ಆಫ್ರಿಕ : ತಪ್ಪಿಸಿಕೊಂಡವರನ್ನು ಹುಡುಕುವುದೇ ಕೆಲಸ


Team Udayavani, Jun 1, 2020, 2:58 PM IST

ಆಫ್ರಿಕ : ತಪ್ಪಿಸಿಕೊಂಡವರನ್ನು ಹುಡುಕುವುದೇ ಕೆಲಸ

ಸಾಂದರ್ಭಿಕ ಚಿತ್ರ

ಹರಾರೆ : ಆಫ್ರಿಕದ ದೇಶಗಳಲ್ಲಿ ಕ್ವಾರಂಟೈನ್‌ನಲ್ಲಿದ್ದವರು ತಪ್ಪಿಸಿಕೊಂಡು ಓಡಿಹೋಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರಿಗೀಗ ಅವರನ್ನು ಹುಡುಕುವುದೇ ದೊಡ್ಡ ತಲೆನೋವಿನ ಕೆಲಸವಾಗಿದೆ. ಹಲವು ಕ್ವಾರಂಟೈನ್‌ ಕೇಂದ್ರಗಳಿಂದ ನೂರಾರು ಮಂದಿ ತಪ್ಪಿಸಿಕೊಂಡು ಹೋಗಿದ್ದಾರೆ. ಈ ಪೈಕಿ ಅನೇಕ ಮಂದಿ ಕೋವಿಡ್‌ ಪೊಸಿಟಿವ್‌ ಆಗಿದ್ದರು ಮತ್ತು ಕೆಲವರಲ್ಲಿ ಕೋವಿಡ್‌ ಲಕ್ಷಣವಿತ್ತು. ಆದರೆ ಸಾಕಷ್ಟು ರಕ್ಷಣಾ ಉಡುಗೆಗಳು ಇಲ್ಲದ ಕಾರಣ ಅವರು ಓಡಿ ಹೋಗುವಾಗ ತಡೆಯಲು ಸಾಧ್ಯವಾಗುವುದಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಳ್ಳುತ್ತಾರೆ ಇಲ್ಲಿನ ಪೊಲೀಸರು.

ದಕ್ಷಿಣ ಆಫ್ರಿಕದಿಂದ ನುಸುಳಿ ಬಂದ 400 ಮಂದಿಯನ್ನು ಮಲವಿಯ ಬ್ಲಿಂಟಯರ್‌ ಸ್ಟೇಡಿಯಂನಲ್ಲಿ ಸ್ಥಾಪಿಸಿದ ಕ್ವಾರಂಟೈನ್‌ ಶಿಬಿರದಲ್ಲಿಡಲಾಗಿತ್ತು. ಆದರೆ ಇಲ್ಲಿಂದ ಬಹುಪಾಲು ಮಂದಿ ತಪ್ಪಿಸಿಕೊಂಡು ಹೋಗಿದ್ದಾರೆ.  ಕೆಲವರು ಪೊಲೀಸರಿಗೆ ಲಂಚ ಕೊಟ್ಟು ಪಲಾಯನ ಮಾಡಿದ್ದಾರೆ. ಮವಾಂಜ ಗಡಿಯಲ್ಲಿ ಸೋಂಕು ಪರೀಕ್ಷೆಗೆ ಕಾದು ನಿಂತಿದ್ದ 46 ಮಂದಿ ಅಲ್ಲಿಂದಲೇ ಸದ್ದಿಲ್ಲದೆ ಮಾಯವಾಗಿದ್ದಾರೆ. ಜಿಂಬಾಬ್ವೆಯಲ್ಲಿ ಒಟ್ಟು 148 ಮಂದಿ ಕ್ವಾರಂಟೈನ್‌ ಕೇಂದ್ರಗಳಿಂದ ತಪ್ಪಿಸಿಕೊಂಡಿದ್ದು, ಅವರನ್ನು ಹುಡುಕುವ ಪ್ರಯತ್ನಗಳೆಲ್ಲ ವಿಫ‌ಲಗೊಂಡಿವೆ. ಇಲ್ಲಿ 21 ದಿನಗಳ

ಕ್ವಾರಂಟೈನ್‌ ಕಡ್ಡಾಯ
ಕೆನ್ಯಾದಲ್ಲೂ ಕ್ವಾರಂಟೈನ್‌ ಕೇಂದ್ರಗಳಿಂದ ಜನರು ತಪ್ಪಿಸಿಕೊಂಡು ಹೋಗಿದ್ದಾರೆ. ಜಾಂಬಿಯ, ಘಾನಾ, ನೈಜೀರಿಯ, ಉಗಾಂಡ ಮತ್ತು ನಮಿಬಿಯಗಳಿಂದಲೂ ಈ ಮಾದರಿಯ ಹಲವು ಪ್ರಕರಣಗಳು ವರದಿಯಾಗಿವೆ.  ಪಲಾಯನ ಮಾಡುವ ಹಾವಳಿಯನ್ನು ತಪ್ಪಿಸುವ ಸಲುವಾಗಿ ಕೆಲವು ಕ್ವಾರಂಟೈನ್‌ ಕೇಂದ್ರಗಳಿಗೆ ಬಿಗು ಪೊಲೀಸ್‌ ಕಾವಲು ಹಾಕಲಾಗಿದೆ ಎಂದು ಜಿಂಬಾಬ್ವೆಯ ಮಾಹಿತಿ ಸಚಿವೆ ಮೋನಿಕಾ ಮುತ್ಸುವಂಗ ತಿಳಿಸಿದ್ದಾರೆ.

ಕ್ವಾರಂಟೈನ್‌ ಕೇಂದ್ರಗಳ ಕಳಪೆ ಸೌಲಭ್ಯಗಳು ಮತ್ತು 21 ದಿನಗಳ ಉಸಿರುಕಟ್ಟಿಸುವ ವಾತಾವರಣದಿಂದ ಪಾರಾಗಲು ಜನರು ಇಲ್ಲಿಂದ ಪಲಾಯನ ಮಾಡುತ್ತಿದ್ದಾರೆ. ಕೆಲವು ಕ್ವಾರಂಟೈನ್‌ ಕೇಂದ್ರಗಳೇ ವೈರಸ್‌ ಹರಡುವ ಕೇಂದ್ರಗಳಾಗಿವೆ ಎನ್ನುತ್ತಾರೆ ಇಲ್ಲಿನ ಜನರು.
ಆದರೆ ಸರಕಾರಗಳು ನಾವು ಕನಿಷ್ಠ ಸೌಲಭ್ಯ ಕೊಡುತ್ತಿದ್ದೇವೆ. ಪಂಚತಾರಾ ಸೌಲಭ್ಯ ಬೇಕಾದರೆ ಅವರು ಹೊಟೇಲ್‌ಗ‌ಳಲ್ಲಿ ತಮ್ಮ ಖರ್ಚಿನಲ್ಲಿ ಕ್ವಾರಂಟೈನ್‌ ಆಗಬೇಕು ಎಂದು ಹೇಳುತ್ತಿವೆ.

ಆಫ್ರಿಕ ಖಂಡದಲ್ಲಿ ದಕ್ಷಿಣ ಆಫ್ರಿಕ ಅಭಿವೃದ್ಧಿ ಹೊಂದಿದ ದೇಶವಾಗಿದ್ದು, ಉಳಿದ ದೇಶಗಳಿಂದ ಇಲ್ಲಿಗೆ ಅಧಿಕ ಮಂದಿ ವಲಸೆ ಬರುತ್ತಾರೆ. ಆದರೆ ಇಲ್ಲಿಯೇ 27,000ಕ್ಕೂ ಅಧಿಕ ಕೋವಿಡ್‌ ಸೋಂಕಿತರಿದ್ದಾರೆ. ಒಟ್ಟಾರೆ ಆಫ್ರಿಕದಲ್ಲಿ 1.3 ಲಕ್ಷ ಕೋವಿಡ್‌ ಪ್ರಕರಣಗಳಿವೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.