ಕಾರ್ಯಕ್ರಮ ಮುಖ್ಯಸ್ಥರಾಗಿ ಡಾ| ಬಸು ಅಧಿಕಾರ ಸ್ವೀಕಾರ
Team Udayavani, Jun 2, 2020, 8:07 AM IST
ಧಾರವಾಡ: ಧಾರವಾಡದ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾಗಿ ಕತೆಗಾರ ಡಾ| ಬಸು ಬೇವಿನಗಿಡದ ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿದ್ದ ಸತೀಶ ಪರ್ವತಿಕರ ಅವರು ಮೇ 31ರಂದು ನಿವೃತ್ತರಾದ ಕಾರಣ ಆ ಸ್ಥಾನಕ್ಕೆ ಹಿರಿಯ ಕಾರ್ಯಕ್ರಮ ಅಧಿಕಾರಿಯಾಗಿದ್ದ ಡಾ| ಬಸು ಬೇವಿನಗಿಡದ ಅವರನ್ನು ನೇಮಿಸಲಾಗಿದೆ. ಆಕಾಶವಾಣಿ ಮತ್ತು ದೂರದರ್ಶನದ ದಕ್ಷಿಣ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಡಾ|ರಾಜಕುಮಾರ ಉಪಾಧ್ಯಾಯ ಅವರು ನೇಮಕ ಆದೇಶ ಹೊರಡಿಸಿದ್ದಾರೆ.
ಬೇವಿನಗಿಡದ ಕುರಿತು: ಡಾ| ಬಸು ಬೇವಿನಗಿಡದ ಅವರು ಇದುವರೆಗೆ ಧಾರವಾಡ ಸೇರಿದಂತೆ ಕಲಬುರ್ಗಿ, ವಿಜಯಪುರ, ಕಾರವಾರ ಮುಂತಾದ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆಕಾಶವಾಣಿ ರಾಷ್ಟ್ರೀಯ ವಾರ್ಷಿಕ ಸ್ಪರ್ಧೆಗಳಲ್ಲಿ ಸತತ ಎರಡು ಸಲ ಪ್ರಥಮ ಬಹುಮಾನ, ರಾಜ್ಯಮಟ್ಟದ ಆಕಾಶವಾಣಿ ಸ್ಪರ್ಧೆಗಳಲ್ಲಿ ಸತತ ಮೂರು ಸಲ ಪ್ರಥಮ ಬಹುಮಾನ ಪಡೆದಿದ್ದಾರೆ. ಗುಣಮಟ್ಟದ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಿ, ಹೊಸ ಹೊಸ ಪ್ರತಿಭೆಗಳನ್ನು ಗುರುತಿಸಿ ವಿಶಿಷ್ಟತೆ ಗಳಿಸಿದ್ದಾರೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಎರಡು ಸಲ ಸಾಹಿತ್ಯ ಅಕಾಡೆಮಿ ಬಹುಮಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ