ರ ಸರಕಾರದ ಅನುಮತಿ ಅಗತ್ಯ
ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆಗೆ ಕೇಂದ್ರದಿಂದ ಅಂತಿಮ ಮಂಜೂರಾತಿ ಶೀಘ್ರವಾಗಿ ಪಡೆಯಬೇಕಿದೆ. ಇದಕ್ಕಾಗಿ ಅಧಿಕಾರಿ ಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ