ಹೊನ್ನಾಳಿ-ನ್ಯಾಮತಿಯ ಕೋವಿಡ್ ವಾರಿಯರ್ಸ್ಗೆ ಶಾಸಕ ರೇಣು ಕೃತಜ್ಞತೆ
Team Udayavani, Jun 2, 2020, 6:32 AM IST
ಹೊನ್ನಾಳಿ: ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರದಲ್ಲಿ ಕೋವಿಡ್ ವಾರಿಯರ್ಸ್ಗಳು ಭಾಗವಹಿಸಿದ್ದ ಕ್ಷಣ.
ಹೊನ್ನಾಳಿ: ಕೋವಿಡ್ ಮಹಾಮಾರಿಯಿಂದ ದೇಶ ತತ್ತರಿಸಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ. ಮೆಘಾ ಪ್ಯಾಕೇಜ್ ಘೋಷಣೆ ಮಾಡಿ ಸಹಾಯದ ಹಸ್ತ ಚಾಚಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಹಿರೇಕಲ್ಮಠದ ಆವರಣದಲ್ಲಿ ಸೋಮವಾರ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಕೋವಿಡ್ ವಾರಿಯರ್ಸ್ಗಳಿಗೆ ಹಮ್ಮಿಕೊಂಡಿದ್ದ ಕೃತಜ್ಞತಾ ಕಾರ್ಯಕ್ರಮ ಹಾಗೂ ಪ್ರೇರಣಾಪೂರ್ವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಸೋಂಕಿನ ವಿರುದ್ಧ ಹೋರಾಟ ನಿರಂತರ. ಮುಂದಿನ ದಿನಗಳಲ್ಲಿ ನಾವುಗಳು ಬಹು ಎಚ್ಚರದಿಂದ ಹೆಜ್ಜೆ ಇಡಬೇಕು. ಸ್ವಲ್ಪ ಎಚ್ಚರ ತಪ್ಪಿದರೆ ಬಹು ದೊಡ್ಡ ಅವಘಡ ಜರುಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಕೊರೊನಾ ಸಂಕಷ್ಟ ಮುಗಿದಿಲ್ಲ. ನಾವೆಲ್ಲರೂ ಯುದ್ದೋಪಾದಿಯಲ್ಲಿ ಹೋರಾಟ ಮಾಡಬೇಕಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಸಹಾಯಕಿಯರು, ವೈದ್ಯರು ಸೇರಿದಂತೆ ಇತರ
ಕೊರೊನಾ ವಾರಿಯರ್ಸ್ಗಳು ಮುಂದಿನ ದಿನಗಳಲ್ಲಿ ವ್ಯಾಪಕ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಕೋವಿಡ್ ವಾರಿಯರ್ಸ್ಗಳಿಗೆ ಇಂದು
ಹಮ್ಮಿಕೊಂಡಿರುವುದು ಪ್ರೇರಣಾ ಕಾರ್ಯಕ್ರಮ ಹಾಗೂ ಇದು ಆರಂಭವೂ ಹೌದು ಕೋವಿಡ್ ಸಂಪೂರ್ಣ ತೊಲಗಿದ ಮೇಲೆ ನ್ಯಾಮತಿ ತಾಲೂಕಿನಲ್ಲಿ
ಎಲ್ಲ ವಾರಿಯರ್ಸ್ಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಡಾ| ಒಡೆಯರ್ ಚಂದ್ರಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಹನುಮಂತರಾಯ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ನಾಗರಾಜ್, ಜಿಲ್ಲಾ ನೋಡಲ್ ಅಧಿಕಾರಿ ಮೀನಾಕ್ಷಿ ಕೋವಿಡ್ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ್
ತುಷಾರ್ ಬಿ.ಹೊಸುರು ಸ್ವಾಗತಿಸಿದರು. ಕೋವಿಡ್ ವಾರಿಯರ್ಸ್ಗೆ ಪುಷ್ಪವೃಷ್ಟಿ ಮಾಡಲಾಯಿತು. ಇದಕ್ಕೂ ಮುನ್ನ ಶಾಸಕರು, ಅಧಿಕಾರಿಗಳು ಹಾಗೂ
ಕೋವಿಡ್ ವಾರಿಯರ್ಸ್ಗಳು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಮೂಲಕ ಮಠಕ್ಕೆ ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ