ದರ ಹೆಚ್ಚಳದೊಂದಿಗೆ ಬಸ್‌ ಸಂಚಾರ ಆರಂಭ


Team Udayavani, Jun 2, 2020, 5:31 AM IST

ದರ ಹೆಚ್ಚಳದೊಂದಿಗೆ ಬಸ್‌ ಸಂಚಾರ ಆರಂಭ

ಉಡುಪಿ: ಜಿಲ್ಲೆಯಾದ್ಯಂತ ಸೋಮವಾರ ಖಾಸಗಿ ಸಿಟಿ ಮತ್ತು ಸರ್ವಿಸ್‌ ಬಸ್‌ಗಳು ಮತ್ತೆ ಸಂಚಾರ ಆರಂಭಿಸಿವೆ. ಕೋವಿಡ್-19 ಲಾಕ್‌ಡೌನ್‌ ಕಾರಣದಿಂದಾಗಿ 2 ತಿಂಗಳ ಕಾಲ ಬಸ್ಸು ಸಂಚಾರ ಸ್ಥಗಿತಗೊಂಡಿತ್ತು. ಲಾಕ್‌ಡೌನ್‌ ವಿನಾಯಿತಿಯಂತೆ ರಾಜ್ಯ ಸರಕಾರ 15 ದಿನಗಳ ಹಿಂದೆಯೇ ಬಸ್ಸು ಸಂಚಾರ ಆರಂಭಿಸಬಹುದು ಎಂದು ತಿಳಿಸಿತ್ತು. ಆದರೆ ಸರಕಾರದ ನಿಯಮಾವಳಿಯಂತೆ ಬಸ್ಸುಗಳನ್ನು ಓಡಿಸುವುದು ಕಷ್ಟ ಎಂದು ಬಸ್ಸು ಮಾಲಕರು ಸರಕಾರದ ಮುಂದೆ ಹಲವು ಬೇಡಿಕೆಗಳನ್ನು ಮಂಡಿಸಿದ್ದರು. ಆ ಪೈಕೆ ಕೆಲವು ಬೇಡಿಕೆಗಳು ಈಡೇರಿದ್ದವು. ಅದರಂತೆ ಸರಕಾರ ಅನುಮತಿಸಿದ ಶೇ. 15ರಷ್ಟು ದರ ಹೆಚ್ಚಳ ಮಾಡಿ ಬಸ್ಸುಗಳು ಸಂಚಾರ ಆರಂಭಿಸಿವೆ.

ಸೋಮವಾರ 20 ಸಿಟಿ ಬಸ್ಸುಗಳು ಸಹಿತ ದ.ಕ.ಜಿಲ್ಲಾ ವ್ಯಾಪ್ತಿಯ ಎಕ್ಸ್‌ಪ್ರೆಸ್‌, ಸರ್ವಿಸ್‌ ಬಸ್ಸುಗಳು ಸೇರಿ 60 ಬಸ್ಸುಗಳು ವಿವಿಧ ಮಾರ್ಗಗಳಲ್ಲಿ ಓಡಾಟ ನಡೆಸಿದವು. ಬಸ್ಸುಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಒಂದು ಟ್ರಿಪ್‌ ಆದ ಬಳಿಕ ಬಸ್ಸುಗಳನ್ನು ಸ್ಯಾನಿಟೈಸ್‌ ಮಾಡಲಾಗುತ್ತಿತ್ತು. ಚಾಲಕರು ಸಹಿತ ನಿರ್ವಾಹಕರು ಮಾಸ್ಕ್ ಧರಿಸಿ ಕರ್ತವ್ಯ ನಿರ್ವಹಿಸಿದರು. ಬೆಳಗ್ಗಿನ ಹೊತ್ತು ಜನಸಂದಣಿಯಿತ್ತು. ಬಸ್ಸುಗಳಲ್ಲಿ ನಿರ್ದಿಷ್ಟ ಪ್ರಮಾಣದಲ್ಲಿ ಜನಸೇರಿದ ಬಳಿಕ ಬಸ್ಸುಗಳು ಓಡಾಟ ನಡೆಸುತ್ತಿದ್ದವು.

ಸಾಮಾಜಿಕ ಅಂತರ ಮಾಯ
ಬಸ್ಸುಗಳೂ ಸೇರಿದಂತೆ ಸಾರ್ವಜನಿಕ ಸ್ಥಳ ಗಳಲ್ಲಿ ಸಾಮಾಜಿಕ ಅಂತರಕ್ಕೆ ಒತ್ತು ನೀಡಬೇಕು ಎಂದು ಹಲವೆಡೆ ಜಾಗೃತಿ ಫ‌ಲಕಗಳನ್ನು ಹಾಕಿದ್ದರೂ ಕೂಡ ಅದು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ. ಸೋಮವಾರ ಬಸ್ಸುಗಳಲ್ಲಿ ಪ್ರಯಾಣಿಕರು ಅಕ್ಕಪಕ್ಕದಲ್ಲಿ ಕುಳಿತುಕೊಂಡು ಸಂಚರಿಸಿದರು. ಎರಡು ತಿಂಗಳುಗಳಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ಬಸ್ಸು ತಂಗುದಾಣಗಳಲ್ಲಿ ಜನರ ಓಡಾಟವಿತ್ತು.

ಕೋವಿಡ್-19ದಿಂದ ಜಾಗೃತಿ
ಈ ಹಿಂದೆ ಬಸ್ಸುಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಪ್ರಯಾಣಿಕರನ್ನು ತುಂಬಿಸಲಾಗುತ್ತಿತ್ತು. ಬಸ್ಸುಗಳು ತುಂಬಿ ತುಳುಕುತ್ತಿದ್ದರೂ ಪ್ರಯಾಣಿಕರನ್ನು ಹತ್ತಿಸಲಾಗುತ್ತಿತ್ತು. ಇದೀಗ ಕೋವಿಡ್-19 ಪ್ರಕರಣ ಕಾಣಿಸಿಕೊಂಡ ಕಾರಣ ಬಸ್ಸುಗಳಲ್ಲಿಯೂ ಕಟ್ಟುನಿಟ್ಟಿನ ಆದೇಶ ಪಾಲನೆ ಮಾಡುವಂತೆ ಸರಕಾರ ತಿಳಿಸಿದೆ. ಜನರೂ ಜಾಗೃತರಾಗಿದ್ದರಿಂದ ಈಗ ಅಂತಹ ಸ್ಥಿತಿ ಇಲ್ಲ.

ಕಾರ್ಯಾರಂಭ
ಸೋಮವಾರದಿಂದ ಶೇ.25ರಷ್ಟು ಬಸ್ಸುಗಳು ಕಾರ್ಯಾರಂಭ ಮಾಡಿವೆ. ಜನ ಸಂಚಾರ ನೋಡಿಕೊಂಡು ಮುಂದಿನ ದಿನಗಳಲ್ಲಿ ಬಸ್ಸು ಗಳನ್ನು ಈ ಹಿಂದಿನಂತೆ ನಿಗದಿತ ಕಾಲಮಿತಿಯಲ್ಲಿ ಓಡಿಸ ಲಾಗುವುದು.
– ರಾಜವರ್ಮ ಬಲ್ಲಾಳ್‌ ಮತ್ತು ಕೆ. ಸುರೇಶ ನಾಯಕ್‌, ಅಧ್ಯಕ್ಷರು, ಕೆನರಾ ಬಸ್ಸು ಮಾಲಕರ ಸಂಘ ಮತ್ತು ಉಡುಪಿ ಸಿಟಿ ಬಸ್ಸು ಮಾಲಕರ ಸಂಘ.

ದರ ಹೆಚ್ಚಳದ ಹೊರೆ
ಬಸ್ಸು ಸಂಚಾರ ಇಲ್ಲದ ಕಾರಣ ಎರಡು ತಿಂಗಳಿಂದ ತೊಂದರೆ ಉಂಟಾಗಿತ್ತು. ಈಗ ಬಸ್ಸು ಸಂಚಾರ ಆರಂಭಗೊಂಡಿದ್ದು, ದಿನನಿತ್ಯದ ಕೆಲಸಗಳಿಗೆ ಹೋಗು ವವರಿಗೆ ಅನುಕೂಲವಾಗಿದೆ.ಬಸ್ಸು ದರ ಹೆಚ್ಚಳವಾಗಿರುವುದು ತುಸು ಹೊರೆ ಅನಿಸುತ್ತಿದೆ.
-ಜಯಂತ್‌, ಪ್ರಯಾಣಿಕ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.