ಯಾರ ಮಧ್ಯಸ್ಥಿಕೆಯೂ ಬೇಡ: ಶಾ
Team Udayavani, Jun 1, 2020, 11:05 AM IST
ಹೊಸದಿಲ್ಲಿ: ಭಾರತ- ಚೀನ ನಡುವಿನ ಲಡಾಖ್ ಗಡಿಯ ಬಿಕ್ಕಟ್ಟು ಶಮನಕ್ಕೆ ರಾಜತಾಂತ್ರಿಕ, ಮಿಲಿಟರಿ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಭಾರತದ ಈ ವಿಚಾರದಲ್ಲಿ ಬೇರಾವುದೇ ದೇಶ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಉಭಯ ದೇಶಗಳ ನಡುವೆ ಉದ್ಭವಿಸಿರುವ ಬಿಕ್ಕಟ್ಟು ನಿವಾರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದರು. “ನಾನು ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಭಾರತದ ಅಂತಾರಾಷ್ಟ್ರೀಯ ಗಡಿ ನರೇಂದ್ರ ಮೋದಿ ನಾಯಕತ್ವದಲ್ಲಿ ಅತ್ಯಂತ ಸುರಕ್ಷಿತವಾಗಿದೆ ಎಂದು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.