ಕುಡಿಯುವ ನೀರಿನ ಯೋಜನೆ ರೂಪಿಸಲು ಸಚಿವರಿಂದ ಚರ್ಚೆ


Team Udayavani, Jun 3, 2020, 8:09 AM IST

ಕುಡಿಯುವ ನೀರಿನ ಯೋಜನೆ ರೂಪಿಸಲು ಸಚಿವರಿಂದ ಚರ್ಚೆ

ಕುಮಟಾ: ತಾಲೂಕಿನ ಉಪ್ಪಿನಪಟ್ಟಣ ಅಘನಾಶಿನಿ ನದಿ ತೀರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಶಾಸಕ ದಿನಕರ ಶೆಟ್ಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಯೋಜನೆ ರೂಪಿಸುವ ಬಗ್ಗೆ ಚರ್ಚಿಸಿದರು.

ಅಳಕೋಡ ಗ್ರಾ.ಪಂ ವ್ಯಾಪ್ತಿಯ ಕತಗಾಲ ಉಪ್ಪಿನಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸುವ ಬಗ್ಗೆ ಶಾಸಕ ದಿನಕರ ಶೆಟ್ಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅಲ್ಲಿನ ಅಘನಾಶಿನಿ ನದಿಯ ತೀರವನ್ನು ವೀಕ್ಷಿಸಿದ ಸಚಿವರು, ಶಾಸಕರು ಮತ್ತು ಅಲ್ಲಿನ ಜಿಪಂ ಸದಸ್ಯ ಗಜಾನನ ಪೈ ಅವರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಜಿ.ಪಂ ಸದಸ್ಯ ಗಜಾನನ ಪೈ, ಆ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಗಮನ ಸೆಳೆದರು. ಉಪ್ಪಿನಪಟ್ಟಣ ಗ್ರಾಮಕ್ಕೆ ಹೊಂದಿಕೊಂಡಿರುವ ಅಘನಾಶಿನಿ ಮತ್ತು ಚೆಂಡಿಕಾ ನದಿ ವರ್ಷಪೂರ್ತಿ ಹರಿದು ಸಮುದ್ರ ಸೇರುತ್ತದೆ. ಸಮುದ್ರದ ಏರಿಳಿತದಿಂದ ಉಪ್ಪು ನೀರು ನದಿಗೆ ಸೇರ್ಪಡೆಯಾಗಿ ಆ ಭಾಗದ ನೀರಿನ ಮೂಲಗಳು ಉಪ್ಪಾಗುವುದರಿಂದ ಕುಡಿಯಲು ಅಯೋಗ್ಯವಾಗುತ್ತದೆ. ಇದರಿಂದ ಈ ಪ್ರದೇಶದ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ.

ಹಾಗಾಗಿ ಈ ಅಘನಾಶಿನಿ ಮತ್ತು ಚೆಂಡಿಕಾ ನದಿ ಸೇರುವ ಸಂಗಮ ಸ್ಥಾನದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಿದರೆ, ನದಿ ನೀರು ಸಂಗ್ರಹವಾಗುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಸಮುದ್ರ ಸೇರಿ ವ್ಯರ್ಥವಾಗುವ ನೀರಿನಿಂದ ಕುಮಟಾ ತಾಲೂಕಿನ ದಿವಗಿ, ಹೆಗಡೆ, ಅಘನಾಶಿನಿ ಸೇರಿದಂತೆ 10 ಪಂಚಾಯತಗಳಿಗೆ ಈ ನೀರನ್ನು ಪೂರೈಸುವ ಮೂಲಕ ಆ ಪ್ರದೇಶಗಳಲ್ಲಿ ಎದುರಾದ ನೀರಿನ ಭವಣೆ ನೀಗಿಸಬಹುದಾಗಿದೆ. ಹಾಗಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ಜಿಪಂ ಸದಸ್ಯ ಗಜಾನನ ಪೈ ಅವರು ಸಚಿವರಿಗೆ ವಿನಂತಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಶಿವರಾಮ ಹೆಬ್ಟಾರ, ತಾಲೂಕಿನ ಏಳೆಂಟು ಗ್ರಾಪಂಗಳಿಗೆ ಕುಡಿಯುವ ನೀರನ್ನು ಪೂರೈಸುವ ಉದ್ದೇಶದಿಂದ ಉಪ್ಪಿನಪಟ್ಟಣದ ಎರಡು ನದಿಯ ಸಂಗಮ ಸ್ಥಾನದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಗೆ ಸ್ಥಳ ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇವೆ. ಈ ಡ್ಯಾಮ್‌ಗೆ ಗೇಟ್‌ ವ್ಯವಸ್ಥೆ ಇರುವುದರಿಂದ ಮಳೆಗಾಳದಲ್ಲಿ ಗೇಟ್‌ ತೆರೆದಿರುತ್ತದೆ. ಬೇಸಿಗೆಯಲ್ಲಿ ಗೇಟ್‌ ಮುಚ್ಚಿರುತ್ತದೆ. ಇದರಿಂದ ಡ್ಯಾಮ್‌ನಲ್ಲಿ ನೀರು ಸಂಗ್ರಹವಾಗುತ್ತದೆ. ಆ ನೀರನ್ನು ಗ್ರಾಮಗಳಿಗೆಪೂರೈಕೆ ಮಾಡಲಾಗುವುದು. ಡ್ಯಾಮ್‌ನಲ್ಲಿ ನೀರು ಸಂಗ್ರಹವಾಗುವುದರಿಂದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಅಂತರಜಲ ವೃದ್ಧಿಯಾಗುತ್ತದೆ. ಈ ಡ್ಯಾಮ್‌ ಬಗ್ಗೆ ಜನರಲ್ಲಿ ಅಪನಂಬಿಕೆ ಬೇಡ. ಕೆಲವರು ಹರಡುವ ತಪ್ಪು ಮಾಹಿತಿಯ ಬಗ್ಗೆ ಕಿವಿಗೊಡಬೇಡಿ ಎಂದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಕತಗಾಲ, ಉಪ್ಪಿನಪಟ್ಟಣ ಭಾಗದಲ್ಲಿರುವ ನೀರಿನ ಸಮಸ್ಯೆಯನ್ನು ನೀಗಿಸಲು ಶೀಘ್ರದಲ್ಲಿ ಪ್ರಸ್ತಾಪಿತ ಯೋಜನೆ ಜಾರಿಗೊಳಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಚಿವರ ಬಳಿ ವಿನಂತಿಸಿದರು. ಅಲ್ಲದೇ, ಆ ಭಾಗದ ಅಭಿವೃದ್ಧಿಯ ಕುರಿತು ಕೂಡ ಚರ್ಚಿಸಿದರು. ನಂತರ ಜಿಪಂ ಸದಸ್ಯ ಗಜಾನನ ಪೈ ಉಪ್ಪಿನಪಟ್ಟಣದ ಕಮಲದ ಕೆರೆಯನ್ನು ವೀಕ್ಷಿಸಲು ಸಚಿವರನ್ನು ಸ್ಥಳಕ್ಕೆ ಕರೆದೊಯ್ದರು. ಕಮಲದ ಕೆರೆಯನ್ನು ವೀಕ್ಷಿಸಿದ ಸಚಿವರು ಕೆರೆ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.