ಕೋವಿಡ್‌ನಿಂದ ಹೈರಾಣಾದ ಮುಂಬಯಿಗೆ ಚಂಡಮಾರುತದ ಗಂಡಾಂತರ

ಮುಂಬಯಿ ಪಾಲಿಗೆ ಚಂಡಮಾರುತ ಭೀತಿ ಇದೇ ಮೊದಲು!

Team Udayavani, Jun 2, 2020, 6:21 PM IST

ಕೋವಿಡ್‌ನಿಂದ ಹೈರಾಣಾದ ಮುಂಬಯಿಗೆ ಚಂಡಮಾರುತದ ಗಂಡಾಂತರ

ಮುಂಬಯಿ: ಅರಬಿ ಸಮುದ್ರದಲ್ಲಿ ಚಂಡಮಾರುತ ಇನ್ನಷ್ಟು ತೀವ್ರಗೊಳ್ಳುತ್ತಿದ್ದು, ಕೋವಿಡ್‌ ವೈರಸ್‌ನಿಂದ ಈಗಾಗಲೇ ಹೈರಾಣಾಗಿರುವ ಮುಂಬಯಿಗೆ ಚಂಡಮಾರುತ ಇನ್ನೊಂದು ಗಂಡಾಂತರ ತಂದೊಡ್ಡಿದೆ.

ಒಂದು ವೇಳೆ ಈ ವಾರ ಚಂಡಮಾರುತ ಮುಂಬಯಿಗೆ ಅಪ್ಪಳಿಸಿದ್ದೇ ಆದಲ್ಲಿ ಅದು ಮುಂಬಯಿ ಮಟ್ಟಿಗೆ ಇತಿಹಾಸ ಪುಸ್ತಕದಲ್ಲಿ ದಾಖಲಾಗಲಿದೆ. ಕಾರಣ ಇದು ಮುಂಬಯಿಗೆ ಬಂದೆರಲಿಗಲಿರುವ ಮೊದಲ ಚಂಡಮಾರುತ. ಈಗಾಗಲೇ ಇದಕ್ಕೆ ನಿಸರ್ಗ ಎಂದು ಹೆಸರಿಡಲಾಗಿದ್ದು, ಈ ಮಾಸದಲ್ಲಿ ಸೃಷ್ಟಿಯಾಗಿರುವ ಎರಡನೇ ಚಂಡಮಾರುತವಾಗಿವೆ. ಭಾರತದ ಪಾಲಿಗೆ ಆಂಫಾನ್‌ ಚಂಡ ಮಾರುತದ ಬಳಿಕ ನಿಸರ್ಗ ಚಂಡ ಮಾರುತವೂ ಅತಿ ಹೆಚ್ಚು ಭೀತಿಯನ್ನು ಸೃಷ್ಟಿಸಿದೆ.

ಮುಂಬಯಿಂದ ಕೇವಲ 110 ಕಿ.ಮೀ. ದೂರದಿಂದ ಜೂ.3ರಂದು ಚಂಡಮಾರುತ ಬೀಸಿ ಬರಲಿದೆ ಎಂದು ಹೇಳಲಾಗಿದೆ. ಇದರಿಂದ ಮಹಾರಾಷ್ಟ್ರ, ಗೋವಾ, ಗುಜರಾತ್‌ ಕರಾವಳಿಯಲ್ಲಿ ತೀವ್ರ ಮಳೆ ಸುರಿಯುವ ನಿರೀಕ್ಷೆ ಇದೆ. ಗಂಟೆಗೆ 115 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು ಇದು 125 ಕಿ.ಮೀ. ವೇಗದ ವರೆಗೆ ಹೋಗಬಹುದು ಎಂದು ಹೇಳಲಾಗಿದೆ.

ಇದೇ ಮೊದಲು
ಮುಂಬಯಿ ಪಾಲಿಗೆ ಈ ಚಂಡಮಾರುತದ ಹಾವಳಿ ಇದೇ ಮೊದಲು. 1882ರಲ್ಲಿ ಬಾಂಬೆ ಸೈಕ್ಲೋನ್‌ನಿಂದ ಸುಮಾರು 1 ಲಕ್ಷ ಜನ ಮೃತಪಟ್ಟಿದ್ದಾರೆ ಎಂಬ ಕಥೆಗಳಿದ್ದರೂ ಇಷ್ಟರವರೆಗೆ ಮುಂಬಯಿ ಮೇಲೆ ಚಂಡಮಾರುತ ಬೀಸಿದ ಉದಾಹರಣೆಗಳಿಲ್ಲ.
ಮುಂಬಯಿ ಅರಬಿ ಸಮುದ್ರದ ಭಾಗ ಚಂಡಮಾರುತದ ಹಾವಳಿಯಿಲ್ಲದ ಪ್ರದೇಶದಲ್ಲಿದ್ದು, ಈ ಭಾಗದಲ್ಲಿ ವಾಯುಭಾರ ಕುಸಿದು ಚಂಡಮಾರುತ ರೂಪು ತಳೆಯುವುದು ಇಲ್ಲವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ಇದೆ. ಬಂಗಾಳ ಕೊಲ್ಲಿಗೆ ಹೋಲಿಸಿದರೆ ಈ ಭಾಗದಲ್ಲಿ ಸಮುದ್ರ ಶಾಂತವಾಗಿಯೂ ಇರುತ್ತದೆ.

ಸಾಮಾನ್ಯವಾಗಿ ಚಂಡಮಾರುತ ಅರಬಿ ಸಮುದ್ರದಲ್ಲಿ ಸೃಷ್ಟಿಯಾದರೂ ಅದು ಒಮಾನ್‌ ಮತ್ತು ಗಲ್ಫ್ ಏಡೆನ್‌ನತ್ತ ಸಾಗುತ್ತವೆ. ಅಥವಾ ಗುಜರಾತ್‌ನ ಉತ್ತರ ಭಾಗದತ್ತ ಹೋಗುತ್ತವೆ. 1998ರಲ್ಲಿ ಸೃಷ್ಟಿಯಾದ ಚಂಡಮಾರುತದಿಂದ ಅಥವಾ ಕಳೆದ ವರ್ಷದ ವಾಯು ಚಂಡಮಾರುತ ಗುಜರಾತ್‌ ಕರಾವಳಿಯತ್ತ ಹೋಗಿತ್ತು.

ಉಪಉಷ್ಣವಲಯದ ಶ್ರೇಣಿಯ ಭಾಗವಾಗದ್ದರಿಂದ ಇಲ್ಲಿ ಚಂಡಮಾರುತಗಳು ಸೃಷ್ಟಿಯಾದರೂ ಅದು ಭೂಮಿಗೆ ಅಪ್ಪಳಿಸುವ ಮೊದಲು ದುರ್ಬಲವಾಗುತ್ತದೆ ಎಂದು ಪರಿಣತರು ಹೇಳುತ್ತಾರೆ.

ಇತ್ತೀಚೆಗೆ ಕೇರಳ ತೀರದಲ್ಲಿ ಚಂಡಮಾರುತ ಸೃಷ್ಟಿಯಾಗಿತ್ತು. ಇದಕ್ಕೆ ಕಾರಣ ಕಡಲ ತೀರದಲ್ಲಿ ಹೆಚ್ಚಿನ ಉಷ್ಣತೆ. ಅಲ್ಲದೇ ಭೂಮಿ ಬದಿಯ ವಾತಾವರಣದ ಒತ್ತಡ. ಮುಂಬಯಿ ಮಟ್ಟಿಗೆ ಅಲ್ಲಿನ ನಿಸರ್ಗ ವ್ಯವಸ್ಥೆಗಳು ಚಂಡಮಾರುತ ತೀವ್ರವಾಗುವಂತೆ ಮಾಡುವುದಿಲ್ಲ ಎಂದೂ ಹೇಳಲಾಗಿದೆ.

ಇದರೊಂದಿಗೆ 2015ರ ಬಳಿಕ ಅರಬಿ ಸಮುದ್ರದಲ್ಲಿ ಚಂಡಮಾರುತಗಳು ಹೆಚ್ಚಾಗಿ ಸೃಷ್ಟಿಯಾಗುತ್ತಿರುವುದನ್ನೂ ಗುರುತಿಸಲಾಗಿದೆ. ಅರಬಿ ಸಮುದ್ರವೂ ಹೆಚ್ಚಿನ ತಾಪಮಾನ ಕಾಣುತ್ತಿರುವಂತೆ ಚಂಡಮಾರುತಕ್ಕೆ ಕಾರಣವಾಗುತ್ತಿದೆ ಎನ್ನಲಾಗಿದೆ. ಕಳೆದ ಒಂದು ವರ್ಷದಲ್ಲಿ 5-8 ಚಂಡಮಾರುತ ಸೃಷ್ಟಿಯಾಗಿರುವುದನ್ನು ಗಮನಿಸಲಾಗಿತ್ತು.

ಆಸ್ಪತ್ರೆಗಳು ಹೈ ಅಲರ್ಟ್‌
ಕೋವಿಡ್‌ ವಿಚಾರಕ್ಕೆ ಮುಂಬಯಿ ಆಸ್ಪತ್ರೆಗಳು ಹೈ ಅಲರ್ಟ್‌ ಆಗಿರುವಂತೆ ಈಗ ಚಂಡಮಾರುತದ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಆಗಿವೆ. ಚಂಡಮಾರತ ಸಂತ್ರಸ್ತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವತ್ತ ಗಮನಹರಿಸಲಾಗಿದೆ. ಇದರೊಂದಿಗೆ ರಾಸಾಯನಿಕ ಕಾರ್ಖಾನೆಗಳಿಗೂ ಎಚ್ಚರಿಕೆ ಸಂದೇಶಗಳನ್ನು ರವಾನಿಸಲಾಗಿದೆ. ಜುಹು ವಿಮಾನ ನಿಲ್ದಾಣದಲ್ಲಿ ವಿಮಾನಗಳನ್ನು ಸುರಕ್ಷಿತವಾಗಿ ನಿಲ್ಲಿಸುವಂತೆ ಹೇಳಲಾಗಿದೆ.

25 ಎನ್‌ಡಿಆರ್‌ಎಫ್ ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳದ ತಂಡಗಳು ಸಿದ್ಧವಾಗಿವೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.