ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲ


Team Udayavani, May 31, 2020, 6:51 AM IST

ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲ

ಕೊಪ್ಪಳ: ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ಪೂರ್ವ ಸಿದ್ಧತೆಯಿಲ್ಲದೆ ಮೋದಿ ಸರ್ಕಾರ ಲಾಕ್‌ಡೌನ್‌ ಘೋಷಿಸಿದೆ. ಸೋಂಕಿತರ ಸಂಖ್ಯೆ ಕಡಿಮೆಯಿದ್ದಾಗ ಬಿಗಿ ಮಾಡಿ, ಸೋಂಕಿತರ ಸಂಖ್ಯೆ ಹೆಚ್ಚಾದಾಗ ಲಾಕ್‌ಡೌನ್‌ ತೆರೆಯಲಾಗಿದೆ. ಹೀಗಾಗಿ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ವೇಳೆ 65 ದಿನಗಳ ಕಾಲ ಸರ್ಕಾರ ಕೃಷಿ, ಕೂಲಿ, ಕಾರ್ಮಿಕರ, ಬೀದಿ ವ್ಯಾಪಾರಸ್ಥರ ಬಗ್ಗೆ ಅಮಾನವೀಯವಾಗಿ ವರ್ತಿಸಿದೆ. ಕಾಂಗ್ರೆಸ್‌ ನಾಯಕರು ಕೊರೊನಾ ಬಗ್ಗೆ ಮೊದಲೇ ಎಚ್ಚರಿಸಿದರೂ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಲಾಕ್‌ಡೌನ್‌ ವೇಳೆ ನೂರಾರು ಕಿಮೀ ನಡೆದ ಕಾರ್ಮಿಕರು, ಮಹಿಳೆಯರು, ಗರ್ಭಿಣಿಯರ ಬಗ್ಗೆ ಕನಿಕರ ತೋರಲಿಲ್ಲ. ದಾರಿ ಮಧ್ಯೆ ಸಾವು ಸಂಭವಿಸಿದವು. ಇದಕ್ಕೆಲ್ಲ ಯಾರು ಕಾರಣ ಎಂದು ಪ್ರಶ್ನಿಸಿದರು. ಮೋದಿ 20 ಲಕ್ಷ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರೆ.

ಅದು ಅಂಗೈಯಲ್ಲಿ ಅರಮನೆ ತೋರಿಸಿದ ಹಾಗಿದೆ. ಏಲ್ಲಿದೆ ಪ್ಯಾಕೇಜ್‌? ಯಾರಿಗೆ ತಲುಪಿದೆ? ಯಾರಿಗೆ ಲಾಭ ಆಗಿದೆ? ಪ್ಯಾಕೇಜ್‌ನಲ್ಲಿ ಏನೂ ಹುರುಳಿಲ್ಲ. ಜನರಿಗೆ ಮೋಸ ಮಾಡುತ್ತಿದ್ದೀರಿ. ಜನರಿಗೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಇದೆಲ್ಲವನ್ನೂ ನೋಡಿಯೇ ಸೋನಿಯಾ ಗಾಂಧಿ ಅವರು ಭಾರತದ ರಕ್ಷಣೆಗೆ ಜನತೆಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ ಎಂದರು.

ಈಚೆಗೆ ಪಿಪಿಇ ಕಿಟ್‌ ಖರೀದಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ದೂರುಗಳು ಬಂದಿವೆ. ಉಮೇಶ ಕತ್ತಿ, ಮುರಗೇಶ ನಿರಾಣಿ ಸೇರಿ ಇತರೆ ನಾಯಕರೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸ್ಥಳ ಪರಿಶೀಲನೆಗೆ ಮುಂದಾದರೆ, ಸ್ಪೀಕರ್‌ ಕೋವಿಡ್ ನೆಪದಿಂದಾಗಿ ತಡೆಯಾಜ್ಞೆ ನೀಡಿದ್ದಾರೆ. ತೆರಿಗೆ ಹಣ ಲೆಕ್ಕ ಇಡಬೇಕು. ಸಮಿತಿಯು ಪಕ್ಷಾತೀತವಾಗಿದೆ. ಅದಕ್ಕೆ ಕಿಟ್‌ ಖರೀದಿಯ ಪರಿಶೀಲನೆಗೆ ಅನುಮತಿ ಕೊಟ್ಟು, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಒತ್ತಾಯಿಸಿದರು.

ಬಿಜೆಪಿ ಅತೃಪ್ತಿಯ ಕಿತ್ತಾಟವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಇನ್ನು ರಮೇಶ ಜಾರಕಿಹೊಳಿ ಅವರಿಗೆ ಗಾಳಿಯಲ್ಲಿ ಮಾತನಾಡುವ ಚಾಳಿಯಿದೆ. ಅವರೇ ಬಿಜೆಪಿಯಲ್ಲಿ ತೃಪ್ತಿಯಿಂದ ಇದ್ದಾರಾ? ಎಂದು ಆತ್ಮಸಾಕ್ಷಿಯಿಂದ ಹೇಳಲಿ. ಬಹುಪಾಲು ಸಚಿವರು ಆಯಾ ಜಿಲ್ಲೆಗಳಿಗೆ ಹೋಗಿಲ್ಲ. ಇದನ್ನು ಜನತೆ ನೋಡುತ್ತಿದ್ದಾರೆ ಎಂದರಲ್ಲದೆ, ಗ್ರಾಪಂಗೆ ನಾಮನಿರ್ದೇಶನ ಮಾಡಲು ನಮ್ಮ ವಿರೋಧ ಇದೆ. ಅದರ ವಿರುದ್ಧ ನಮ್ಮ ಹೋರಾಟ ನಡೆಯಲಿದೆ. ಮೋದಿ ಸರ್ಕಾರ ಸಾಧನೆಯ ಸಂಭ್ರಮ ಎನ್ನುತ್ತಿದೆ. ಅವರದ್ದು ಶೂನ್ಯ ಸಾಧನೆ, ಏನೂ ಸಾಧನೆ ಮಾಡಿಲ್ಲ. ಜೂ. 7ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸರಳವಾಗಿ ನಡೆಯಲಿದೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಶಾಸಕರಾದ ಅಮರೇಗೌಡ ಬಯ್ನಾಪೂರ, ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಶಿವರಾಮೆಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.