ಸಂತೋಷ ನಮ್ಮ ಕೈಯಲ್ಲಿದೆ…


Team Udayavani, Jun 4, 2020, 6:40 PM IST

ಸಂತೋಷ ನಮ್ಮ ಕೈಯಲ್ಲಿದೆ…

ಕನಸುಗಳ ಬೆನ್ನತ್ತಿ ಓಡುತ್ತಿರುವ ಈಗಿನ ಯುವ ಜನಾಂಗಕ್ಕೆ ಸಂತೋಷ ಮಾತ್ರ ಕೊಂಡುಕೊಳ್ಳಲು ಸಿಗುವುದಿಲ್ಲ ಎಂಬುದೇ ದುಃಖದ ವಿಷಯ. ದಿನವೂ ಕೆಲಸ ಕೆಲಸ ಎಂದು ಒತ್ತಡದ ಜೀವನ ಸಾಗಿಸುತ್ತಿರುವವರು ಮನೆ, ಗೆಳೆಯ/ತಿ, ಮಕ್ಕಳು ಎಲ್ಲರಿಗಿಂತ ಮಿಗಿಲಾಗಿ ತಮ್ಮ ಕೆಲಸವನ್ನು ಪ್ರೀತಿಸಲು ಕಲಿತಿರುತ್ತಾರೆ. ಕೆಲಸ ಮಾಡುವುದು ತಪ್ಪಲ್ಲ ಆದರೆ ನನಗೆ ಸಂತೋಷವೆಂಬುದೇ ದೇವರು ಕೊಟ್ಟಿಲ್ಲ ಯಾವಾಗಲೂ ನಾನು ಒಂದೇ ರೀತಿಯ ಬದುಕು ನಡೆಸುತ್ತಿರುವೇ ಎನ್ನುವವರು ಸ್ವಲ್ಪ ಸಮಯವನ್ನು ಮೀಸಲಿರಿಸಲು ಕಲಿತಲ್ಲಿ ಸಂತೋಷ ತನ್ನಿಂದ ತಾನಾಗಿಯೇ ದೊರಕುತ್ತದೆ.

ಹಲವರಲ್ಲಿ ಈ ಸಮಸ್ಯೆ ಕಂಡು ಬರುತ್ತದೆ. ಸಂತೋಷ ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ ಬದಲಾಗಿ ನಾವೇ ಅದನ್ನು ಅರಸಲು ಕಲಿಯಬೇಕು. ಇಂದಿನ ಸಮಯ ಕಳೆದು ಹೋಗುವುದಕ್ಕಿಂತ ಮುಂಚೆ ದಿನದ ಅನುಭವವನ್ನು ಮೇಲುಕು ಹಾಕಲು ಸಿದ್ಧಗೊಂಡಿರಬೇಕು. ಆ ನೆನಪುಗಳಲ್ಲಿ ನಮಗೆ ಸಂತೋಷದ ನೆನಪುಗಳೇ ಹೆಚ್ಚಿರಬೇಕು ಆಗ ಮಾತ್ರ ಬದುಕನ್ನು ನಾವಂದು ಕೊಂಡ ಹಾಗೇ ಜೀವಿಸಲು ಸಾಧ್ಯ. ಪ್ರತಿಯೊಬ್ಬರಿಗೂ ದುಖಃದ ಸನ್ನೀವೇಶ ಬಂದೇ ಬರುವುದು. ಆದರೆ ಅದನ್ನು ಹೇಗೆ ನಾವು ನಿಭಾಯಿಸಬಲ್ಲೇವು ಎಂಬುದರ ಮೇಲೆ ನಮ್ಮ ಬದುಕು ನಿರ್ಣಯವಾಗುತ್ತದೆ.

ಕಹಿ ನೆನಪುಗಳನ್ನು ಮರೆವಷ್ಟು ಗಟ್ಟಿ ಮನಸ್ಸು ಸಿಹಿ ನೆನಪುಗಳ ಮೇಲುಕು ಹಾಕುವಷ್ಟು ಮೃದು ಮನಸ್ಸು ಎರಡು ಅವಶ್ಯಕ. ಯಾವುದಾದರೂ ಒಂದರಲ್ಲಿ ಏರಿಳಿತವಾದಲ್ಲಿ ಬದುಕು ಏರುಪೇರಾಗಲು ಶುರುವಾಗುತ್ತದೆ. ನಗರಗಳಲ್ಲಿ ಅತಿ ಹೆಚ್ಚು ಮಾನಸಿಕ ರೋಗಗಳು ಕಾಣಸಿಗುವುದು ಈ ಕಾರಣಕ್ಕೆ. ಮನುಷ್ಯನಿಗೆ ಯಾವಾಗ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲವೋ ಆಗ ಕಾಯಿಲೆಗಳ ಪ್ರವೇಶವಾಗುತ್ತದೆ.

ಯೋಚನೆಗಳು ಅಷ್ಟೇ ಸಮಸ್ಯೆಯನ್ನು ಬಗೆಹರಿಸುವಂತದ್ದಾಗಿದ್ದರೆ ಮಾತ್ರ ಒಳ್ಳೆಯದು ಇಲ್ಲವಾದಲ್ಲಿ ನಿಮ್ಮ ಯೋಚನೆಗಳೇ ಸಾವಿರ ಸಮಸ್ಯೆಗಳನ್ನು ಹುಟ್ಟುಹಾಕಿದಲ್ಲಿ ಸಂತೋಷ ಮೂರು ಮೈಲಿ ದೂರದಲ್ಲಿ ನಿಂತಿರುತ್ತದೆ. ಪ್ರತಿ ಬಾರಿ ನೀವು ಸೋತಾಗಲು ಬೇಸರ ಪಟ್ಟುಕೊಳ್ಳದೆ ಅನುಭವ ಎಂದು ತೆಗೆದುಕೊಳ್ಳಿ ಆಗ ನೀವು ನಿಮ್ಮನ್ನು ಗಟ್ಟಿ ಮಾಡಿಕೊಳ್ಳುವುದಲ್ಲದೇ ಸಕಾರಾತ್ಮಕವಾಗಿ ಯೋಚಿಸಲು ಕಲಿಯುತ್ತೀರಿ ಅಂದಾಗ ಮಾತ್ರ ಬದುಕು ಒಳ್ಳೆಯ ರೀತಿಯಲ್ಲಿ ಸಾಗಲು ಸಾಧ್ಯ.

ಎಲ್ಲಿಯವರೆಗೆ ನಾವು ನಕಾರಾತ್ಮಕ ಚಿಂತನೆಯನ್ನು ಹೆಚ್ಚು ಹೆಚ್ಚು ಮಾಡುತ್ತೇವೆ ಅಲ್ಲಿವರೆಗೆ ನಮಗೆ ಸಂತೋಷದ ಸುಳಿವಿರುವುದಿಲ್ಲ ಆದ್ದರಿಂದ ಸಕಾರಾತ್ಮಕತೆಯನ್ನು ಮೈಗೂಡಿಸಿಕೊಳ್ಳಿ. ಆಗ ಪ್ರತಿದಿನವೂ ನಿಮಗೆ ಹೊಸ ದಿನವಾಗುತ್ತದೆ ಇದರಲ್ಲಿ ಸಂಶಯವಿಲ್ಲ.

-ಅನುಪ್ರೀತ್‌ ಭಟ್‌, ಶಿರಸಿ

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.