ಉಡುಪಿ ಜಿಲ್ಲೆ: ಸೆಲೂನ್ ರವಿವಾರ ಬಂದ್
Team Udayavani, Jun 3, 2020, 5:37 AM IST
ಸಾಂದರ್ಭಿಕ ಚಿತ್ರ
ಉಡುಪಿ: ಇದುವರೆಗೆ ಸೆಲೂನ್ಗಳಲ್ಲಿ ರವಿವಾರ ಜನದಟ್ಟಣೆ ಸಹಜವಾಗಿತ್ತು.ಇನ್ನು ಮುಂದೆ ಸೆಲೂನ್ಗಳೂ ರವಿವಾರ ರಜೆ ಸಾರುತ್ತಿವೆ.ಬದಲಾಗಿ ಮಂಗಳವಾರದಂದು ತೆರೆದಿರುತ್ತವೆ. ಇದಕ್ಕೆ ಕಾರಣ ಕೋವಿಡ್-19.
ಕೋವಿಡ್-19 ದೂರವಿಡಲು ಸಾಮಾಜಿಕ ಅಂತರ ಕಾಪಾಡುವುದು ಮುಖ್ಯ.ರವಿವಾರ ಮಕ್ಕಳ ತಲೆಗೂದಲು ತೆಗೆಸಲು ತಾಯಂದಿರೂ ಸೆಲೂನ್ಗಳಿಗೆ ಬರುತ್ತಾರೆ. ರಜಾ ದಿನವಾದ್ದರಿಂದ ಇತರ ಉದ್ಯೋಗಸ್ಥರೂ ಬರುತ್ತಾರೆ. ಇದರಿಂದ ಜನದಟ್ಟಣೆ ಜಾಸ್ತಿಯಾಗುತ್ತದೆ.ಈ ಸಮಸ್ಯೆಗೆ ಪರಿಹಾರವೆಂಬಂತೆ ರವಿವಾರ ರಜೆಯನ್ನು ಘೋಷಿಸಲಾಗಿದೆ.
ಈ ಕುರಿತು ಮಂಗಳವಾರ ಸವಿತಾ ಸಮಾಜದ ಸಭೆಯಲ್ಲಿ ನಿರ್ಣಯ ತಳೆಯಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ ಭಂಡಾರಿ ಗುಡ್ಡೆಯಂಗಡಿ ವಹಿಸಿದ್ದರು. ಸಮಾಜದ ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಪ್ರ.ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ ಸಾಲಿಯಾನ್ ಆದಿಉಡುಪಿ, ರಾಜ್ಯ ಪ್ರತಿನಿಧಿ ನಿಂಜೂರು ವಿಶ್ವನಾಥ ಭಂಡಾರಿ, ಸವಿತಾ ಸಮಾಜ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್ಚಂದ್ರ ಭಂಡಾರಿ ಮಣಿಪಾಲ ಉಪಸ್ಥಿತರಿದ್ದರು. ಏಳು ತಾಲೂಕುಗಳ ಅಧ್ಯಕ್ಷರು, ಪ್ರ.ಕಾರ್ಯದರ್ಶಿಗಳು, ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ