ಅಡಿಕೆ ಹಳದಿ ರೋಗ ಬಾಧಿತ ಪ್ರದೇಶ ಸಮೀಕ್ಷೆ: 1,043.38 ಹೆಕ್ಟೇರ್‌ ಬಾಧಿತ ಪ್ರದೇಶ ಗುರುತು


Team Udayavani, Jun 3, 2020, 10:41 AM IST

ಅಡಿಕೆ ಹಳದಿ ರೋಗ ಬಾಧಿತ ಪ್ರದೇಶ ಸಮೀಕ್ಷೆ: 1,043.38 ಹೆಕ್ಟೇರ್‌ ಬಾಧಿತ ಪ್ರದೇಶ ಗುರುತು

ಸುಳ್ಯ: ಅಡಿಕೆ ಹಳದಿ ರೋಗ ಬಾಧಿತ ಪ್ರದೇಶಗಳ ಸಮೀಕ್ಷೆ ನಡೆಸಲಾಗಿದ್ದು, 7,048 ಸರ್ವೆ ನಂಬರ್‌ಗಳ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ 1,043.38 ಹೆಕ್ಟೇರ್‌ ರೋಗ ಬಾಧಿತ ಪ್ರದೇಶವನ್ನು ಗುರುತಿಸಿ ವರದಿ ಸಲ್ಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಳದಿ ಎಲೆ ರೋಗಬಾಧಿತ ಪ್ರದೇಶಗಳ ವ್ಯಾಪ್ತಿ ಮತ್ತು ತೀವ್ರತೆಗಳ ಅಂಕಿಅಂಶಗಳನ್ನು ನಿಖರ ಅಧ್ಯಯನ ಮಾಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಲುವಾಗಿ ಜನವರಿಯಲ್ಲಿ ಸಮೀಕ್ಷೆ ಆರಂಭಿಸಲಾಗಿತ್ತು.

1,043.38 ಹೆಕ್ಟೇರ್‌ ಗುರುತು
ಸಂಪಾಜೆ, ಅರಂತೋಡು, ಆಲೆಟ್ಟಿ, ಉಬರಡ್ಕ, ಮರ್ಕಂಜ, ನೆಲ್ಲೂರು ಕೆಮ್ರಾಜೆ, ಮಡಪ್ಪಾಡಿ, ಕೊಡಿಯಾಲ, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿತ್ತು. 13,993 ಸರ್ವೆ ನಂಬರ್‌ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ್ದು, ಒಟ್ಟು 7,048 ಸರ್ವೆ ನಂಬರ್‌ ವ್ಯಾಪ್ತಿಯಲ್ಲಿ ಹಳದಿ ರೋಗ ಕಂಡುಬಂದಿದೆ. 1,043.38 ಹೆಕ್ಟೇರ್‌ಗಳಲ್ಲಿ ಸರಿಸುಮಾರು 14,29,440 ಅಡಿಕೆ ಮರಗಳು ರೋಗಬಾಧಿತ ಎಂದು ಪರಿಗಣಿಸಲಾಗಿದೆ.

ರೈತರ ಸಭೆ
ಅತ್ಯಧಿಕ ಪ್ರಮಾಣದಲ್ಲಿ ಹಳದಿ ರೋಗಕ್ಕೆ ತುತ್ತಾಗಿ ಅಡಿಕೆ ತೋಟ ಕಳೆದುಕೊಂಡಿರುವ ಸುಳ್ಯ ತಾಲೂಕಿನಲ್ಲಿ ಅದರ ತೀವ್ರತೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಔಷಧ ಇಲ್ಲದ ಕಾರಣ ಅಡಿಕೆ ಕೃಷಿಯೇ ನಾಶದಂಚಿಗೆ ತಲುಪಿದೆ. ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕೆಂಬ ಉದ್ದೇಶದಿಂದ 2019ರ ನ. 2ರಂದು ಅರಂತೋಡಿನಲ್ಲಿ ಶಾಸಕ ಎಸ್‌. ಅಂಗಾರ ಉಪಸ್ಥಿತಿಯಲ್ಲಿ ದ.ಕ. ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ ನೇತೃತ್ವದಲ್ಲಿ ರೈತರ ಸಭೆ ನಡೆದಿತ್ತು. ಸಮಗ್ರ ಸಮೀಕ್ಷೆ ನಡೆಸಿ ಪ್ರದೇಶಗಳ ವ್ಯಾಪ್ತಿ ಮತ್ತು ತೀವ್ರತೆ ಬಗ್ಗೆ ನಿಖರ ಅಂಕಿಅಂಶ ಪಡೆದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿತ್ತು.

ಸಮೀಕ್ಷಾ ತಂಡ ರಚನೆ
ಕಂದಾಯ, ಪಂ.ರಾಜ್‌ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿತ್ತು. ಪ್ರತೀ 700 ಸರ್ವೆ ನಂಬರ್‌ ವ್ಯಾಪ್ತಿಗೆ ಓರ್ವರಂತೆ ಸಮೀಕ್ಷೆ ನಡೆಸಿ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ವರದಿಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿ, ಅಲ್ಲಿಂದ ಜಿ.ಪಂ. ಮೂಲಕ ಸರಕಾರಕ್ಕೆ ಕಳುಹಿಸಲಾಗುತ್ತದೆ.

ನಾಲ್ವರ ನಿರಾಸಕ್ತಿ!
ಸಮೀಕ್ಷಾ ತಂಡದ ಪ್ರತಿಯೊಬ್ಬರಿಗೆ ನಿರ್ದಿಷ್ಟ ಪ್ರದೇಶ ನೀಡಲಾಗಿತ್ತು. ಈ ಪೈಕಿ ಕೊಡಿಯಾಲ, ಸಂಪಾಜೆಯ ತಲಾ ಓರ್ವರು ಮತ್ತು ಆಲೆಟ್ಟಿಯ ಇಬ್ಬರು ತಮ್ಮ ವ್ಯಾಪ್ತಿಯ ಸಮೀಕ್ಷಾ ವರದಿ ನೀಡಿಲ್ಲ. ಕಳೆದ ಡಿಸೆಂಬರ್‌ ಕೊನೆಯ ವಾರದಲ್ಲಿ ಸಮೀಕ್ಷೆ ಆರಂಭಿಸಿ 15 ದಿನಗಳಲ್ಲಿ ವರದಿ ಸಲ್ಲಿಸಲು ಆದೇಶ ನೀಡಲಾಗಿದ್ದು, ಐದು ತಿಂಗಳಾಗುತ್ತ ಬಂದರೂ ಈ ನಾಲ್ವರು ನಿರಾಸಕ್ತಿ ತೋರಿದ್ದಾರೆ.

ನಿರ್ದಿಷ್ಟ ಸರ್ವೆ ನಂಬರ್‌ ವ್ಯಾಪ್ತಿಗೆ ಒಬ್ಬರಂತೆ ಆಯ್ಕೆ ಮಾಡಿ ಆಯ್ದ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ನಾಲ್ವರನ್ನು ಹೊರತುಪಡಿಸಿ ಉಳಿದವರು ವರದಿ ಸಲ್ಲಿಸಿದ್ದಾರೆ.
-ಸುಹಾನ, ತೋಟಗಾರಿಕೆ ಅಧಿಕಾರಿ, ಸುಳ್ಯ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.