ಧಾರಾಕಾರ ಸುರಿದ ವರ್ಷಧಾರೆ : 154 ಮಿಮೀ ಮಳೆ

ಅತೀ ವೇಗದಲ್ಲಿ ಬೀಸಿದ ಗಾಳಿ ; ನಿಸರ್ಗ ಚಂಡಮಾರುತ ರುದ್ರನರ್ತನ

Team Udayavani, Jun 4, 2020, 7:19 AM IST

ಧಾರಾಕಾರ ಸುರಿದ ವರ್ಷಧಾರೆ : 154 ಮಿಮೀ ಮಳೆ

ಕಾರವಾರ: ಬೈತಖೋಲ್‌ ಬಂದರಿನಲ್ಲಿ ಬೀಡು ಬಿಟ್ಟ ಯಾಂತ್ರಿಕ ದೋಣಿಗಳು

ಕಾರವಾರ: ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ತಾಲೂಕುಗಳಲ್ಲಿ ಭಾರೀ ಗಾಳಿ ಸಹಿತ ಮಳೆ ಬುಧವಾರ ಮಧ್ಯಾಹ್ನದವರೆಗೆ ಸುರಿಯಿತು. ಕಾರವಾರ, ಹೊನ್ನಾವರ
ತಾಲೂಕಿನಲ್ಲಿ ಭಾರೀ ಮಳೆ ಸುರಿಯಿತು. ಅಂಕೋಲಾ, ಕುಮಟಾ , ಭಟ್ಕಳ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ ಘಟ್ಟದ ಮೇಲಿನ ತಾಲೂಕುಗಳಿಗೆ ಹೋಲಿಸಿದರೆ ಮುಂಗಾರಿನ ಅರ್ಭಟದ ದರ್ಶನವಾಯಿತು. ನಿಸರ್ಗ ಚಂಡಮಾರುತ ಮಂಗಳವಾರ ಸಂಜೆ ಹಾಗೂ ರಾತ್ರಿ ಗಂಟೆಗೆ 60ರಿಂದ 70 ಕಿ.ಮೀ.ಬೀಸಿದ ಪರಿಣಾಮ ಅನೇಕ ಮರಗಳು ನಗರದ ವಿವಿಧ ಕಾಲೋನಿಯಲ್ಲಿ ಧರೆಗೆ ಉರುಳಿದವು. ಬುಧವಾರ ಬೆಳಗ್ಗೆಯೂ ಗಾಳಿ ಸಹಿತ ರಭಸದ ಮಳೆ ಸುರಿಯಿತು. ಮಳೆ ಮಧ್ಯಾಹ್ನ 1.30ರ ವರೆಗೆ ಸತತವಾಗಿತ್ತು.

ಸತತ ಮಳೆಯಾದರೂ ಜನ ರೇನ್‌ಕೋಟ್‌ ಧರಿಸಿ ಎಂದಿನಂತೆ ನಗರದ ಪೇಟೆಯಲ್ಲಿ ತಿರುಗಾಡಿ, ಅಗತ್ಯ ವಸ್ತುಗಳನ್ನು ಕೊಂಡರು. ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರದಲ್ಲಿ ಭಾರೀ ಮಳೆ ಸುರಿಯಿತು. ಜೋಯಿಡಾದಲ್ಲಿ ಬಿದ್ದ ಮಳೆ ಅಣೆಕಟ್ಟುಗಳಿಗೆ ಹರಿಯಿತು. ಯಲ್ಲಾಪುರದಲ್ಲಿ ಮಳೆ ಜನ ಜೀವನವನ್ನು ಉಲ್ಲಾಸಗೊಳಿಸಿತು. ಮಂಗಳವಾರದಂತೆ ಬುಧವಾರ ಸಹ ವಿದ್ಯುತ್‌ ಕೈಕೊಟ್ಟಿತ್ತು. ಅಲ್ಲಲ್ಲಿ ಗಾಳಿಗೆ ವಿದ್ಯುತ್‌ ಕಂಬದ ಮೇಲೆ ಬಿದ್ದ ಮರಗಳನ್ನು ಹೆಸ್ಕಾಂ ಸಿಬ್ಬಂದಿ ಸರಿಪಡಿಸುವುದರಲ್ಲಿ ನಿರತರಾಗಿದ್ದರು. ಕಡಲಿಗೆ ಇಳಿಯದ ಮೀನುಗಾರರು: ನಿಸರ್ಗ ಚಂಡಮಾರುತ ರುದ್ರ ನರ್ತನ ತೋರಿಸಿ ಹೋದ ಕಾರಣ ಮೀನುಗಾರರು ಕಡಲಿಗೆ ಇಳಿಯಲಿಲ್ಲ. ಮೀನುಗಾರಿಕಾ ಬೋಟ್‌ಗಳು ದಡದಲ್ಲಿ ಬೀಡು ಬಿಟ್ಟಿದ್ದವು. ಮೀನುಗಾರಿಕೆ ಸ್ತಬ್ಧವಾಗಿತ್ತು.

ಹೊನ್ನಾವರದಲ್ಲಿ ಹಾನಿ ಹೊನ್ನಾವರ: ತಾಲೂಕಿನಾದ್ಯಂತ ಗಾಳಿ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಖರ್ವಾದಲ್ಲಿ ಮನೆಯೊಂದು ಕುಸಿದು 28 ಸಾವಿರ ರೂ.,
ಹಡಿನಬಾಳನಲ್ಲಿ ಒಂದು ಮನೆ ಜಖಂಗೊಂಡು 5 ಸಾವಿರ ರೂ. ಹಾನಿಯಾಗಿದೆ. ಮರ ಬಿದ್ದು ವಿದ್ಯುತ್‌ ಕಂಬಗಳು ಧರೆಗುರುಳುತ್ತಿದ್ದು, ಹೆಸ್ಕಾಂ ಸಿಬ್ಬಂದಿ ವಿದ್ಯುತ್‌ ಸರಿಪಡಿಸಲು
ಹಗಲುರಾತ್ರಿ ಶ್ರಮಪಡುತ್ತಿದ್ದಾರೆ. ತೀರಾ ಗ್ರಾಮೀಣ ಭಾಗದ ವರದಿಗಳು ಇನ್ನೂ ಬರಬೇಕಾಗಿದೆ.

ಮುಂಡಗೋಡನಲ್ಲಿ ಉತ್ತಮ ಮಳೆ ಮುಂಡಗೋಡ: ಬುಧವಾರ ಮಧ್ಯಾಹ್ನದ ವೇಳೆ ತಾಲೂಕಿನಾದ್ಯಂತ ತ್ತಮ ಮಳೆ ಸುರಿಯಿತು. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಸೋಮವಾರ ಹಾಗೂ ಬುಧವಾರ ನಸುಕಿನಲ್ಲಿ ಸಾಧಾರಣ ಮಳೆಯಾಗಿತ್ತು ಬುಧವಾರ ಮಧ್ಯಾಹ್ನ ವೇಳೆಗೆ ಉತ್ತಮ ಮಳೆ ಸುರಿಯಿತು. ತಾಲೂಕಿನ ಶಿಡ್ಲಗುಂಡಿ ಬಳಿಯಿರುವ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಮುಂಡಗೋಡ ಹಾಗೂ ಯಲ್ಲಾಪುರ ಮಧ್ಯ ವಾಹನಗಳ ಸಂಚಾರ ಬಂದ್‌ ಆಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಗೆ ಶಿಡ್ಲಗುಂಡಿಯ ಸೇತುವೆ ಕೊಚ್ಚಿ ಹೋಗಿತ್ತು. ಇದೀಗ ನೂತನ ಸೇತುವೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಆದರೆ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ಚಿಕ್ಕ ಸೇತುವೆ ನಿರ್ಮಿಸಲಾಗಿತ್ತು. ಮೇಲ್ಭಾಗದಲ್ಲಿ ಮಳೆ ಸುರಿದರೆ ನೀರು ಹರಿದು ಬಂದು ತಾತ್ಕಾಲಿಕ ಸೇತುವೆ ಮುಳುಗಡೆಯಾಗುತ್ತಿದ್ದು, ಬುಧವಾರ ಮಧ್ಯಾಹ್ನ ಸುರಿದ ಮಳೆಗೆ ಶಿಡ್ಲಗುಂಡಿಯ
ತಾತ್ಕಾಲಿಕ ಸೇತುವೆ ಮೇಲೆ ನೀರು ಹರಿದು ಸಂಚಾರ ಬಂದ್‌ ಆಯಿತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.