ಗೃಹರಕ್ಷಕ ದಳ ಸಿಬ್ಬಂದಿ ಕೆಲಸದಿಂದ ವಜಾ ನಿರ್ಧಾರ ಖಂಡಿಸಿ ಪ್ರತಿಭಟನೆ
Team Udayavani, Jun 1, 2020, 6:47 PM IST
ಮಂಗಳೂರು: ಕೆಲಸದಿಂದ ವಜಾ ಮಾಡಿರುವ ವಿಚಾರಕ್ಕೆ ಗರಂ ಆಗಿರುವ ಗೃಹರಕ್ಷಕ ದಳದ ಸಿಬ್ಬಂದಿ ನಗರದ ಮೇರಿ ಹಿಲ್ನಲ್ಲಿರುವ ಗೃಹರಕ್ಷಕ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು.
ಕೋವಿಡ್ ವಾರಿಯರ್ಗಳಾಗಿ ದಿನದ ನಿಗದಿತ ಅವಧಿ ಮೀರಿ ದುಡಿದರೂ ಗೃಹರಕ್ಷಕ ದಳದ ಸಿಬ್ಬಂದಿಗೆ ಇನ್ನೂ ವೇತನ ಸಿಕ್ಕಿಲ್ಲ. ಇದರ ಬೆನ್ನಲ್ಲೇ ಕೆಲಸದಿಂದ ವಜಾ ಮಾಡಿರುವ ಸರ್ಕಾರದ ಆದೇಶದಿಂದ ಗೃಹರಕ್ಷಕ ಸಿಬ್ಬಂದಿ ಅಕ್ಷರಶಃ ಅತಂತ್ರರಾಗಿದ್ದಾರೆ. ಜಿಲ್ಲೆಯಲ್ಲಿ ಗೃಹರಕ್ಷಕ ದಳದ ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸರ್ಕಾರದ ಆದೇಶದಂತೆ ಎಸ್ಪಿ ವ್ಯಾಪ್ತಿಯಲ್ಲಿ 250 ಸಿಬ್ಬಂದಿ ಪೈಕಿ 80 ಮಂದಿಗೆ ಕೆಲಸ ನೀಡಿ ಉಳಿದವರನ್ನು ವಜಾಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ಅದೇ ರೀತಿ ಮಂಗಳೂರು ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ 153 ಸಿಬ್ಬಂದಿ ಪೈಕಿ 100 ಮಂದಿಗೆ ಕೆಲಸ ನೀಡುವ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಗೃಹರಕ್ಷಕ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ