ಪತಿಯನ್ನು ಕೊಂದು ಮನೆಯಲ್ಲಿ ಹೂತುಹಾಕಿದ್ದ ಪತ್ನಿ:15 ವರ್ಷಗಳ ಹಳೆಯ ಪ್ರಕರಣ ಬೇಧಿಸಿದ ಪೊಲೀಸರು
Team Udayavani, Jun 3, 2020, 8:57 AM IST
ಗಂಗಾವತಿ: 15 ವರ್ಷಗಳ ಹಿಂದೆ ಪತ್ನಿಯಿಂದಲೆ ತನ್ನ ಗಂಡನನ್ನು ಕೊಲೆ ಮಾಡಿ ಮನೆಯಲ್ಲಿ ಹೂತ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಡಿವೈಎಸ್ಪಿ ಡಾ.ಚಂದ್ರಶೇಖರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಯನಗರದಲ್ಲಿರುವ ಲಕ್ಷ್ಮೀ ಸಿಂಗ್ ತನ್ನ ಗಂಡ ಪಂಪಾಪತಿ ಅಲಿಯಾಸ್ ಶಂಕರ ಸಿಂಗ್ ಅವರನ್ನು ಕೊಲೆ ಮಾಡಿದ್ದಾರೆಂದು ಪುತ್ರಿ ವಿದ್ಯಾಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
ಈ ದೂರಿನ ಮೇರೆಗೆ ಎಸ್.ಪಿ.ಜಿ.ಸಂಗೀತ ಅವರು ಅರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಿ ಅರೋಪಿಗಳಾದ ಲಕ್ಷ್ಮಿಸಿಂಗ್, ರಾಂಪುರ ಪೇಟೆಯ ಅಮ್ಜಾದ್ ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕಿರ್ ಭಾಷಾ, ಶಿವನಗೌಡ ಈಳಿಗನೂರು ಇವರನ್ನು ಬಂಧಿಸಿದ್ದಾರೆ.
ಜಯನಗರದಲ್ಲಿ ವಾಸವಾಗಿದ್ದ ಲಕ್ಷ್ಮೀ ಸಿಂಗ್ ಎನ್ನುವರು ತನ್ನ ಪತಿ ಪಂಪಾಪತಿ ಅಲಿಯಾಸ ಶಂಕರ ಸಿಂಗ್ ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ್ದರು. ಕೊಲೆಗೆ ಸಹಕರಿಸಿದ ಐದು ಜನ ಅರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣದ ಪತ್ತೆ ಕಾರ್ಯದಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪಿ.ಐ. ವೆಂಕಟಸ್ವಾಮಿ, ಪಿಎಸ್ ಐ ಶೈಲಾಜ ಬೇಗಂ, ಸಿಬ್ಬಂದಿಗಳಾದ ಚಿರಂಜೀವಿ, ಅನಿಲ್ ಕುಮಾರ, ವೀರೇಶ್, ಮಹೇಶ, ಮೈಲಾರಪ್ಪ, ರಾಘವೇಂದ್ರ, ಪ್ರಭಾಕರ್, ನರಸಪ್ಪ ಭಾಗವಹಿಸಿದ್ದರು.
ಪ್ರಕರಣ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಪೊಲೀಸರಿಗೆ ಎಸ್.ಪಿ.ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ