ರಾಜ್ಯಸಭಾ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ, ನಾನೂ ಕೇಳ್ತಿನಿ: ಡಾ. ಪ್ರಭಾಕರ ಕೋರೆ
Team Udayavani, Jun 1, 2020, 2:49 PM IST
ಬೆಳಗಾವಿ: ಬಿಜೆಪಿ ಪಕ್ಷ ಸಿದ್ಧಾಂತದ ಮೇಲೆ ನಡೆದಿರುವ ಪಕ್ಷ. ಯಾರು ಉತ್ತಮ ಕೆಲಸ ಮಾಡುತ್ತಾರೋ ಅವರಿಗೆ ಟಿಕೆಟ್ ಸಿಗುತ್ತದೆ ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕತ್ತಿ ಸಹೋದರರಿಂದ ರಾಜ್ಯಸಭಾ ಟಿಕೆಟ್ ಡಿಮ್ಯಾಂಡ್ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಸಭಾ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ. ನಾನೂ ಕೇಳುತ್ತೇನೆ, ಅವರೂ ಕೇಳ್ತಾರೆ. ರಾಜಕಾರಣದಲ್ಲಿ ಜತೆಗೆ ಇದ್ದವರು ಕೇಳಬಾರದು ಅಂತ ಏನಿಲ್ಲ ಎಂದರು.
ಬಿಜೆಪಿ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಪ್ರತಿಯೊಬ್ಬರೂ ಟಿಕೆಟ್ ಕೇಳುವ ಹಕ್ಕು ಇದೆ. ಪಕ್ಷ ಯಾರನ್ನು ನಿರ್ಧಾರ ಮಾಡ್ತಾರೆ ಅವರು ರಾಜ್ಯಸಭಾ ಸದಸ್ಯರಾಗುತ್ತಾರೆ ಎಂದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ. ಯಾರೋ ಒಬ್ಬರಿಂದ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ. ಮುಂದಿನ ಮೂರು ವರ್ಷ ಬಿ ಎಸ್ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರ್ತಾರೆ. ಅವರೇ ಅವಧಿ ಪೂರ್ಣಗೊಳಿಸುತ್ತಾರೆ ಎಂದರು.
ರಮೇಶ ಕತ್ತಿಗೆ ಚಿಕ್ಕೋಡಿ ಲೋಕಸಭಾ ಟಿಕೆಟ್ ಕೈ ತಪ್ಪಲು ಪ್ರಭಾಕರ ಕೋರೆ, ಲಕ್ಷ್ಮಣ ಸವದಿ, ಜೊಲ್ಲೆ ಕಾರಣ ಆರೋಪಕ್ಕೆ ಉತ್ತರಿಸದ ಅವರು, ನಾನೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ, ಆದರೆ ನನಗೆ ರಾಜ್ಯಸಭೆ ಟಿಕೆಟ್ ಕೊಟ್ಟರು. ಜೊಲ್ಲೆಗೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೋಟ್ಟರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ