ಶಾಸಕ ಗಣೇಶ ಆರೋಪದಲ್ಲಿ ಹುರುಳಿಲ್ಲ
Team Udayavani, May 31, 2020, 4:27 PM IST
ಕಂಪ್ಲಿ: ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಂಪ್ಲಿ ಕ್ಷೇತ್ರದ ಅಧ್ಯಕ್ಷ ಅಳ್ಳಳ್ಳಿ ವೀರೇಶ ಮಾತನಾಡಿದರು.
ಕಂಪ್ಲಿ: ಕ್ಷೇತ್ರದ ಶಾಸಕರಾದ ಜೆ.ಎನ್. ಗಣೇಶ್ ಅವರು ಸರಿಯಾದ ಮಾಹಿತಿ ಪಡೆಯದೇ ಮಾಜಿ ಶಾಸಕ ಟಿ.ಎಚ್. ಸುರೇಶಬಾಬು ಮೇಲೆ ಸುಳ್ಳು ಆರೋಪಗಳನ್ನು ಮಾಡಬಾರದೆಂದು ಬಿಜೆಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಳ್ಳಳ್ಳಿ ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.
ಅವರು ಪುರಸಭೆ ಮಾಜಿ ಅಧ್ಯಕ್ಷ ಪಿ.ಬ್ರಹ್ಮಯ್ಯನವರ ನಿವಾಸದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿ, ಮಾರಕ ಕೋವಿಡ್ ವೈರಸ್
ಹಿನ್ನೆಲೆಯಲ್ಲಿ ಸರ್ಕಾರವು ಗ್ರಾಪಂ ಚುನಾವಣೆಗಳನ್ನು ಮುಂದೂಡಿದೆ. ಅವಧಿ ಮುಗಿದಿರುವ ಗ್ರಾಪಂಗಳಿಗೆ ನಾಮನಿರ್ದೇಶನ, ಆಡಳಿತಾಧಿಕಾರಿಗಳು ಅಥವಾ ಈಗಿರುವ ಆಡಳಿತ ಮಂಡಳಿಯನ್ನೇ ಮುಂದುವರೆಸಬೇಕೆ ಎನ್ನುವ ಬಗ್ಗೆ ಚರ್ಚೆ ನಡೆಸುತ್ತಿದೆ. ಆದರೆ ನಾಮನಿರ್ದೇಶನ ಮಾಡುವ ಬಗ್ಗೆ ಇನ್ನು ತೀರ್ಮಾನಿಸಿಲ್ಲ, ಸರ್ಕಾರ ಸಾಧಕ-ಬಾಧಕಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ. ಮಾಜಿ ಶಾಸಕರಾದ ಟಿ.ಎಚ್. ಸುರೇಶಬಾಬು ಅವರು ಕ್ಷೇತ್ರದಲ್ಲಿ ಎಲ್ಲಿಯೂ ಆಧಾರ್ ಕಾರ್ಡ್, ಗುರುತಿನ ಚೀಟಿಗಳನ್ನು ಸಂಗ್ರಹಿಸಿಲ್ಲ. ಆದರೆ ಹಾಲಿ ಶಾಸಕರು ಸರಿಯಾದ ಮಾಹಿತಿಯನ್ನು ಪಡೆಯದೇ ಆರೋಪ ಮಾಡುವುದು ಸರಿಯಲ್ಲ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ವಿ.ಎಲ್.ಬಾಬು, ಸಿ.ಆರ್. ಹನುಮಂತ, ಎಸ್.ಎಂ. ನಾಗರಾಜ, ಹೂಗಾರ್ ರಮೇಶ್, ಅಂಜಿನೇಯ, ಎನ್. ಪುರುಷೋತ್ತಮ, ಪಿ.ಬ್ರಹ್ಮಯ್ಯ, ಜಿ. ಸುಧಾಕರ್, ಕೊಡಿದಲ್ ರಾಜು, ಡಿ. ಶ್ರೀಧರಶ್ರೇಷ್ಠಿ, ಜಿ. ಲಿಂಗನಗೌಡ, ವಿ.ಗೋವಿಂದರಾಜ್, ವಿ. ವಿದ್ಯಾಧರ್, ಮರೆಣ್ಣ, ದೇವೇಂದ್ರ, ರೇಣುಕಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…