ರೂಪಾಂತರದ ವೈರಸ್‌ ಪ್ರಾಣಿಗಳಿಂದ ನಮಗೆ?; ಟೆಕ್ಸಾಸ್‌ ವಿವಿ ತಜ್ಞರಿಂದ ಹೊಸ ಸಂಶೋಧನೆ

ಸೈನ್ಸ್‌ ಅಡ್ವಾನ್ಸಸ್‌'ನಲ್ಲಿ ತಜ್ಞರ ಸಂಶೋಧನಾ ವರದಿ ಪ್ರಕಟ

Team Udayavani, May 31, 2020, 8:07 AM IST

ರೂಪಾಂತರದ ವೈರಸ್‌ ಪ್ರಾಣಿಗಳಿಂದ ನಮಗೆ?; ಟೆಕ್ಸಾಸ್‌ ವಿವಿ ತಜ್ಞರಿಂದ ಹೊಸ ಸಂಶೋಧನೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹ್ಯೂಸ್ಟನ್‌: ಕೋವಿಡ್ ವೈರಸ್‌ ರೂಪಾಂತರ ಹೊಂದಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದು ಮತ್ತು ಮನುಷ್ಯನ ದೇಹದೊಳಗೆ ಪ್ರವೇಶಿಸಿ, ಸೋಂಕು ಹರಡುವ ಸಾಮರ್ಥ್ಯ ಗಳಿಸಿಕೊಳ್ಳಬಹುದು ಎಂದು ಟೆಕ್ಸಾಸ್‌ ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸಿದ ಅಧ್ಯಯನ ವರದಿಯೊಂದು ತಿಳಿಸಿದೆ.

ಈ ಸಂಶೋಧನಾ ವರದಿ, ಕೋವಿಡ್‌-19 ಸಾಂಕ್ರಾಮಿಕದ ಮೂಲದ ಬಗ್ಗೆ ಬೆಳಕು ಚೆಲ್ಲಿದೆ. ‘ಸೈನ್ಸ್‌ ಅಡ್ವಾನ್ಸಸ್‌’ ನಿಯತಕಾಲಿಕದಲ್ಲಿ ಈ ಸಂಶೋಧನಾ ವರದಿ ಪ್ರಕಟವಾಗಿದೆ. ಕೋವಿಡ್‌ – 19ನ ಆನುವಂಶಿಕ ವಿಶ್ಲೇಷಣೆ ಮತ್ತು ಪ್ರಾಣಿಗಳಲ್ಲಿ ಅದರ ರೂಪಾಂತರದ ಸಾದೃಶ್ಯ ಕುರಿತು ಅಧ್ಯಯನ ನಡೆಸಿದ ಸಂಶೋಧಕರು, ಇದರ ಹತ್ತಿರದ ಸಂಬಂಧಿಯ ವೈರಸ್ಸೇ ಬಾವಲಿಗೆ ಸೋಂಕು ತಗಲುವ ವೈರಸ್‌ ಆಗಿದೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ.

ಚಿಪ್ಪುಹಂದಿಗೆ (ಪ್ಯಾಂಗೋಲಿನ್‌) ಸೋಂಕು ತರಬಹುದಾದ ಕೋವಿಡ್ ವೈರಸ್‌, ನಿರ್ಣಾಯಕವಾದ ಜೀನ್‌ನ ತುಣುಕೊಂದರ ವಿನಿಮಯದ ಮೂಲಕ ಮಾನವರಿಗೆ ಸೋಂಕು ಹರಡಬಹುದಾದ ಸಾಮರ್ಥ್ಯವನ್ನು ಗಳಿಸುತ್ತದೆ.

ಈ ರೀತಿ, ಜೀವಿಯಿಂದ ಜೀವಿಗೆ ಹರಡುವ ಸಂದರ್ಭದಲ್ಲಿ ವೈರಸ್‌, ತನ್ನ ಆನುವಂಶಿಕ ವಸ್ತುವಿನ ಬದಲಾವಣೆ ಮೂಲಕ ರೂಪಾಂತರ ಹೊಂದಿ, ಆತಿಥೇಯ ಜೀವಿಯ ಕೋಶಗಳಿಗೆ ಬಂಧಿತವಾಗಿ ಸೋಂಕು ಹರಡುವ ಸಾಮರ್ಥ್ಯ ಪಡೆದುಕೊಳ್ಳುತ್ತದೆ ಎಂದು ವರದಿ ಹೇಳಿದೆ.

ಈ ವೈರಸ್‌ಗಳು ಬಾವಲಿಯಿಂದ ಪುನುಗು ಬೆಕ್ಕು ಅಥವಾ ಒಂಟೆಗೆ ಹರಡಿ, ಅಲ್ಲಿ ಆನುವಂಶೀಯವಾಗಿ ವಿಕಸನ ಹೊಂದಿ ಮನುಷ್ಯರಿಗೆ ಸೋಂಕು ತಗಲುವ ಸಾಮರ್ಥ್ಯವನ್ನೂ ಗಳಿಸಿರಬಹುದು.

ಚಿಪ್ಪು ಹಂದಿಯಿಂದ ವಿಕಸನ ಹೊಂದಿ ಮನುಷ್ಯರಿಗೆ ಸೋಂಕು ಹರಡುವ ಸಾಮರ್ಥ್ಯ ಬೆಳೆಸಿಕೊಂಡ ವೈರಸ್‌ಗಳಲ್ಲಿ ಜೀವಕೋಶದ ಪೊರೆಗೆ ಅಂಟಿಕೊಳ್ಳುವ ದೃಢತೆ ಹೆಚ್ಚಾಗಿ ಕಂಡುಬರುತ್ತಿದೆ.

ಆದರೆ, ಬಾವಲಿಯಿಂದ ವಿಕಸನ ಹೊಂದಿ ಮನುಷ್ಯರಿಗೆ ಸೋಂಕು ಹರಡುವ ಸಾಮರ್ಥ್ಯ ಬೆಳೆಸಿಕೊಂಡ ವೈರಸ್‌ಗಳಲ್ಲಿ ಜೀವ ಕೋಶದ ಪೊರೆಗೆ ಅಂಟಿಕೊಳ್ಳುವ ಗುಣ ಅಷ್ಟಾಗಿ ಕಂಡುಬರುವುದಿಲ್ಲ. ಆದರಿದು ಮಾನವನ ಸೋಂಕಿಗೆ ಕಾರಣವಾಗುವ ವೈರಸ್‌ಗೆ ಹೆಚ್ಚು ನಿಕಟತೆ ಹೊಂದಿದೆ.

ಹೀಗಾಗಿ, ಈಗ ಮಾನವರಿಗೆ ಸೋಂಕು ಹರಡುತ್ತಿರುವ ಕೋವಿಡ್ ವೈರಸ್‌, ಚಿಪ್ಪುಹಂದಿ ಮತ್ತು ಬಾವಲಿಗಳಿಗೆ ತಗುಲಿದ ವೈರಸ್‌ಗಳ ಹೈಬ್ರಿಡ್‌ ತಳಿ ಆಗಿರಬಹುದು ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.