ಎಪಿಎಂಸಿ ಕಾಯ್ದೆ ತಿದ್ದುಪಡಿ ಬೇಡ
Team Udayavani, Jun 3, 2020, 4:39 PM IST
ಸಾಂದರ್ಭಿಕ ಚಿತ್ರ
ಸಂಡೂರು: ರೈತರಿಗೆ ಮಾರಕವಾದ ಎಪಿಎಂಸಿ ನೂತನ ಕಾಯಿದೆಯನ್ನು ತಕ್ಷಣ ರದ್ದು ಪಡಿಸಬೇಕು. ಈ ಹಿಂದೆ ಇದ್ದ ನಿಯಮವನ್ನೇ ಪಾಲಿಸಬೇಕು ಎಂದು ತಾಲೂಕು ರೈತಸಂಘದ ಹಸಿರು ಸೇನೆ ಅಧ್ಯಕ್ಷ ಧರ್ಮನಾಯ್ಕ ಒತ್ತಾಯಿಸಿದರು.
ಅವರು ತಹಶೀಲ್ದಾರ್ ರಶ್ಮಿಯವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಸರ್ಕಾರ ರೈತರಿಗೆ ನಷ್ಟವಾಗುವಂಥ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ತರುವ ಮೂಲಕ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವ ಕಾರ್ಯ ಮಾಡುತ್ತಿದೆ. ನೂತನ ಕಾಯಿದೆಯಿಂದ ರೈತರಿಗೆ ಸಿಗುವ ಲಾಭಕ್ಕಿಂತ ಮಾರಾಟಗಾರರಿಗೆ ಹೆಚ್ಚು ಲಾಭವಾಗುವಂಥ ಈ ನಿಯಮ ಸರಿಯಾದುದಲ್ಲ. ಆದ್ದರಿಂದ ತಕ್ಷಣ ಹಿಂಪಡೆಯಬೇಕು. ಎಂದರು.
ಈ ಸಂದರ್ಭದಲ್ಲಿ ಮುಖಂಡ ಶ್ರೀಪಾದ ಸ್ವಾಮಿ ಮಾತನಾಡಿ, ರೈತರ ಖಾತೆಗೆ 5000 ಹಾಕುತ್ತೇವೆ ಎಂದು ಘೋಷಣೆ ಮಾಡಿದ ಮೋದಿಯವರು ಇನ್ನೂ ಸಹ ಅವರ ಖಾತೆಗೆ ಹಣ ಬಿದ್ದಿಲ್ಲ. ತಕ್ಷಣ ಅವರ ಖಾತೆಗೆ ಹಣ ಹಾಕುವ ಮೂಲಕ ರೈತರನ್ನು ಸಂಕಷ್ಟದಿಂದ ಕಾಪಾಡಬೇಕು. ಒಂದು ಕಡೆ ಬೆಳೆದ ಬೆಳೆಗಳಿಗೆ ಮಾರುಕಟ್ಟೆಯೂ ಇಲ್ಲ, ಬೆಲೆಯೂ ಇಲ್ಲವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಆದ್ದರಿಂದ ತಕ್ಷಣ ಪರಿಹಾರ ಧನವನ್ನು ಅವರ ಖಾತೆಗಳಿಗೆ ಹಾಕುವ ಮೂಲಕ ರೈತರನ್ನು ರಕ್ಷಿಸಬೇಕು. ರೈತರಿಗೆ ನೂತನವಾಗಿ ತಂದಿರುವ ಎಪಿಎಂಸಿ ಕಾಯ್ದೆಯನ್ನು ರದ್ದು ಗೊಳಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರು, ಮುಖಂಡರು ಉಪಸ್ಥಿತರಿದ್ದರು. ತಹಶೀಲ್ದಾರ್ ರಶ್ಮಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ