ಕ್ಷುಲ್ಲಕ ಕಾರಣಕ್ಕೆ ತಂಡಗಳ ಮಧ್ಯೆ ಹೊಡೆದಾಟ: ಓರ್ವನ ಕೊಲೆ
Team Udayavani, May 31, 2020, 11:59 PM IST
ಸಾಂದರ್ಭಿಕ ಚಿತ್ರ
ಬಜಪೆ: ಇಲ್ಲಿನ ಅರಸುಗುಡ್ಡೆಯಲ್ಲಿ ರವಿವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, ಈ ಸಂದರ್ಭ ಕರಂಬಾರು ನಿವಾಸಿ ಕೀರ್ತನ್ (20) ಕೊಲೆಯಾಗಿದ್ದಾರೆ. ಆತನ ಸಹಚರ ನಿತಿನ್ ಮತ್ತು ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
ಕೊಲೆ ನಡೆಸಿದ ತಂಡದವರು ಮತ್ತು ಕೊಲೆಯಾದ ಕೀರ್ತನ್ ಹಾಗೂ ಗಾಯಗೊಂಡವರು ಈ ಹಿಂದೆ ಜತೆಯಾಗಿಯೇ ಇದ್ದು ದೋಸ್ತಿಗಳಾಗಿದ್ದರು. ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಅವರೊಳಗೆ ವೈಮನಸ್ಸು ಬೆಳೆದಿತ್ತು ಎನ್ನಲಾಗಿದೆ.
ರವಿವಾರ ರಾತ್ರಿ ಕೀರ್ತನ್, ನಿತಿನ್ ಮತ್ತವರ ಇನ್ನೋರ್ವ ಸಹಚರ ಬಜಪೆ ದೇವರಗುಡ್ಡದಲ್ಲಿ ಒಟ್ಟು ಸೇರಿದ್ದರು. ಈ ಸಂದರ್ಭ ಅವರು ವಿರೋಧಿ ತಂಡವನ್ನು ಅಲ್ಲಿಗೆ ಕರೆಸಿಕೊಂಡಿದ್ದರು ಎನ್ನಲಾಗಿದೆ. ವಿರೋಧಿ ತಂಡ ಅಲ್ಲಿಗೆ ಆಗಮಿಸಿದಾಗ ಮಾತಿಗೆ ಮಾತು ಬೆಳೆದು ಕೀರ್ತನ್ ಮತ್ತು ಆತನ ಸಹಚರರ ಮೇಲೆ ಇನ್ನೊಂದು ತಂಡದವರು ಚೂರಿಯಿಂದ ಹಲ್ಲೆ ನಡೆಸಿದರು. ಈ ಸಂದರ್ಭ ಕೀರ್ತನ್ ತೀವ್ರ ಗಾಯಗೊಂಡು ಬಳಿಕ ಸಾವನ್ನಪ್ಪಿದ್ದಾರೆ. ಗಾಯಾಳು ನಿತಿನ್ ಮತ್ತು ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳು ಸ್ಥಳದಿಂದ ಪಾರಾಗಿದ್ದು, ಬಜಪೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ