ಯಾದಗಿರಿ: ತ್ರಿಶತಕದ ಗಡಿ ತಲುಪಿದ ಕೋವಿಡ್ ವೈರಸ್
ನಿನ್ನೆ9 ಜನರಲ್ಲಿ ಸೋಂಕು ಪತ್ತೆ , 299ಕ್ಕೆ ಏರಿಕೆಯಾದ ಸಂಖ್ಯೆ
Team Udayavani, Jun 4, 2020, 11:56 AM IST
ಯಾದಗಿರಿ: ಕೋವಿಡ್ ಮಹಾಮಾರಿ ಜಿಲ್ಲೆಯಲ್ಲಿ ರೌದ್ರ ನರ್ತನ ತೋರುತ್ತಿದ್ದು, ಬುಧವಾರ ಮತ್ತೆ 9 ಜನರಲ್ಲಿ ಒಕ್ಕರಿಸಿದೆ. ಇದೀಗ ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 299ಗೆ ಏರಿಕೆಯಾಗಿದ್ದು, ಈ ಹಿಂದೆ ಎರಡನೇ ಸ್ಥಾನಕ್ಕೇರಿದ್ದ ಜಿಲ್ಲೆ ಐದನೇ ಸ್ಥಾನಕ್ಕಿಳಿದು ತ್ರಿಶತಕದ ಹತ್ತಿರದಲ್ಲಿದೆ.
2 ವರ್ಷದ ಬಾಲಕ ಪಿ-3909 ಸೇರಿದಂತೆ 32 ವರ್ಷದ ಪುರುಷ ಪಿ-3901, 45 ವರ್ಷದ ಪುರುಷ ಪಿ-3902, 40 ವರ್ಷದ ಮಹಿಳೆ ಪಿ-3903, 28 ವರ್ಷದ ಮಹಿಳೆ ಪಿ-3904, 39 ವರ್ಷದ ಪುರುಷ ಪಿ-3905, 23 ವರ್ಷದ ಪುರು ಪಿ-3906, 46 ವರ್ಷದ ಪುರುಷ ಪಿ-3907 ಹಾಗೂ 36 ವರ್ಷದ ಮಹಿಳೆ ಪಿ-3908ರಲ್ಲಿ ಸೋಂಕು ಕಾಣಿಸಿದೆ. ಎಲ್ಲರೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಹಿಂತಿರುಗಿದವರೇ ಆಗಿದ್ದಾರೆ.
ಬುಧವಾರದ 1040 ಜನರ ವರದಿ ನೆಗೆಟಿವ್ ಬಂದಿದ್ದು, ಈವರೆಗೆ 9114 ಮಾದರಿಗಳ ವರದಿ ನೆಗೆಟಿವ್ ಬಂದಿವೆ. 68 ಜನರ ಹೊಸ ಮಾದರಿ ಸಂಗ್ರಹಿಸಲಾಗಿದ್ದು, ಇನ್ನು 8621 ಜನರ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಕೋವಿಡ್19 ಖಚಿತಪಟ್ಟ ಸೋಂಕಿತರಲ್ಲಿ 28 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 774 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2107 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 5 ಕಂಟೇನ್ಮೆಂಟ್ ಝೋನ್ ರಚಿಸಲಾಗಿದೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 95 ಜನರು, ಶಹಾಪುರ ಕೊರೊನಾ ಕೇರ್ ಸೆಂಟರ್ನಲ್ಲಿ 61 ಜನ, ಸುರಪುರ ಕೋವಿಡ್ ಕೇರ್ ಸೆಂಟರ್ನಲ್ಲಿ 14 ಹಾಗೂ ಏಕಲವ್ಯ ಕೊರೊನಾ ಕೇರ್ ಸೆಂಟರ್ನಲ್ಲಿ 90 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 67 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್ಗಳಲ್ಲಿ ಒಟ್ಟು 3405 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.
ಸೋಂಕಿತರೆಲ್ಲರೂ ಜಿಲ್ಲೆಯ ಶಹಾಪುರ ತಾಲೂಕಿನವರಾಗಿದ್ದಾರೆ. ಕ್ರಮವಾಗಿ ನಾಲ್ವರು ದಾರಿಗುಡ್ಡ ಉಕ್ಕಿನಾಳ ತಾಂಡಾದವರಾಗಿದ್ದು, 2
ವರ್ಷದ ಬಾಲಕ ಸೇರಿದಂತೆ ಐವರು ಹಾಲಗೇರಾ ಗ್ರಾಮದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Kollywood: ಕಮಲ್ ಹಾಸನ್ ʼಇಂಡಿಯನ್ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?