ಇಂದಿನಿಂದ ಮಂಗಳೂರು ಮೂಲಕ 2 ರೈಲು


Team Udayavani, Jun 1, 2020, 10:12 AM IST

ಇಂದಿನಿಂದ ಮಂಗಳೂರು ಮೂಲಕ 2 ರೈಲು

ಸಾಂದರ್ಭಿಕ ಚಿತ್ರ

ಮಂಗಳೂರು: ಕೇಂದ್ರ ರೈಲ್ವೇ ಸಚಿವಾಲಯವು ಅಂತಾರಾಜ್ಯ ರೈಲು ಸಂಚಾರಕ್ಕೆ ಅವಕಾಶ ನೀಡಿದ್ದು, ಮಂಗಳೂರು ಜಂಕ್ಷನ್‌ ಮೂಲಕವಾಗಿ 2 ವಿಶೇಷ ರೈಲು ಸೋಮವಾರದಿಂದ ಹಾದುಹೋಗಲಿದೆ.

ಮುಂಬಯಿ-ತಿರುವನಂತಪುರ ನೇತ್ರಾವತಿ ಎಕ್ಸ್‌ ಪ್ರಸ್‌ (ನಂ.06345/ 06346) ಮತ್ತು ಹಜ್ರತ್‌ ನಿಜಾಮುದ್ದೀನ್‌- ಎರ್ನಾಕುಳಂ ಮಂಗಳಾ ಲಕ್ಷದ್ವೀಪ ಡೈಲಿ ಎಕ್ಸ್‌ಪ್ರೆಸ್‌ (02618/ 02617) ರೈಲುಗಳು ಮಂಗಳೂರು ಜಂಕ್ಷನ್‌ ಮೂಲಕ ತೆರಳಲಿವೆ. ತಿರುವನಂತಪುರದಿಂದ ಬೆಳಗ್ಗೆ ಹೊರಡುವ ರೈಲು ರಾತ್ರಿ ಮಂಗಳೂರು ಜಂಕ್ಷನ್‌ಗೆ ಆಗಮಿಸಿ ಮುಂಬಯಿಗೆ ತೆರಳಲಿದೆ. ಮತ್ತೂಂದು ರೈಲು ಎರ್ನಾಕುಳಂನಿಂದ ಹೊರಟು ರಾತ್ರಿ ಮಂಗಳೂರು ಜಂಕ್ಷನ್‌ ಮೂಲಕ ಪ್ರಯಾಣಿಸಲಿದೆ. ಮರುದಿನ ಮುಂಬಯಿಯಿಂದ ಮುಂಜಾನೆ ಮತ್ತು ಮಂಗಳಾ ಲಕ್ಷದ್ವೀಪ ರೈಲು ರಾತ್ರಿ ಮಂಗಳೂರು ಮೂಲಕ ಹಾದುಹೋಗಲಿವೆ.

ಪ್ರಯಾಣಿಕರು ಟಿಕೆಟ್‌ ಖಾತರಿಪಡಿಸಿಕೊಂಡ ಬಳಿಕವಷ್ಟೇ ರೈಲು ನಿಲ್ದಾಣ ಪ್ರವೇಶಿಸಬೇಕು ಮತ್ತು ರೈಲು ಹೊರಡುವುದಕ್ಕಿಂತ 90 ನಿಮಿಷ ಮುನ್ನ ರೈಲು ನಿಲ್ದಾಣದಲ್ಲಿ ಇರಬೇಕು. ಕಡ್ಡಾಯವಾಗಿ ಆಧಾರ್‌ ಸಹಿತ ದಾಖಲೆಗಳನ್ನು ತರಬೇಕು. ಟಿಕೆಟ್‌ ಬುಕ್‌ ಮಾಡುವವರು ಹೋಗಿ ಬರುವ ವಿವರ ನಮೂದಿಸುವುದು ಕಡ್ಡಾಯ. ಸದ್ಯ ಮಂಗಳೂರು ಜಂಕ್ಷನ್‌ ಮೂಲಕ ವಾರದಲ್ಲಿ 3 ದಿನ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಸಂಚರಿಸುತ್ತಿದೆ. ಅಗತ್ಯಕ್ಕೆ ತಕ್ಕಂತೆ “ಶ್ರಮಿಕ್‌’ ರೈಲು ಕೂಡ ಸಂಚರಿಸುತ್ತಿದೆ.

ಇಂದಿನಿಂದ 9 ವಿಶೇಷ ರೈಲು
ಕೇಂದ್ರ ರೈಲ್ವೇ ಸಚಿವಾಲಯ ಬಿಡುಗಡೆ ಮಾಡಿರುವ ಅಂತಾರಾಜ್ಯ ರೈಲುಗಳ ಪ್ರಥಮ ಪಟ್ಟಿಯಲ್ಲಿ ಮಂಗಳೂರು ಮೂಲಕ 2 ಸಹಿತ ಒಟ್ಟು 9 ವಿಶೇಷ ರೈಲುಗಳು ರಾಜ್ಯದಲ್ಲಿ ಜೂ.1ರಿಂದ ಸಂಚರಿಸಲಿವೆ. ಮುಂಬಯಿ ಸಿಎಸ್‌ಎಂಟಿ- ಗದಗ್‌ ಡೈಲಿ ಎಕ್ಸ್‌ಪ್ರೆಸ್‌ (01139/ 40), ಮುಂಬಯಿ ಸಿಎಂಎಸ್‌ಟಿ- ಬೆಂಗಳೂರು ಉದ್ಯಾನ ಡೈಲಿ ಎಕ್ಸ್‌ಪ್ರೆಸ್‌ (01301/ 02), ದಾನಪುರ -ಬೆಂಗಳೂರು -ಸಂಘಮಿತ್ರ ಡೈಲಿ ಎಕ್ಸ್‌ಪ್ರೆಸ್‌ (002296/ 95), ಹೊಸದಿಲ್ಲಿ- ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ (ವಾರದಲ್ಲಿ ಎರಡು ದಿನ 02629/ 02630), ಹೌರಾ- ಯಶವಂತಪುರ ಎಕ್ಸ್‌ ಪ್ರಸ್‌ (ವಾರದಲ್ಲಿ ಐದು ದಿನ 02245/ 46), ಬೆಂಗಳೂರು- ಹುಬ್ಬಳ್ಳಿ ಜನ ಶತಾಬ್ದಿ ಡೈಲಿ ಎಕ್ಸ್‌ಪ್ರೆಸ್‌ (02079/ 02080) ಮತ್ತು ಯಶವಂತಪುರ- ಶಿವಮೊಗ್ಗ ಜನಶತಾಬ್ದಿ ಡೈಲಿ ಎಕ್ಸ್‌ಪ್ರೆಸ್‌ (02089/ 020900).

ಕ್ವಾರಂಟೈನ್‌ ಕಡ್ಡಾಯ
ಹಾಟ್‌ಸ್ಪಾಟ್‌ ರಾಜ್ಯಗಳಿಂದ ಆಗಮಿಸುವ ಎಲ್ಲ ರೈಲು ಪ್ರಯಾಣಿಕರು ಜಿಲ್ಲಾಡಳಿತದ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕು.
ಎಂ.ಜೆ. ರೂಪಾ, ಅಪರ ಜಿಲ್ಲಾಧಿಕಾರಿ ದ.ಕ.

ಟಾಪ್ ನ್ಯೂಸ್

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.