ರೈಲಲ್ಲಿ ಬಂದವರು ನಾಗಾವಿ ಕ್ವಾರಂಟೈನ್ಗೆ
Team Udayavani, Jun 2, 2020, 12:44 PM IST
ವಾಡಿ: ಸೋಮವಾರದಿಂದ ರೈಲುಗಳ ಸಂಚಾರ ಆರಂಭವಾಗುತ್ತಿದ್ದಂತೆ ಮಹಾರಾಷ್ಟ್ರ, ಆಂಧ್ರ ಹಾಗೂ ಬೆಂಗಳೂರಿನಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲಾಗುತ್ತಿದ್ದು, ರೈಲು ನಿಲ್ದಾಣದಿಂದಲೇ ನೇರವಾಗಿ ಸರಕಾರಿ ಕ್ವಾರಂಟೈನ್ಗೆ ಕರೆದೊಯ್ಯಲಾಗುತ್ತಿದೆ.
ಸೋಮವಾರ ಸಂಜೆ 7.40ಕ್ಕೆ ಮುಂಬೈ-ಬೆಂಗಳೂರು ಉದ್ಯಾನ್ ಏಕ್ಸ್ಪ್ರೆಸ್ ರೈಲು ವಾಡಿ ಜಂಕ್ಷನ್ ನಿಲ್ದಾಣ ತಲುಪುತ್ತಿದ್ದಂತೆ ಪ್ಲಾಟ್ ಫಾರ್ಮ್ ಮೇಲೆ ಇಳಿಯುವ ಪ್ರಯಾಣಿಕರಿಗಾಗಿ ಕಾಯುತ್ತಿದ್ದ ಪೊಲೀಸರು ಸುರಕ್ಷತೆ ಒದಗಿಸಿದರೆ, ತಹಶೀಲ್ದಾರರು ಗೌರವದಿಂದ ಸ್ವಾಗತಿಸಿ ಥರ್ಮಲ್ ಸ್ಕ್ರೀನಿಂಗ್ಗೆ ಸಹಕರಿಸುವಂತೆ ಮನವೊಲಿಸಿದರು. ಕಿರಿಯ ಆರೋಗ್ಯ ಸಹಾಯಕಿ ಅನಿತಾ ಮಲಗೊಂಡ ಹಾಗೂ ಸಿಬ್ಬಂದಿ ಪ್ರತಿಯೊಬ್ಬ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದರು.
ವಾಡಿ ವಲಯದ ವಿವಿಧ ಗ್ರಾಮ ಹಾಗೂ ತಾಂಡಾಗಳಿಗೆ ಸೇರಿದ ಒಟ್ಟು 20 ಜನ ಪ್ರಯಾಣಿಕರನ್ನು ಏಳು ದಿನಗಳವರೆಗೆ ಚಿತ್ತಾಪುರ ಪಟ್ಟಣದ ನಾಗಾವಿ ಹಬ್ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಯಿತು. ತಹಶೀಲ್ದಾರ್ ಉಮಾಕಾಂತ ಹಳ್ಳೆ, ವಾಡಿ ನಗರ ಠಾಣೆ ಪಿಎಸ್ಐ ವಿಜಯಕುಮಾರ ಭಾವಗಿ, ಕ್ರೈಂ ಪಿಎಸ್ಐ ದಿವ್ಯಾ ಮಹಾದೇವ್, ರೈಲು ನಿಲ್ದಾಣ ಪಿಎಸ್ಐ ವೀರಭದ್ರಪ್ಪ ಪ್ರಯಾಣಿಕರಿಗೆ ಭದ್ರತೆ ಒದಗಿಸಿದರು.
ಮಂಗಳವಾರ ಬರುವ ರೈಲುಗಳಿಂದಲೂ ಪ್ರಯಾಣಿಕರು ಆಗಮಿಸಲಿದ್ದು, ಎಲ್ಲರಿಗೂ ನಾಗಾವಿ ಕ್ವಾರಂಟೈನ್ಗೆ ಕಳುಹಿಸಲಾಗುವುದು ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?