ಭತ್ತ ಬೆಳೆ ಹಾನಿಗೆ 25 ಸಾವಿರ ರೂ. ಪರಿಹಾರ ನೀಡಲು ಆಗ್ರಹ
Team Udayavani, May 31, 2020, 7:38 AM IST
ದಾವಣಗೆರೆ: ಮೆಕ್ಕೆಜೋಳ ಬೆಳೆಗಾರರ ಮಾದರಿಯಲ್ಲೇ ಭತ್ತ ಬೆಳೆದಿರುವ ರೈತರಿಗೂ ಸಹ 5 ಸಾವಿರ ರೂ. ಬೆಳೆ ಹಾನಿ ಪರಿಹಾರ ಘೋಷಿಸಲು ಒತ್ತಾಯಿಸಿ ಶನಿವಾರ ರೈತಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಪತ್ರ ರವಾನೆ ಮಾಡಿದ್ದಾರೆ.
ಕೋವಿಡ್, ಲಾಕ್ಡೌನ್ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದವರಿಗೆ 5 ಸಾವಿರ ಬೆಳೆ ಹಾನಿ ಪರಿಹಾರ ಘೋಷಿಸಿದೆ. ಆದರೆ, ಭತ್ತ ಬೆಳೆದಂತಹವರನ್ನೇ ಮರೆತಿದೆ. ಮೆಕ್ಕೆಜೋಳ ಬೆಳೆದವರು,
ಭತ್ತ ಬೆಳೆದವರು ಎಂಬ ತಾರತಮ್ಯಮಾಡದೆ ಭತ್ತ ಬೆಳೆದವರಿಗೂ ಸಹ 5 ಸಾವಿರ ಬೆಳೆ ಹಾನಿಪರಿಹಾರ ಘೋಷಿಸಬೇಕು ಎಂದು ಕಾರ್ಯಕರ್ತರು ಪತ್ರ ಚಳವಳಿ ನಡೆಸಿದರು. ರೈತರು 1 ಎಕರೆಗೆ ಮೆಕ್ಕೆಜೋಳ ಬೆಳೆಯಲು 15 ಸಾವಿರ ರೂ. ವೆಚ್ಚ ತಗಲುತ್ತದೆ. ಹಾಗಾಗಿ ಎಲ್ಲಾ ರೈತರಿಗೆ 15 ಸಾವಿರ, ಭತ್ತ ಬೆಳೆದವರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಳ್ಳಿ ಮಂಜುನಾಥ್, ಹಸಿರು ಸೇನೆ ಅಧ್ಯಕ್ಷ ಆಲೂರು ಪರಶುರಾಮ್, ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ