ಹೊಟೇಲು ತೆರೆದರೂ ಎದುರಿಸಬೇಕಿದೆ ಸವಾಲು

 ಜೂ. 8ರಿಂದ ಹೊಟೇಲುಗಳು ಮತ್ತೆ ಕಾರ್ಯಾರಂಭ

Team Udayavani, Jun 1, 2020, 5:39 AM IST

ಹೊಟೇಲು ತೆರೆದರೂ ಎದುರಿಸಬೇಕಿದೆ ಸವಾಲು

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್‌-19 ಹೆಮ್ಮಾರಿ ಮನುಷ್ಯನಿಗೆ ಮಾತ್ರವಲ್ಲದೆ ಹಲವಾರು ಉದ್ಯಮಕ್ಕೂ ದೊಡ್ಡ ಕಂಟಕವಾಗಿ ಪರಿಣಮಿಸಿದ್ದು, ಇದರಿಂದ ಹೊಟೇಲು ಉದ್ಯಮವೂ ಅಪಾರ ನಷ್ಟಕ್ಕೆ ಒಳಗಾಗಿದೆ.

ಜೂನ್‌ 8ರ ಬಳಿಕ ಜಿಲ್ಲೆಯಲ್ಲಿ ಹೊಟೇಲುಗಳು ಬಾಗಿಲು ತೆರೆದುಕೊಳ್ಳಲಿವೆ. ಸರಕಾರ ಈಗಾಗಲೇ 5.0 ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿದೆ. ಹೊಟೇಲುಗಳು ಪುನಾರಂಭಕ್ಕೆ ಸಜ್ಜಾಗುತ್ತಿವೆ. ಲಾಕ್‌ಡೌನ್‌ ತೆರವಾದರೂ ಹೊಟೇಲ್‌ಗ‌ಳನ್ನು ಮತ್ತೆ ಪ್ರಾರಂಭ ಮಾಡುವುದು, ಮೊದಲಿನಂತೆ ವ್ಯಾಪಾರ ವಹಿವಾಟು ನಡೆಸುವುದು ಹೊಟೇಲು ಉದ್ಯಮಿಗಳಿಗೆ ದೊಡ್ಡ ಸವಾಲೇ ಆಗಿದೆ. ಕೆಲ ಹೊಟೇಲುಗಳು ಬಾಗಿಲು ತೆರೆಯುವುದು ಕೂಡ ಅನುಮಾನವಾಗಿದೆ.

ವ್ಯಾಪಾರ ಕಷ್ಟ
ಉಡುಪಿ ನಗರದಲ್ಲಿ 4 ಸಾವಿರದಷ್ಟು ಹೊಟೇಲುಗಳಿವೆ. 25 ಸ್ಟಾರ್‌ ಹೊಟೇಲುಗಳಿವೆ. ಸಾಮಾನ್ಯ ಹೊಟೇಲುಗಳು, ಮಿನಿ ಕ್ಯಾಂಟೀನ್‌ಗಳು ಇವೆ. ಹೊಟೇಲುಗಳು, ಉಪಾಹಾರ ಮಂದಿರಗಳು ನಷ್ಟದ ಹಾದಿಯಲ್ಲಿವೆ. ಲಾಕ್‌ಡೌನ್‌ ತೆರವಾದರೂ ಹಲವು ಮಾಲಕರು ಹೊಟೇಲು ನಡೆಸುವ ಆಸಕ್ತಿ ಹೊಂದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಕುಳಿತು ಊಟ ವಿತರಿಸುವುದು ಇಂತಹ ಹಲವು ಸವಾಲಿನ ನಡುವೆ ಮತ್ತೆ ಈ ಹಿಂದಿನಂತೆ ವ್ಯಾಪಾರ ನಡೆಸುವ ಯಾವುದೇ ಸಾಧ್ಯತೆ ಕಂಡು ಬರುತ್ತಿಲ್ಲ.

ಚೇತರಿಸಿಕೊಳ್ಳುವ ಲಕ್ಷಣ ಕಾಣಿಸ್ತಿಲ್ಲ
ನಗರದಲ್ಲಿ ಬಹುತೇಕ ಹೊಟೇಲುಗಳು ಉಪಾಹಾರ ಮಂದಿರಗಳು ಬಾಡಿಗೆ ಕಟ್ಟಡದಲ್ಲಿವೆ. ವ್ಯಾಪಾರದಲ್ಲಿ ಪೈಪೋಟಿ ಕೂಡ ಇದೆ. ದುಬಾರಿ ಬಾಡಿಗೆ ಕೊಟ್ಟು ವ್ಯಾಪಾರ ನಡೆಸುವುದು ಈಗಿನ ಪರಿಸ್ಥಿತಿಯಲ್ಲಿ ಕಷ್ಟ. ಲಾಕ್‌ಡೌನ್‌ ತೆರವಿನ ಬಳಿಕವೂ ಗ್ರಾಹಕರು ಈ ಹಿಂದಿನಂತೆ ಬರುವುದು ಅನುಮಾನ. ಇದರಿಂದ ಬಾಡಿಗೆ ಕಟ್ಟಲು ಕೂಡ ಕಷ್ಟ. ಮುಚ್ಚಿದ ಹೊಟೇಲುಗಳನ್ನು ತೆರೆದು ಮತ್ತೆ ವ್ಯಾಪಾರ ಹಿಡಿಯುವುದು ಬಹುದೊಡ್ಡ ಸವಾಲಿನ ಕಾರ್ಯ ಎಂದು ನಗರದಲ್ಲಿ ಹೊಟೇಲು ನಡೆಸುತ್ತಿರುವ ರಾಮಚಂದ್ರ ಹೇಳುತ್ತಾರೆ.

ಉತ್ತಮ ಸೇವೆಯಿತ್ತು
ನಗರದ ಪ್ರತಿಷ್ಠಿತ ಹೊಟೇಲುಗಳು, ಸಾಮಾನ್ಯ ಹೊಟೇಲುಗಳು ನಗರ ಹಾಗೂ ಸುತ್ತಮುತ್ತ ನಡೆಯುವ ವಿವಿಧ ಶುಭ ಸಮಾರಂಭಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದವು. ಆನ್‌ಲೈನ್‌ ಮೂಲಕವು ಆಹಾರ ಬುಕ್ಕಿಂಗ್‌ ಮಾಡಿ ಪೂರೈಸುತ್ತಿದ್ದವು. ಅದಕ್ಕೆಲ್ಲ ಈಗ ಬ್ರೇಕ್‌ ಬಿದ್ದಿದೆ. ಸದ್ಯದ ಸ್ಥಿತಿ ನೋಡಿದರೆ ಹೊಟೇಲು ಉದ್ಯಮ ಚೇತರಿಸಿಕೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ.

ಹಳ್ಳಿ ಬದುಕು ಇಂಗಿತ,
ತವರು ಸೇರಿದ ವಲಸೆ ಕಾರ್ಮಿಕರು
ಹೊಟೇಲು ಆರಂಭಿಸಿದರೂ ಮುಖ್ಯವಾಗಿ ಅದಕ್ಕೆ ಅಡುಗೆ ಸಹಾಯಕರು ಹಾಗೂ ಸಿಬಂದಿ ಸಮಸ್ಯೆ ತೀವ್ರವಾಗಿ ಕಾಡಲಿದೆ. ಈಗಾಗಲೆ ಹೊರ ರಾಜ್ಯಗಳ ಸಿಬಂದಿ ಕೋವಿಡ್‌-19 ಭಯಕ್ಕೆ ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಅವರು ಕನಿಷ್ಠ ಒಂದೆರಡು ವರ್ಷ ಮರಳಿ ಬರುವುದಿಲ್ಲ. ಸ್ಥಳಿಯವಾಗಿ ಅಡುಗೆಯವರು ಸಿಗುವುದಿಲ್ಲ. ಹಲವರು ಹಳ್ಳಿಗಳಲ್ಲಿ ಬದುಕು ಕಟ್ಟಿಕೊಳ್ಳುವ ಇಂಗಿತ ವ್ಯಕ್ತಪಡಿಸುತ್ತಿರುವ ಕಾರಣ ಸಿಬಂದಿ ಕೊರತೆ ಕಾಣಿಸಿಕೊಳ್ಳಲಿದೆ ಎಂಬುದು ಹೊಟೇಲ್‌ ಉದ್ಯಮಿಗಳ ಅಭಿಪ್ರಾಯ. ಸದಾ ತುಂಬಿ ತುಳು ಕುತ್ತಿದ್ದ ನೂರಾರು ಹೊಟೇಲುಗಳು ಸದ್ಯಕ್ಕಂತೂ ಮೊದಲಿನಂತೆ ಕಾಣುವುದಕ್ಕೆ ವರ್ಷವೇ ಬೇಕಾಗಬಹುದು ಎಂಬ ಆತಂಕವೂ ಇದೆ.

ಆರ್ಥಿಕ ವ್ಯವಸ್ಥೆ ಚೇತರಿಕೆ
ಬಸ್‌, ರೈಲು, ವಾಹನ ಸಂಚಾರ ಆರಂಭವಾಗಿರುವುದರಿಂದ ಹೊಟೇಲುಗಳ ತೆರೆದುಕೊಳ್ಳುವುದು ಈಗ ಅವಶ್ಯಕ. ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಹೊಟೇಲುಗಳಿದ್ದು, 2 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿದ್ದಾರೆ. ಇದನ್ನೆ ನೆಚ್ಚಿ ಬದುಕು ಸವೆಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಇವರು ಆದಾಯವಿಲ್ಲದೆ ಅತಂತ್ರರಾಗಿದ್ದಾರೆ. ಹೊಟೇಲುಗಳ ಮರು ಪ್ರಾರಂಭದಿಂದ ಆರ್ಥಿಕ ವ್ಯವಸ್ಥೆಯೂ ಚೇತರಿಕೆ ಕಾಣುವ ಸಾಧ್ಯತೆಯಿದೆ. ಕೇಂದ್ರ ಗೃಹ ಇಲಾಖೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸಿ, ಸಾಮಾಜಿಕ ಅಂತರದ ನಿಯಮ ಪಾಲಿಸಿಕೊಂಡು ಹೊಟೇಲುಗಳು ತೆರೆದುಕೊಳ್ಳಲಿವೆ.

ಸುಲಭವಲ್ಲ
ಸರಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಜೂ. 8 ರಿಂದ ಹೊಟೇಲುಗಳನ್ನು ತೆರೆಯಲು ನಿರ್ಧರಿಸಿದ್ದೇವೆ. ಪೂರ್ಣ ಪ್ರಮಾಣದಲ್ಲಿ ಕಷ್ಟ. ಹೊಟೇಲು ನಡೆಸುವುದು ಇನ್ನು ಮುಂದಕ್ಕೆ ಅಷ್ಟು ಸಲೀಸಲ್ಲ. ಕಾರ್ಮಿಕರ ಕೊರತೆ, ಗ್ರಾಹಕರ ಕೊರತೆ ಕಾಡುವ ಸಾಧ್ಯತೆಗಳು ದಟ್ಟವಾಗಿವೆ.
-ತಲ್ಲೂರು ಶಿವರಾಮ ಶೆಟ್ಟಿ, ಅಧ್ಯಕ್ಷ, ಹೊಟೇಲು ಮಾಲಕರ ಸಂಘ ಉಡುಪಿ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.