ಹೆಚ್ಚು ಪರೀಕ್ಷೆಯಿಂದ ಹೆಚ್ಚು ಪ್ರಕರಣ ; ಸೋಂಕು ಪೀಡಿತರ ಮನೆಯಷ್ಟೇ ಸೀಲ್‌ಡೌನ್‌


Team Udayavani, Jun 4, 2020, 11:16 AM IST

ಹೆಚ್ಚು ಪರೀಕ್ಷೆಯಿಂದ ಹೆಚ್ಚು ಪ್ರಕರಣ ; ಸೋಂಕು ಪೀಡಿತರ ಮನೆಯಷ್ಟೇ ಸೀಲ್‌ಡೌನ್‌

ಉಡುಪಿ: ಕೋವಿಡ್ ಸಾಮಾಜಿಕ ಪಿಡುಗೂ ಅಲ್ಲ, ಸೋಂಕಿತರು ಕಳಂಕಿತರೂ ಅಲ್ಲ. ಉಡುಪಿ ಜಿಲ್ಲೆ ಮಂಗಳವಾರ ಮೊದಲ ಸ್ಥಾನಕ್ಕೆ ಬರಲು ದೊಡ್ಡ ಪ್ರಮಾಣದಲ್ಲಿ ಮಾದರಿ ಸಂಗ್ರಹ ಮತ್ತು ಪರೀಕ್ಷೆ ನಡೆದಿರುವುದು ಕಾರಣ ಎಂದು ವೈದ್ಯಕೀಯ ಶಿಕ್ಷಣ ಸಚಿವ, ಕೋವಿಡ್ ಉಸ್ತುವಾರಿ ಡಾ| ಸುಧಾಕರ್‌ ಹೇಳಿದರು. ಜಿ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನ ಸಭೆಯ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೋವಿಡ್ ಪಾಸಿಟಿವ್‌ ಇದ್ದವರ ಮನೆಯನ್ನಷ್ಟೇ ಸೀಲ್‌ಡೌನ್‌ ಮಾಡುವ ಸಲಹೆಯನ್ನು ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ರಘುಪತಿ ಭಟ್‌ ನೀಡಿದ್ದು, ಇದನ್ನು ಸರಕಾರದ ಮಟ್ಟದಲ್ಲಿ ಚರ್ಚಿಸಿ ಜಾರಿಗೊಳಿಸಲು ಯತ್ನಿಸಲಾಗುವುದು ಎಂದರು.

ಬೂತ್‌ ಮಟ್ಟದ ಕಾರ್ಯಪಡೆ
ಮುಂದೆ ಕೋವಿಡ್ ನಿಯಂತ್ರಣಕ್ಕಾಗಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ವಾರ್ಡ್‌, ಬೂತ್‌ ಮಟ್ಟದಲ್ಲಿ ಕಾರ್ಯಪಡೆ ರಚಿಸಿ ನಿಗಾ ವಹಿಸಲಾಗುವುದು. 10 ಲಕ್ಷ ಜನರಿಗೆ ಅಗತ್ಯವಿದ್ದರೂ ಅದನ್ನು ನಿಭಾಯಿಸುವ ತಂತ್ರ ಜ್ಞಾನವಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ನೀಡಿದ ಮಾರ್ಗದರ್ಶಿ ಸೂತ್ರಗಳನ್ನು ಮಂಗಳೂರಿಗೂ ಅನ್ವಯಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪರೀಕ್ಷಾ ಸಾಮರ್ಥ್ಯ ಹೆಚ್ಚಳ
ಕೋವಿಡ್ ಆರಂಭದಲ್ಲಿ ರಾಜ್ಯದಲ್ಲಿ ಎರಡೇ ಪ್ರಯೋಗಾಲಯಗಳಿದ್ದವು. ಈಗ 64 ಪ್ರಯೋಗಾಲಯಗಳಾಗಿವೆ. ಮಂಗಳವಾರದವರೆಗೆ 3.31 ಲಕ್ಷ ಮಾದರಿಗಳಲ್ಲಿ 3,792 ಪಾಸಿಟಿವ್‌ ವರದಿಯಾಗಿತ್ತು. ಇದರಲ್ಲಿ ಶೇ. 85 ಪ್ರಕರಣಗಳಲ್ಲಿ ರೋಗಲಕ್ಷಣಗಳಿಲ್ಲ. ಶೇ. 15 ಅಲ್ಪಸ್ವಲ್ಪ ಲಕ್ಷಣಗಳಿವೆ. ಶೇ. 3-4ರಷ್ಟು ಜನರಿಗೆ ಐಸಿಯು ಚಿಕಿತ್ಸೆ ಅಗತ್ಯ. 60 ವರ್ಷ ಪ್ರಾಯ ಮೇಲ್ಪಟ್ಟ ಮಧುಮೇಹ, ಹೃದ್ರೋಗ, ಮೂತ್ರ ಪಿಂಡ ಸಮಸ್ಯೆ ಇರುವವರಿಗೆ ಮಾತ್ರ ತೊಂದರೆಯಾಗುತ್ತಿದೆ. ಮಣಿಪಾಲ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಭೇಟಿ ಕೊಟ್ಟಿದ್ದೇನೆ. ಅಲ್ಲೀಗ ನಾಲ್ಕು ಯಂತ್ರಗಳನ್ನು ಅಳ ವಡಿಸಿದ್ದು, ದಿನಕ್ಕೆ 1,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಪ್ರಯೋಗಾಲಯ ಸ್ಥಾಪನೆ ಯಾದ ಬಳಿಕ ದಿನಕ್ಕೆ ಒಟ್ಟು 1,200 ಪರೀಕ್ಷೆ ನಡೆಸಲು ಸಾಧ್ಯವಾಗುತ್ತದೆ ಎಂದರು.

ಕೇಂದ್ರದ ಮೆಚ್ಚುಗೆ
ರಾಜ್ಯ ಸರಕಾರ ಎಲ್ಲ ನಿರ್ಧಾರಗಳನ್ನೂ ವೈಜ್ಞಾನಿಕವಾಗಿ, ತಜ್ಞರ ಸಲಹೆಯಂತೆಯೇ ತೆಗೆದುಕೊಳ್ಳುತ್ತಿದೆ. ಡ್ಯಾಶ್‌ ಬೋರ್ಡ್‌, ಟೆಲಿ ಮೆಡಿಸಿನ್‌, ಟೆಲಿ ಐಸಿಯು, ಪ್ಲಾಸ್ಮಾ ಥೆರಪಿ ಯಂತಹ ನಾವು ಅಳವಡಿಸಿದ ಮಾರ್ಗಕ್ಕೆ ಕೇಂದ್ರ ಸರಕಾರವೂ ಮೆಚ್ಚುಗೆ ಸೂಚಿಸಿದೆ ಎಂದು ಸಚಿವರು ತಿಳಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಡಿಸಿ ಜಿ. ಜಗದೀಶ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌, ಶಾಸಕರಾದ ಕೆ. ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನಿಲ್‌ ಕುಮಾರ್‌, ಬಿ.ಎಂ. ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.