ಸ್ವರ್ಣಾ ನದಿಯ ನೀರಾವರಿ ಯೋಜನೆ: ಸ್ಥಳ ಪರಿಶೀಲನೆ
Team Udayavani, Jun 1, 2020, 5:47 AM IST
ಉಡುಪಿ: ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಸ್ವರ್ಣಾ ನದಿಗೆ 3 ಕಡೆಗಳಲ್ಲಿ ಬ್ಯಾರೇಜ್ ನಿರ್ಮಿಸಿ ಉಪ್ಪು ನೀರನ್ನು ತಡೆಗಟ್ಟಿ, ಕೃಷಿ ಚಟುವಟಿಕೆಗಳಿಗೆ ಬಳಸುವ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವಾ ಕಾಂಕ್ಷೆಯ ಯೋಜನೆಯ ಸ್ಥಳವನ್ನು ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳ ಸಮ್ಮುಖ ಪರಿಶೀಲಿಸಿದರು.
ಯೋಜನೆಯ ಅನ್ವಯ ಸ್ವರ್ಣಾ ನದಿಗೆ ಕಲ್ಯಾಣಪುರ ಸೇತುವೆ ಬಳಿ ನಯಂಪಳ್ಳಿ ಎಂಬಲ್ಲಿ ಬ್ಯಾರೇಜ್ ನಿರ್ಮಿಸಿ ಉಪ್ಪು ನೀರನ್ನು ತಡೆಗಟ್ಟುವುದು, ಅನಂತರ ಪೆರಂಪಳ್ಳಿ ಹಾಗೂ ಕೀಳಿಂಜೆ ಎಂಬಲ್ಲಿ ಬ್ಯಾರೇಜ್ ನಿರ್ಮಿಸಿ ನೀರನ್ನು ಸಂಗ್ರಹಿಸಲಾಗುತ್ತದೆ. ಇದರಿಂದ ಅಂತ ರ್ಜಲ ವೃದ್ಧಿಸುವುದರ ಜತೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬೇಕಾದಷ್ಟು ನೀರು ಒದಗಿಸುವ ಯೋಜನೆ ಇದಾಗಿದೆ.
ಯೋಜನೆಯು 300 ಕೋ.ರೂ. ವೆಚ್ಚದಲ್ಲಿ ಕಾರ್ಯ ಗತಗೊಳ್ಳಲಿದೆ. ಯೋಜನೆಗೆ ಡಿಪಿಆರ್ ತಯಾರಿಸಲು ಸರಕಾರದಿಂದ ಆದೇಶ ಆಗಿರುವ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ನಡೆಸಲು ಕನ್ಸಲ್ಟೆನ್ಸಿ ಹಾಗೂ ಇಲಾಖಾ ಅಧಿಕಾರಿಗಳು ರವಿವಾರ ಸ್ಥಳಕ್ಕೆ ಬಂದಿದ್ದರು. ನಗರಸಭೆ ಸದಸ್ಯ ಬಾಲಕೃಷ್ಣ ಶೆಟ್ಟಿ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶೇಷ ಕೃಷ್ಣ ಹಾಗೂ ವಾರಾಹಿ ಯೋಜನೆಯ ಸಹಾಯಕ ಎಂಜಿನಿಯರ್ ಪ್ರೀತಮ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ