ಅಂಡರ್ಪಾಸ್ ನಿರ್ಮಾಣಕ್ಕೆ ಆಗ್ರಹ
Team Udayavani, Jun 5, 2020, 7:33 AM IST
ಚನ್ನಪಟ್ಟಣ: ತಾಲೂಕಿನ ಪಟ್ಲು ಮೂಲಕ ಕೋಮನಹಳ್ಳಿ, ದೇವರಹೊಸಹಳ್ಳಿಗೆ ಸಾಗುವ ರಸ್ತೆ ಬಂದ್ ಮಾಡಿ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲಾಗುತ್ತಿದೆ. ಹೀಗಾಗಿ ಅಂಡರ್ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ನಿತ್ಯ ನೂರಾರು ಮಂದಿ ಈ ರಸ್ತೆಯಿಂದಲೇ ಸಂಚರಿಸುತ್ತಿದ್ದು, ಇದೀಗ ರಸ್ತೆ ಮುಚ್ಚಿ ಹೆದ್ದಾರಿ ಕಾಮಗಾರಿ ನಡೆಸಲಾಗುತ್ತಿದೆ.
ಪಟ್ಲು ಭಾಗದಿಂದ ರಾಮನಗರ ಬೆಂಗಳೂರು ಕಡೆಗೆ ಈ ರಸ್ತೆ ಬಳಕೆಯಾಗುತ್ತಿದೆ. ರಸ್ತೆಯಿದ್ದರೂ ಮುಂದಾಲೋಚನೆಯಿಲ್ಲದೇ ಕಾಮಗಾರಿ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷಿ ಭೂಮಿ ಅಕ್ಕಪಕ್ಕದಲ್ಲಿದ್ದು ನಿತ್ಯ ಈ ರಸ್ತೆ ಅವಶ್ಯವಾಗಿದೆ. ಇಲ್ಲಿ ಅಂಡರ್ಪಾಸ್ ಮಾಡದಿದ್ದರೆ ನಾಲ್ಕೈದು ಕಿ.ಮೀ. ಬಳಸಿ ಹೋಗಬೇಕು.
ಹೀಗಾಗಿ ಕಾಮಗಾರಿ ನಿಲ್ಲಿಸಿ, ಯೋಜನೆಯಲ್ಲಿ ಅಂಡರ್ಪಾಸ್ ಸೇರ್ಪಡೆ ಮಾಡಿ, ನಂತರ ಕಾಮಗಾರಿ ಆರಂಭಿಸ ಬೇಕೆಂದು ಸಂದರ್ಭದಲ್ಲಿ ಗ್ರಾಮಸ್ಥರು ಒತ್ತಾಯಿಸಿದರು. ಕಾಮಗಾರಿ ನಿರ್ವಹಿಸುತ್ತಿದ್ದ ಸಂಸ್ಥೆಯ ವ್ಯವಸ್ಥಾಪಕರು ಸ್ಥಳಕ್ಕೆ ಭೇಟಿ ನೀಡಿ, ಈ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಪ್ರತಿಭಟನಾಕಾರರು ಮಣಿಯಲಿಲ್ಲ. ಅಂಡರ್ಪಾಸ್ ಮಾಡಲೇಬೇಕು.
ಜತೆಗೆ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ ವಾಪಾಸಾಗಿದ್ದಾರೆ. ದೇವರಹೊಸಹಳ್ಳಿ ಚೇತನ್, ಗಿರೀಶ್, ರಾಂಪುರ ರಾಜಣ್ಣ, ಸ್ವಾಮಿ, ಕೋಮನಹಳ್ಳಿ ಜಯರಾಜ್, ಗುರು, ಪಟ್ಲು ನಾಗೇಂದ್ರ, ಕಾಂತರಾಜು ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?