ಕೋವಿಡ್‌ 19 ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ


Team Udayavani, Jun 3, 2020, 6:32 AM IST

kovid-pariksayala

ಕೋಲಾರ: ಜಿಲ್ಲಾ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲೇ ಕೋವಿಡ್‌ 19 ಪರೀಕ್ಷಾ ಲ್ಯಾಬ್‌ ಆರಂಭವಾಗುತ್ತಿರುವುದರಿಂದ ದಿನಕ್ಕೆ 150 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ಫಲಿತಾಂಶ ಅದೇ ದಿನ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಅಬಕಾರಿ ಸಚಿವ  ಎಚ್‌.ನಾಗೇಶ್‌ ತಿಳಿಸಿದರು.

ನಗರದ ಎಸ್ಸೆನ್ನಾರ್‌ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವಿಭಾಗದಲ್ಲಿ ಸ್ಥಾಪಿಸಿರುವ ಕೊವಿಡ್‌-19 ಪ್ರಯೋ ಗಾಲಯವ ನ್ನು ಮಂಗಳವಾರ  ಉದ್ಘಾಟಿಸಿದ ಅವರು,ತಮ್ಮ ಹಾಗೂ ಡೀಸಿಯವರ ಮನ ವಿಗೆ ತಕ್ಷಣ ಸ್ಪಂದಿಸಿ ಜಿಲ್ಲೆಗೆ ಪ್ರಯೋಗಾಲಯ ಮಂಜೂರು ಮಾಡಿದ ಸಿಎಂಗೆ ಧನ್ಯವಾದ ಸಲ್ಲಿಸಿದರು. ಕೋವಿಡ್‌ 19 ಪರೀಕ್ಷೆಗೆ ಗಂಟಲು ದ್ರವ ಮಾದರಿಗಳನ್ನು ಬೆಂಗಳೂರಿಗೆ  ಕಳುಹಿಸಬೇಕಾ ಗಿತ್ತು,  ಆದರೆ, ಈಗ ಇಲ್ಲೇ ಲ್ಯಾಬ್‌ ಇದ್ದು, ಗಂಟೆಗೆ 12 ಮಂದಿಯಂತೆ ಒಟ್ಟು ದಿನಕ್ಕೆ 150 ಮಂದಿಯ ಫಲಿತಾಂಶ ಸಿಗಲಿದೆ ಎಂದರು.

ಖಾಸಗಿ ಆಸ್ಪತ್ರೆಗಿಂತ ನಾವು ಕಡಿಮೆ ಇಲ್ಲ: ಮೈಸೂರು ಮಹಾರಾಜರ ಕಾಲದ  ಇತಿಹಾಸ ಹೊಂದಿರುವ ಜಿಲ್ಲಾ ಆಸ್ಪತ್ರೆಯ ವಾತಾವರಣ ನೋಡಿದರೆ ಯಾವುದೇ ಖಾಸಗಿ ಆಸ್ಪತ್ರೆಗಳಿಗಿಂತ ಕಡಿಮೆ ಇಲ್ಲ, ಮಾದರಿ ಆಸ್ಪತ್ರೆಯಾಗಿ ಹೊರಹೊಮ್ಮಿದೆ ಎಂದ ಅವರು, ಇದು ಮುಂದುವರಿಯಬೇಕು, ಇನ್ನಷ್ಟು ಉತ್ತಮ  ಸೇವೆ ನೀಡುವಂತಾಗಲು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಿ ದರು.

ಇಷ್ಟು ದಿನ ಕೋವಿಡ್‌ 19 ಪರೀಕ್ಷೆಗಾಗಿ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಿ ವರದಿಗಾಗಿ ಕನಿಷ್ಠ 2 ದಿನ ಕಾಯಬೇಕಿತ್ತು. ವೀಡಿಯೋ  ಕಾನ್ಫರೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಪ್ರಯೋಗಾಲಯ ಮಂಜೂರು ಮಾಡುವಂತೆ ನಾನು ಹಾಗೂ ಜಿಲ್ಲಾಧಿಕಾರಿಗಳು ಸಿಎಂಗೆ ಮನವಿ ಮಾಡಿದ ತಕ್ಷಣ ಮಂಜೂ ರಾತಿ ಸಿಕ್ಕಿತು. ಜಿಲ್ಲೆಯ ಪಾಲಿಗಿಂದು ಶುಭದಿನ ಎಂದು ಹರ್ಷ  ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಈವರೆಗೆ 26 ಸೋಂಕಿತ ಕೇಸ್‌: ಜಿಲ್ಲೆಯಲ್ಲಿ ಈವರೆಗೆ ಒಟ್ಟು 28 ಮಂದಿಗೆ ಕರೊನಾ ಸೋಂಕು ದೃಢಪಟ್ಟು ಸೋಮ ವಾರ  ದವರೆಗೆ 11 ಜನ ಬಿಡುಗಡೆಹೊಂದಿ ದ್ದಾರೆ. ಇನ್ನೂ 17 ಸಕ್ರಿಯ ಪ್ರಕರಣಗಳಿವೆ. ಎಲ್ಲರೂ ಆದಷ್ಟು  ಶೀಘ್ರ ಗುಣಮುಖ ರಾಗುವ ಭರವಸೆಯಿದೆ. ನಮ್ಮ ಟೀಂ ಅಷ್ಟು ಸಮರ್ಥವಾಗಿದೆ. ಜಿಲ್ಲಾಡಳಿತ, ವೈದ್ಯ ಸಿಬ್ಬಂದಿ, ಕೋವಿಡ್‌ 19 ವಾರಿಯರ್ಸ್‌ ಮುತುವರ್ಜಿಯಿಂ ದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನುಡಿದರು.

ಜಿಲ್ಲಾಧಿಕಾರಿ ಸಿ. ತ್ಯಭಾಮ ಮಾತನಾಡಿ, ಪ್ರಯೋಗಾಲಯದಲ್ಲಿ ಪ್ರತಿ ಗಂಟೆಗೆ 12 ಮಾದ ರಿಗಳ ವರದಿ ಕೈ ಸೇರುವುದರಿಂದ ಸೋಂಕಿ ತರ ಪ್ರಾಥಮಿಕ ಸಂಪರ್ಕ ಪತ್ತೆ  ಹಚ್ಚಲು, ಕಂಟೇನ್ಮೆಂಟ್‌ ಜೋನ್‌ ತಕ್ಷಣದಲ್ಲಿ ಕ್ರಮ ವಹಿಸಲು ಸಾಧ್ಯವಾಗುತ್ತದೆ  ಎಂದರು. ಎಸಿ ಸೋಮಶೇಖರ್‌, ಡಿಎಚ್‌ಒ ಡಾ.  ಎಸ್‌.ಎನ್‌.ವಿಜಯಕುಮಾರ್‌, ಜಿಲ್ಲಾ ಸರ್ಜನ್‌ ಡಾ.ಎಸ್‌.ಜಿ.ನಾರಾಯಣಸ್ವಾಮಿ, ತಹಶೀಲ್ದಾರ್‌ ಶೋಭಿತಾ, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಜಗದೀಶ್‌, ಆರೋಗ್ಯ ಅಧಿಕಾರಿಗಳು  ಇತರರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.