ಕೋವಿಡ್ ನಿಯಮಾವಳಿ ಪಾಲಿಸಿ
Team Udayavani, Jun 3, 2020, 7:42 AM IST
ಬೈಲಹೊಂಗಲ: ಕೋವಿಡ್ ಸೋಂಕು ಹರಡದಂತೆ ಸರಕಾರ ಸೂಚಿಸಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ದದಿದ್ದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಐಪಿಎಸ್ ಅಧಿಕಾರಿ ಎಎಸ್ಪಿ ಪ್ರದೀಪ ಗುಂಟೆ ಎಚ್ಚರಿಕೆ ನೀಡಿದರು.
ಅವರು ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಕೋವಿಡ್ ಸೋಂಕು ತಡೆಗಟ್ಟಲು ಜನತೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದು, ಮಾಸ್ಕ್ ಧರಿಸಬೇಕು. ವ್ಯಾಪಾರಸ್ಥರು ತಮ್ಮ ವಹಿವಾಟನ್ನು ನಿಯಮಾವಳಿ ಪ್ರಕಾರ ಕೈಗೊಳ್ಳಬೇಕು ಎಂದರು.
ಅಕ್ರಮ ಸಾರಾಯಿ ಮಾರಾಟ, ಜೂಜಾಟ, ಮಟಕಾ, ಗಾಂಜಾ, ಕಳ್ಳತನ ಪ್ರಕರಣಗಳ ಕುರಿತು ಹೆಚ್ಚಿನ ನಿಗಾ ವಹಿಸಲಾಗುತ್ತಿದ್ದು, ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕೈಜೋಡಿಸಬೇಕು ಎಂದರು.
ಕಂದಾಯ ಇಲಾಖೆ, ಪುರಸಭೆ ಸಹಕಾರದಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿಯಮಾವಳಿ ರೂಪಿಸಲಾ ಗುತ್ತಿದೆ. ಬೇಕಾಬಿಟ್ಟಿಯಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಪಟ್ಟಣದಲ್ಲಿ ಅಕ್ರಮ ಸಾರಾಯಿ ಮಾರಾಟ, ಯುವಕರಲ್ಲಿ ಗಾಂಜಾ ಸೇವನೆ ಹೆಚ್ಚುತ್ತಿದೆ ಮತ್ತು ರೋಡ್ ರೋಮಿಯೋಗಳ ಸಮಸ್ಯೆ ಕುರಿತು ಪತ್ರಕತರರು ಗಮನ ಸೆಳೆದಾಗ, ಕೂಡಲೇ ಪರಿಶೀಲಿಸಿ ಕಡಿವಾಣ ಹಾಕಲಾಗುವುದು ಎಂದರು.
ಸಿಪಿಐ ಮಂಜುನಾಥ ಕುಸಗಲ್ಲ, ಪಿಎಸ್ಐ ಈರಪ್ಪ ರಿತ್ತಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
MUST WATCH
ಹೊಸ ಸೇರ್ಪಡೆ
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ